ಬೆಳಗಾವಿ ಸಮ್ಮೇಳನ ಗೋಷ್ಠಿಗಳು, ವಿದ್ವಾಂಸರು

ಪ್ರೊ. ಅ.ರಾ.ಮಿತ್ರ ಅವರ ಅಧ್ಯಕ್ಷತೆಯಲ್ಲಿ ನಗುನಗುತಾ ಬಂದೇವಾ ಎಂಬ ಹಾಸ್ಯ ಗೋಷ್ಠಿ; ಸಾಂಸ್ಕೃತಿಕ ಕರ್ನಾಟಕ ; ಸಮಕಾಲೀನ ಜಗತ್ತು ಮತ್ತು ಮಹಿಳೆ ; ಹೊರನಾಡು ಮತ್ತು ಹೊರದೇಶದ ಕನ್ನಡಿಗರು ; ಗಡಿನಾಡ ಕನ್ನಡಿಗರು ; ಕನ್ನಡ ಆಡಳಿತ ಭಾಷೆ ; ಜಾಗತೀಕರಣ ಕರ್ನಾಟಕ ; ಜ್ಞಾನ ವಿಜ್ಞಾನ ತಂತ್ರಜ್ಞಾನ ಕರ್ನಾಟಕ ; ಕೃಷಿ ಸಾಧನೆ ಸವಾಲು ; ಸಮೂಹ ಮಾಧ್ಯಮ ಸಾಮಾಜಿಕ ಕಾಳಜಿ ; ಕನಸಿನ ಕರ್ನಾಟಕ ; ದೇಸಿ ಚಿಂತನೆ ; ದಲಿತ ಸಂಸ್ಕೃತಿ ಅನನ್ಯತೆ ಎಂಬ ಗೋಷ್ಠಿಗಳ ಜೊತೆಗೆ ಕನ್ನಡ ಪುಸ್ತಕೋದ್ಯಮ ಕನ್ನಡ ಚಿತ್ರೋದ್ಯಮ ಕುರಿತ ವಿಚಾರಸಂಕಿರಣಗಳು ಹಾಗೂ ಮಕ್ಕಳಿಗಾಗಿ ವಿಶೇಷವಾದ ಗೋಷ್ಠಿಗಳಿವೆ.
ಈ ಗೋಷ್ಠಿಗಳಲ್ಲಿ ಒಟ್ಟು ಸುಮಾರು 331ಕ್ಕೂ ಹೆಚ್ಚು ವಿದ್ವಾಂಸರು, ಕವಿಗಳು, ಸಂಸ್ಕೃತಿ ಚಿಂತಕರು ಭಾಗವಹಿಸುತ್ತಿದ್ದಾರೆ. ಇದಲ್ಲದೆ 400ಕ್ಕೂ ಹೆಚ್ಚು ಪುಸ್ತಕ ಮಳಿಗೆಗಳು ; 15,000 ಅಮೂಲ್ಯ ಕನ್ನಡ ಗ್ರಂಥಗಳ ಪ್ರದರ್ಶನ ; ವಿವಿಧ ಇಲಾಖೆಗಳಿಂದ ಪ್ರಗತಿ ದರ್ಶನ ಮಳಿಗೆಗಳು ; ಶಿಲ್ಪಕಲೆ ; ಚಿತ್ರಕಲೆ ಕುರಿತ ಪ್ರಾತ್ಯಕ್ಷಿಕ ಶಿಬಿರಗಳು ; ರಂಗಭೂಮಿ ; ಕನ್ನಡ ಚಿತ್ರೋದ್ಯಮ ; ಜಾನಪದ ಕ್ಷೇತ್ರ ಕುರಿತಂತೆ ವಸ್ತುಪ್ರದರ್ಶನ ; ಅಪರೂಪದ ದಾಖಲೆಗಳು ; ಅಂಚೆಚೀಟಿ ಹಾಗೂ ನಾಣ್ಯಗಳ ಕುರಿತ ಪ್ರದರ್ಶನ ಏರ್ಪಡಿಸಲಾಗಿದೆ.
ಒಟ್ಟಾರೆ 5500 ಜನ ಜನಪದ ಕಲಾವಿದರು, ಸಂಗೀತ ನೃತ್ಯ ಮುಂತಾದ ಕಲಾವಿದರು ಭಾಗವಹಿಸುತ್ತಿದ್ದಾರೆ. ಕನ್ನಡತೇರು ಮೆರವಣಿಗೆ ವಿಶ್ವ ಕನ್ನಡ ಸಮ್ಮೇಳನದ ಅಂಗವಾಗಿ ಪ್ರತಿಜಿಲ್ಲೆಯಿಂದ ವಿಶ್ವ ಕನ್ನಡ ತೇರು ಹೊರಟು ಬೆಳಗಾವಿಗೆ ಮಾರ್ಚ್ 10ರಂದು ಸೇರಲಿವೆ. 11ರಂದು ಆಕರ್ಷಕವಾದ ಬೃಹತ್ ಮೆರವಣಿಗೆಯನ್ನು ಬೆಳಗಾವಿ ನಗರದಲ್ಲಿ ಏರ್ಪಡಿಸಲಾಗಿದೆ. ವಿಶ್ವ ಕನ್ನಡ ಸಮ್ಮೇಳನದ ಅಂಗವಾಗಿ 101 ಕನ್ನಡ ಗ್ರಂಥಗಳು, ಸಂದರ್ಭ ಗ್ರಂಥ ಪುನರಾವಲೋಕನ ಹಾಗೂ 36 ಜಾನಪದ ಯಕ್ಷಗಾನ ಗ್ರಂಥಗಳು ಬಿಡುಗಡೆಯಾಗಲಿವೆ. [ಬೆಳಗಾವಿ ಸಮ್ಮೇಳನದ ಸುದ್ದಿಬಿಂಬ]
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications