ವಿಶ್ವ ಕನ್ನಡ ಸಮ್ಮೇಳನಕ್ಕೆ ಇನ್ಫಿ ಮೂರ್ತಿ ಏಕೆ?

ಮಾಹಿತಿ ತಂತ್ರಜ್ಞಾನ ಉದ್ಯಮ ಕ್ಷೇತ್ರ ಹೊರತುಪಡಿಸಿದರೆ ನಾರಾಯಣಮೂರ್ತಿ ಕನ್ನಡಕ್ಕೆ ನೀಡಿದ ಡುಗೆಯಾದರೂ ಏನು? ಕನ್ನಡದಲ್ಲಿ ಒಂದೇ ಒಂದು ತಂತ್ರಾಂಶವೂ ಅವರ ಬಹುರಾಷ್ಟ್ರೀಯ ಕಂಪೆನಿಯಿಂದ ಬಂದಿಲ್ಲ ಎಂದು ಬರಗೂರು ರಾಮಚಂದ್ರಪ್ಪ ಮುಖ್ಯಮಂತ್ರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
ಆಂಗ್ಲ ಮಾಧ್ಯಮ ಬೇಕೆಂದ ಮೂರ್ತಿ: ಮೊದಲನೆ ತರಗತಿಯಿಂದಲೆ ಶಿಕ್ಷಣದಲ್ಲಿ ಆಂಗ್ಲ ಮಾಧ್ಯಮ ಇರಬೇಕೆಂದು ನಾರಾಯಣಮೂರ್ತಿ ಪ್ರಬಲವಾಗಿ ಪ್ರತಿಪಾದಿಸುತ್ತಾ ಬಂದಿದ್ದಾರೆ. ಅಲ್ಲದೆ ತಮ್ಮ ಕಂಪೆನಿಯ ಉದ್ಯೋಗಿಗಳಿಗಾಗಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಗಳನ್ನು ಪ್ರಾರಂಭಿಸಲು ಎಸ್.ಎಂ.ಕೃಷ್ಣ ಮುಖ್ಯಮಂತ್ರಿಯಾಗಿದ್ದ ವೇಳೆ, ಶಿಕ್ಷಣ ಮಾಧ್ಯಮ ನಿಯಮವನ್ನೆ ಬದಲಾಯಿಸಲು ಒತ್ತಡ ತಂದು ವಿಫಲರಾದದ್ದು ತಮಗೆ ತಿಳಿದಿದೆ.
ಅಲ್ಲದೆ, ಆದಾಯ ತೆರಿಗೆ ಇಲಾಖೆಗೆ ತಪ್ಪು ಮಾಹಿತಿ ನೀಡಿ ರಿಯಾಯಿತಿ ಪಡೆದ ಇನ್ಫೋಸಿಸ್ನಿಂದ 450 ಕೋಟಿ ರೂ.ವಸೂಲಿಗೆ ಆದೇಶವಾಗಿರುವುದನ್ನೂ ಸರಕಾರ ಗಮನಿಸಬೇಕು. ಆದುದರಿಂದ, ರಾಯಣಮೂರ್ತಿಯವರಿಂದ ವಿಶ್ವ ಕನ್ನಡ ಸಮ್ಮೇಳನ ಉದ್ಘಾಟನೆ ಮಾಡಿಸದೆ, ಅವರನ್ನು ಅತಿಥಿಯಾಗಿ ಆಹ್ವಾನಿಸುವಂತೆ ಬರಗೂರು ರಾಮಚಂದ್ರಪ್ಪ ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ.
ನಮ್ಮಲ್ಲಿ ಶ್ರೇಷ್ಠ ಸಾಹಿತಿಗಳಿಲ್ಲವೇ? : ರಾಷ್ಟ್ರಕವಿ ಡಾ.ಜಿ.ಎಸ್.ಶಿವರುದ್ರಪ್ಪ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿಗಳಾದ ಡಾ.ಅನಂತಮೂರ್ತಿ, ಡಾ.ಗಿರೀಶ್ ಕಾರ್ನಾಡ್, ಹಿರಿಯರಾದ ಪಾಟೀಲ ಪುಟ್ಟಪ್ಪ, ದೇಜಗೌ, ಚಿಮೂ, ಕವಿಗಳಾದ ನಿಸಾರ್ ಅಹ್ಮದ್ ಅವರಲ್ಲಿ ಯಾರನ್ನಾದರೂ ಸಮ್ಮೇಳನದ ಉದ್ಘಾಟನೆ ಮಾಡಲು ಸರಕಾರ ಕೋರಬಹುದಾಗಿತ್ತು.
ಇಲ್ಲದಿದ್ದಲ್ಲಿ, ಒಬ್ಬ ಜನಪದ ಕಲಾವಿದನಿಗೆ ಈ ಅವಕಾಶ ನೀಡುವ ಮೂಲಕ ಕನ್ನಡ ಜನಪದಕ್ಕೆ ಗೌರವ ಸೂಚಿಸಬಹುದಿತ್ತು. ಅದರ ಬದಲು ಕೇವಲ ಉದ್ಯಮಿಯೊಬ್ಬರಿಗೆ ಸಮ್ಮೇಳನ ಉದ್ಘಾಟಿಸಲು ಅವಕಾಶ ನೀಡಿರುವುದು ಕನ್ನಡ ಜನಪದ, ಸಂಸ್ಕೃತಿಗೆ ತೋರಿದ ನಿರ್ಲಕ್ಷ ಹಾಗೂ ಅವಮಾನ ಎಂದು ಎಂದು ಬರಗೂರು ಅಭಿಪ್ರಾಯಪಟ್ಟಿದ್ದಾರೆ. [ಬೆಳಗಾವಿ ಸಮ್ಮೇಳನ ಲೇಖನಗಳು]
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications