Get Updates
Get notified of breaking news, exclusive insights, and must-see stories!

ಯಾರ್ರೀ ಬೆಳಗಾವಿ, ರೈಟ್ ರೈಟ್ ! ಕನ್ನಡಿಗರಿಗೆ ವಿಶೇಷ ಪ್ರಯಾಣ

Transportation Kannada Sammelana
ಬೆಂಗಳೂರು, ಮಾ. 8: ಬೆಳಗಾವಿಯಲ್ಲಿ ಮಾರ್ಚ್ 11ರಿಂದ ಜರುಗಲಿರುವ ವಿಶ್ವ ಕನ್ನಡ ಸಮ್ಮೇಳನದಲ್ಲಿ ಭಾಗವಹಿಸುವವರಿಗಾಗಿ ವಿಶೇಷ ಬಸ್, ವಿಮಾನ ಮತ್ತು ರೈಲಿನ ವ್ಯವಸ್ಥೆ ಮಾಡಲಾಗಿದೆ ಎಂದು ಸಮ್ಮೇಳನದ ವಿಶೇಷಾಧಿಕಾರಿ ಐ ಎಂ ವಿಠ್ಠಲಮೂರ್ತಿ ತಿಳಿಸಿದ್ದಾರೆ. ವಿಶೇಷ ವಿಮಾನವು ಮಾರ್ಚ್ 11ರಂದು ಬೆಳಗ್ಗೆ 10.40ಕ್ಕೆ ಬೆಂಗಳೂರಿನಿಂದ ಹೊರಟು ಮಧ್ನಾಹ್ನ 12.10ಕ್ಕೆ ಬೆಳಗಾವಿ ತಲುಪಲಿದೆ. ಮಾರ್ಚ್ 13ರಂದು ರಾತ್ರಿ 8.50ಕ್ಕೆ ಬೆಳಗಾವಿಯಿಂದ ಹೊರಟು ರಾತ್ರಿ 10.30ಕ್ಕೆ ಬೆಂಗಳೂರು ಸೇರಲಿದೆ.

ವಿಶೇಷ ರೈಲು ಮಾರ್ಚ್ 10ರಂದು ರಾತ್ರಿ 8 ಗಂಟೆಗೆ ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಿಂದ ಹೊರಟು ಮಾರ್ಚ್ 11ರಂದು ಬೆಳಗ್ಗೆ 8 ಗಂಟೆಗೆ ಬೆಳಗಾವಿ ತಲುಪಲಿದೆ. ಮಾರ್ಚ್ 13ರಂದು ರಾತ್ರಿ 9.30ಕ್ಕೆ ಬೆಳಗಾವಿ ಬಿಡಲಿರುವ ರೈಲು 14ರ ಬೆಳಗ್ಗೆ ಬೆಂಗಳೂರು ಸೇರಲಿದೆ. ಎರಡನೇ ಶ್ರೇಣಿಯ, ಮೂರನೇ ಶ್ರೇಣಿಯ ಬೋಗಿಗಳು ಮತ್ತು ಸಾಮಾನ್ಯ ದರ್ಜೆ ಬೋಗಿಗಳು ಸೇರಿದಂತೆ 18 ಬೋಗಿಗಳನ್ನು ಈ ವಿಶೇಷ ರೈಲು ಒಳಗೊಂಡಿರುತ್ತದೆ.

ಶೇ. 30 ರಿಯಾಯಿತಿ: ವಿಶೇಷ ಹವಾನಿಯಂತ್ರಿತ ರೈಲಿನಲ್ಲಿ ಪ್ರಯಾಣಿಸುವ ವಿಶ್ವ ಕನ್ನಡ ಸಮ್ಮೇಳನದ ನೋಂದಾಯಿತ ಪ್ರತಿನಿಧಿಗಳಿಗೆ ರಾಜ್ಯ ಸರಕಾರ ರೈಲಿನ ಎಲ್ಲ ದರ್ಜೆಯ ಪ್ರಯಾಣ ದರದಲ್ಲಿ ಶೇ. 30ರಷ್ಟು ರಿಯಾಯಿತಿ ಪ್ರಕಟಿಸಿದೆ. ಟಿಕೆಟ್ ಗಳನ್ನು ಬೆಂಗಳೂರಿನ ಕಾರ್ಪೊರೇಶನ್ ವೃತ್ತದಲ್ಲಿರುವ ಬಾದಾಮಿ ಹೌಸ್ ನ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಕಚೇರಿಯಲ್ಲಿ ಕಾಯ್ದಿರಿಸಬಹುದು. ದೂರವಾಣಿ: 080- 4334 4334/ 4346 4346.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+