ಬೆಳಗಾವಿ ಮೆರವಣಿಗೆಯಲ್ಲಿ ಕನ್ನಡಿಗರ ದರ್ಬಾರು

ಬಲರಾಮನ ಜೊತೆಗೆ ಕೃಷ್ಣಾ, ಸುಧಾ ಆನೆಗಳು ಸಾಗುತ್ತಿರುವ ರೀತಿ ಮೈಸೂರು ದಸರಾ ವೈಭವನ್ನು ನೆನಪಿಸುವಂತಿದೆ. ಪೂರ್ಣಕುಂಭ ಕಲಶ ಹೊತ್ತ 1001 ಮಹಿಳೆಯರು ಕನ್ನಡ ಹಬ್ಬದ ವಾತಾವರಣವನ್ನು ಸೃಷ್ಟಿಸಿದ್ದಾರೆ. ನಂದಿ ಧ್ವಜ ಪೂಜೆ ಪೂರೈಸಿದ ನಂತರ ಸಚಿವ ಅಶೋಕ್, ಗೋವಿಂದ ಕಾರಜೋಳ ಮುಂತಾದ ಜನ ಪ್ರತಿನಿಧಿಗಳ ಸಮೂಹ ತಮ್ಮ ಗೂಟದ ಕಾರಿನತ್ತ ತೆರಳದೆ ಮೆರವಣಿಗೆಯಲ್ಲಿ ಪಾಲ್ಗೊಂಡು ಕನ್ನಡ ಅಭಿಮಾನಿಗಳ ಹರ್ಷವನ್ನು ಹೆಚ್ಚಿಸಿದರು. ಸಿನಿ ನಟ ನಟಿಯರು ವೋಲ್ವೋ ಬಸ್ ನಲ್ಲೇ ಮೆರವಣಿಗೆ ಸುತ್ತಾ ಸುತ್ತಾಟ ನಡೆಸಿದ್ದು ಅಭಿಮಾನಿಗಳನ್ನು ಕೆರಳಿಸಿತ್ತು.
ಜನಪದ ವೈಭವ: ಪೂಜಾ ಕುಣಿತ, ಪಟ ಕುಣಿತ, ಕೋಲಾಟ, ಕಂಸಾಳೆ, ವೀರಗಾಸೆ, ಡೊಳ್ಳು ಕುಣಿತ, ಹುಲಿ ವೇಷ, ಕುದುರೆ ಕುಣಿತ, ತಮಟೆ ಬಡಿತ, ಯಕ್ಷಗಾನದ ವೇಷಗಳು, ಒಂದೇ ಎರಡೇ ಮಾತು ಬರದ ಮೂಗ ಕೂಡಾ ಕನ್ನಡ ಕನ್ನಡ ಎಂದು ಕೂಗುವಂತೆ ಮಾಡಿದೆ. ಕಾಲಿಲ್ಲದವ ಕೂಡಾ ಕನ್ನಡ ಎಂದು ಕುಣಿದಾಡುವಂತೆ ಮಾಡಿದೆ. ನಾಡಿನ ವಿವಿಧೆಡೆಗಳಿಂದ ಬಂದಿರುವ ಸುಮಾರು ಆರು ಸಾವಿರಕ್ಕೂ ಹೆಚ್ಚು ಜನ ಪಾಲ್ಗೊಂಡಿದ್ದಾರೆ. ಸುಮಾರು 6 ಕಿ.ಮೀ ದೂರ ಸಾಗುವ ಈ ಮೆರವಣಿಗೆಯಲ್ಲಿ ದಣಿವಿಲ್ಲದೆ ಕುಣಿವ ಈ ಸಾಂಸ್ಕೃತಿಕ ರಾಯಭಾರಿಗಳಿಗೆ ನಮೋ ನಮಃ
ಮರಾಠಿ ಗೋಡಾ ಥಕ ಥೈ ಥಕ ಕೈ: ಮೆರವಣಿಯಲ್ಲಿ ಪಾಲ್ಗೊಂಡ ಚಿಣ್ಣರು, ಬಿಳಿ ಕುದುರೆ ಹಿಂದೆ ಮುಂದೆ ಸುತ್ತುತ್ತಿದ್ದರು. ಮೈಸೂರಿನಿಂದ ಬಂದ ಒಟ್ಟು 45 ಕುದುರೆಗಳ ಅಶ್ವದಳದ ಲೆಫ್ಟ್ ರೈಟ್ ಮೆರವಣಿಗೆ ಒಂದು ಕಡೆ ಸಾಗಿದ್ದರೆ, ಮಹಾರಾಷ್ಟ್ರದಿಂದ ಬಂದಿರುವ ಬಿಳಿ ಕುದುರೆ ಸೂರಜ್, ಲಕ್ಷ್ಮಣ್ ಜೋಡಿ ಎಲ್ಲರನ್ನೂ ಮೋಡಿ ಮಾಡುತ್ತಿದೆ. ಆಕರ್ಷಕವಾದ ಈ ಬಿಳಿ ಕುದುರೆಗಳು ಸಂಗೀತದ ಮೋಡಿಗೆ ಸಿಲುಕಿದಂತೆ ಥಕ ಥೈ ಥಕ ಥೈ ಎಂದು ಹೆಜ್ಜೆ ಹಾಕುವುದು, ಕೆನೆಯುವುದು ನೋಡುವುದೇ ಆನಂದ. ಮಾತುಂಗದಿಂದ ಬಂದಿರುವ ಕನ್ನಡ ಸಂಘ ಸೇರಿದಂತೆ ಸುಮಾರು 250ಕ್ಕೂ ಹೊರರಾಜ್ಯದಿಂದ ಬಂದಿರುವ ಕಲಾವಿದರೂ ಈ ಕನ್ನಡ ಮೆರವಣಿಗೆಯಲ್ಲಿ ಪಾಲ್ಗೊಂಡಿರುವುದು ವಿಶೇಷ. ಗಡಿನಾಡಿನ ನಗರ ಬೆಳಗಾವಿಯು ಕರ್ನಾಟಕದ ಎರಡನೇ ರಾಜಧಾನಿಯಾಗಲಿ ಎಂಬ ಆಶಯವನ್ನು ಮೆರವಣಿಗೆ ಹೊರಟ್ಟಿದ್ದವರಲ್ಲಿ ಹೆಚ್ಚು ಜನರ ಅಭಿಪ್ರಾಯವಾಗಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications