ಬೆಳಗಾವಿ ಕನ್ನಡ ಸಮ್ಮೇಳನ: ವಾಟಾಳ್ ಏನ್ ಹೇಳ್ತಾರೆ?

50 ವರ್ಷಗಳ ಸುದೀರ್ಘ ಹೋರಾಟದ ನಂತರವೂ ರಾಜ್ಯದಲ್ಲಿ ಕನ್ನಡ ದುಸ್ಥಿತಿಯಲ್ಲಿಯೇ ಇದೆ. ಇನ್ಫೋಸಿಸ್ ನಾರಾಯಣ ಮೂರ್ತಿ ಅವರ ಅಮೃತ ಹಸ್ತದಿಂದ ಬೆಳಗಾವಿ ಸಮ್ಮೇಳನ ಉದ್ಘಾಟಿಸುತ್ತಿರುವುದರ ಪಾವಿತ್ರ್ಯತೆಯಾದರೂ ಏನು ಎಂಬುದೇ ಅರ್ಥವಾಗದು. ಅದೆಲ್ಲಾದರೂ ಹೋಗಲಿ ಎಂದರೆ ಇದೆಂತಹುದು, ಬಾಲಿವುಡ್ ಬೆಡಗಿ ಐಶ್ವರ್ಯ ರೈ ಮತ್ತು ತಮಿಳ್ ಸೆಲ್ವಿ ಜಯಲಲಿತಾ ಅವರನ್ನು ಆಹ್ವಾನಿಸುವುದು? ಅವರೇನೂ ಅಷ್ಟು ದೊಡ್ಡವರೇ? ಹೋಗಲಿ ಅವರು ಕನ್ನಡಕ್ಕೆ ಮಾಡಿರುವ ಸೇವೆಯಾದರೂ ಏನು ಎಂದು ಅವರು ಖಾರವಾಗಿ ಪ್ರಶ್ನಿಸಿದ್ದಾರೆ.
ಇತ್ತೀಚೆಗೆ ರಾಜ್ಯಸಭೆಗೆ ಬಾಲಿವುಡ್ ಅಭಿನೇತ್ರಿ ಹೇಮಾಮಾಲಿನಿ ರಾಜ್ಯದಿಂದ ಚುನಾಯಿತರಾಗಿರುವ ಬಗ್ಗೆ ಪ್ರತಿಕ್ರಿಯಿಸಿರುವ ವಾಟಾಳ್ ಅವರು ಏಕೆ, ಕನ್ನಡದ ನೆಲದಲ್ಲಿ ಕನಸಿನ ಕನ್ಯೆಯರು ಇಲ್ಲವೇ?! ಎಂಬ ತುಂಟ ಪ್ರಶ್ನೆಯನ್ನು ಎತ್ತಿದ್ದಾರೆ. ಕನ್ನಡ ಕೇಂದ್ರ ಚಳವಳಿ ಸಮಿತಿ (KKCS) ಗುರುವಾರ ಇಲ್ಲಿ ಆಯೋಜಿಸಿದ್ದ ವಿಚಾರಗೋಷ್ಠಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅತಿಥಿ ಪಾತ್ರಕ್ಕೆ ಐಶ್ವರ್ಯ ಅಸ್ತು: ಈ ಮಧ್ಯೆ, ಬೆಳಗಾವಿ ಸಮ್ಮೇಳನದಲ್ಲಿ ಅತಿಥಿ ಪಾತ್ರದಲ್ಲಿ ಪಾಲ್ಗೊಳ್ಳುವುದಕ್ಕೆ ಬಾಲಿವುಡ್ ಚೆಲುವೆ ಐಶ್ವರ್ಯ ರೈ ಒಪ್ಪಿಗೆ ಸೂಚಿಸಿದ್ದಾರೆ. ಸಮ್ಮೇಳನದಲ್ಲಿ ಪಾಲ್ಗೊಳ್ಳುವಂತೆ ಕೋರಿ ಸಮ್ಮೇಳನದ ವಿಶೇಷಾಧಿಕಾರಿ ಐಎಂ ವಿಠ್ಠಲಮೂರ್ತಿ ಅವರು ಸರಕಾರದ ಪರವಾಗಿ ಮಂಗಳೂರು ಮೂಲದ ಐಶ್ವರ್ಯಗೆ ವಿಶೇಷ ಆಮಂತ್ರಣ ನೀಡಿದ್ದರು. ಇದೇ ಸಂದರ್ಭದಲ್ಲಿ, ಮಾರ್ಚ್ 11ರಿಂದ ಆರಂಭವಾಗುವ ಮೂರು ದಿನಗಳ ವಿಶ್ವ ಕನ್ನಡ ಸಮ್ಮೇಳನವನ್ನು ಸ್ವತಃ ಐಶ್ವರ್ಯ ರೈ ಅವರೇ ಉದ್ಘಾಟಿಸುತ್ತಾರೆ ಎಂಬ ಊಹಾಪೋಹವೂ ಎದ್ದಿತ್ತು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications