ಬೆಳಗಾವಿಯಿಂದ ದಟ್ಸ್ ಕನ್ನಡ ನೇರ ಪ್ರಸಾರ

ನಾಳೆಯಿಂದ ಮೂರು ದಿನಗಳ ಕಾಲ ಬೆಳಗಾವಿಯಲ್ಲಿ ನಡೆಯಲಿರುವ ಎರಡನೇ ವಿಶ್ವ ಕನ್ನಡ ಸಮ್ಮೇಳನಕ್ಕೆ ಸಮಸ್ತ ಕನ್ನಡಿಗರು ಸಿದ್ಧರಾಗಿದ್ದಾರೆ. ಸುಮಾರು 50 ಕೋಟಿ ರು. ವೆಚ್ಚದಲ್ಲಿ ವ್ಯವಸ್ಥೆಯಾಗಿರುವ ಸಮ್ಮೇಳನಕ್ಕೆ ಲಕ್ಷಾಂತರ ಕನ್ನಡಿಗರು ಆಗಮಿಸುತ್ತಿದ್ದಾರೆ. ವಿಶ್ವ ಸಮ್ಮೇಳನದ ಸಾಗರಕ್ಕೆ ಸಾವಿರಾರು ನದಿಗಳು. ಈ ಸಂಭ್ರಮವನ್ನು ಅಂತರ್ಜಾಲದಲ್ಲಿ ಬಿಂಬಿಸುವ ಉತ್ಸಾಹ, ಶ್ರದ್ಧೆ ಮತ್ತು ಕರ್ತವ್ಯ ನಿಮ್ಮ ನಲ್ಮೆಯ ದಟ್ಸ್ ಕನ್ನಡ.ಕಾಂ ವೆಬ್ ತಾಣದ್ದು.
ಸಮ್ಮೇಳನದ ವಿಶಿಷ್ಟ ವರದಿಗಳನ್ನು ನಿಮಗೆ ತಲುಪುವುದಕ್ಕೋಸ್ಕರ ನಮ್ಮ ಅಂತರ್ಜಾಲ ತಾಣ ಬೆಳಗಾವಿ ನಗರದಲ್ಲಿ ಕಚೇರಿಯನ್ನು ತೆರೆದಿದೆ. ತಾಣದ ಸಂಪಾದಕ, ಸುದ್ದಿ ಸಂಪಾದಕ, ವರದಿಗಾರರು ಮತ್ತು ಛಾಯಾಚಿತ್ರಕಾರರು ಸಮ್ಮೇಳನದ ಸಂಭ್ರಮವನ್ನು ಸೆರೆಹಿಡಿಯಲು ಊರು ತುಂಬಾ ಸುತ್ತುತ್ತಿದ್ದಾರೆ. ಬೆಳಗಾವಿಯ ನಮ್ಮ ಕಚೇರಿಯ ವಿಳಾಸ : ಹೊಟೇಲ್ ರಕ್ಷಿತ್ ಇಂಟರ್ನ್ಯಾಷನಲ್, ಎಎಂ ಶೇಕ್ ಮೆಡಿಕಲ್ ಕಾಲೇಜ್ ಸಮೀಪ, ನೆಹರು ನಗರ, ಬೆಳಗಾವಿ - 590010.
ಬೆಳಗಾವಿ ನಗರಕ್ಕೆ ಬಂದಿಳಿಯುತ್ತಿರುವ ಸಾವಿರಾರು ಕನ್ನಡಿಗರನ್ನು ಸ್ವಾಗತಿಸುವುದಕ್ಕೆ ನಗರಾಡಳಿತ ಸರ್ವಸಿದ್ಧತೆ ಮಾಡಿಕೊಳ್ಳುತ್ತಿದೆ. ತಮ್ಮ ಹೆಸರನ್ನು ಆಹ್ವಾನ ಪತ್ರಿಕೆಯಲ್ಲಿ ನಮೂದಿಸಿಲ್ಲ ಎಂದು ಕುಪಿತಗೊಂಡ ಬೆಳಗಾವಿ ಮಹಾಪೌರ ನಿಂಗಣ್ಣ ನಿರ್ವಾಣಿ ತಮ್ಮ ಹುದ್ದೆಗೆ ರಾಜೀನಾಮೆ ಬಿಸಾಕಿದ್ದಾರೆ. ಅವರ ರಾಜೀನಾಮೆಯನ್ನು ಹಿಂಪಡೆಯುವಂತೆ ಮನವೊಲಿಸಲು ಜಿಲ್ಲಾ ಉಸ್ತುವಾರಿ ಸಚಿವ ಉಮೇಶ್ ಕತ್ತಿ ಪ್ರಯತ್ನ ನಡೆಸಿದರು ಕೂಡ ಫಲಕಾರಿಯಾಗಿಲ್ಲ.
ಈ ಮಧ್ಯೆ, ಮೇಯರ್ ಅವರ ರಾಜೀನಾಮೆಗೂ ತಮಗೂ ಏನೂ ಸಂಬಂಧವಿಲ್ಲವೆಂಬಂತೆ ಮಹಾನಗರ ಪಾಲಿಕೆಯ ಸಿಬ್ಬಂದಿ ನಗರವನ್ನು ಶೃಂಗಾರ ಮಾಡುವಲ್ಲಿ ನಿರತರಾಗಿದ್ದಾರೆ. ಬೆಳಗಾವಿ ನಗರದ ಎಲ್ಲ ಬಡಾವಣೆಗಳಲ್ಲಿ ಮತ್ತು ರಸ್ತೆಯುದ್ದಕ್ಕೂ ವಿಶ್ವ ಕನ್ನಡ ಸಮ್ಮೇಳನ 2011 ಸಂಭ್ರಮವನ್ನು ಬಿತ್ತರಿಸುವ ಕಣ್ಮನ ಸೆಳೆಯುವ ಫಲಕಗಳು ರಾರಾಜಿಸುತ್ತಿವೆ.
ಭಿತ್ತಿಪತ್ರಗಳಲ್ಲಿ ವರಕವಿ ದರಾ ಬೇಂದ್ರೆ, ಗಾನಗಂಗೆ ಗಂಗೂಬಾಯಿ ಹಾನಗಲ್, ನಟಸಾರ್ವಭೌಮ ಡಾ.ರಾಜಕುಮಾರ್, ಸಾಹಸಸಿಂಹ ಡಾ. ವಿಷ್ಣವವರ್ಧನ್, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಚಿವ ಉಮೇಶ್ ಕತ್ತಿ ರಾರಾಜಿಸುತ್ತಿದ್ದಾರೆ. ಇದರ ಜೊತೆ ಕನ್ನಡ ನಾಡಿನ ಪರಂಪರೆ, ಇತಿಹಾಸ ಮತ್ತು ಸಾಂಸ್ಕೃತಿಕ ವೈಭವವನ್ನು ಬಿಂಬಿಸುವ ಭಿತ್ತಿಪತ್ರಗಳು ಹೆಜ್ಜೆಗೊಂದರಂತೆ ಕಣ್ಣಿಗೆ ಬೀಳುತ್ತಿವೆ.
ಮೆರವಣಿಗೆ : ವಿಶ್ವ ಕನ್ನಡ ಸಮ್ಮೇಳನದ ಆಕರ್ಷಣೆಗಳಲ್ಲಿ ಅತ್ಯಂತ ಪ್ರಮುಖವಾದದ್ದು ಕನ್ನಡಿಗರ ಶಕ್ತಿ ಪ್ರದರ್ಶನದ ಬೃಹತ್ ಮೆರವಣಿಗೆ. ಮೇಲುನೋಟಕ್ಕೆ ಇದೊಂದು ಸಾಂಸ್ಕೃತಿಕ ಸೌರಭ ಎಂದು ಕಂಡುಬಂದರೂ ಗಡಿನಾಡ ಪ್ರದೇಶದಲ್ಲಿ ಕನ್ನಡಿಗರ ಒಗ್ಗಟ್ಟು ಮತ್ತು ರಾಜ್ಯದ ಹಿತಾಸಕ್ತಿಯನ್ನು ಕಾಪಾಡುವ ಸಂಕಲ್ಪವನ್ನು ಪ್ರದರ್ಶನಕ್ಕೆ ಇಡುವ ಮೆರವಣಿಗೆಯಾಗಿರುತ್ತದೆ. ಈ ಮೆರವಣಿಗೆಯನ್ನು ಕಣ್ತುಂಬಿಕೊಳ್ಳಲು ಮತ್ತು ತಮ್ಮ ಕ್ಯಾಮೆರಾದಲ್ಲಿ ಸೆರೆಹಿಡಿಯಲು ಪ್ರತಿನಿಧಿಗಳು ಮರೆಯಬಾರದು.
ಶುಕ್ರವಾರ, ಮಾ. 11ರ ಬೆಳಿಗ್ಗೆ 9 ಗಂಟೆಗೆ ಮೆರವಣಿಗೆ ಆರಂಭ. 1924ರಲ್ಲಿ ಇಲ್ಲಿ ನಡೆದಿದ್ದ ಐತಿಹಾಸಿಕ ಕಾಂಗ್ರೆಸ್ ಸಮ್ಮೇಳನದ ತಾಣ ವ್ಯಾಕ್ಸಿನ್ ಡೀಪೊ ಬಳಿಯಿರುವ ವೀರಸೌಧದಲ್ಲಿ ಶಿವಮೊಗ್ಗದಿಂದ ಆಗಮಿಸಿರುವ ಆನೆ ಬಲರಾಮನಿಗೆ ಪೂಜೆ ಸಲ್ಲಿಸಿದ ನಂತರ ಮೆರವಣಿಗೆಗೆ ಚಾಲನೆ ದೊರೆಯಲಿದೆ. ಸುಮಾರು 6 ಕಿ.ಮೀ. ದೂರ ಕ್ರಮಿಸುವ ಮೆರವಣಿಗೆ ಅಪರಾಹ್ನ 3 ಗಂಟೆಯ ಸಮಯಕ್ಕೆ ಸಮ್ಮೇಳನದ ಪ್ರಮುಖ ವೇದಿಕೆ, ಜಿಲ್ಲಾ ಕ್ರೀಡಾಂಗಣದಲ್ಲಿ ವ್ಯವಸ್ಥೆಯಾಗಿರುವ ರಾಣಿ ಕಿತ್ತೂರು ಚೆನ್ನಮ್ಮನ ವೇದಿಕೆಗೆ ತಲುಪಲಿದೆ. ಮಾರ್ಗ : ವೀರಸೌಧದಿಂದ ಸಾಗಿ ರೈಲ್ವೆ ನಿಲ್ದಾಣವನ್ನು ಹಾಯ್ದು, ಬೋಗಾರ್ವೇಸ್ ದಾಟಿ ನಂತರ ಕಾಲೇಜು ರಸ್ತೆಯ ಮುಖಾಂತರ ವೇದಿಕೆ ತಲುಪಲಿದೆ. [ಬೆಳಗಾವಿ ಸಮ್ಮೇಳನದ ಸುದ್ದಿಬಿಂಬ]
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications