ಸಮಾರೋಪಕ್ಕೆ ಡಾ. ಬರಗೂರು ಬರ್ತಾರಾ? ಇಲ್ವಾ!

ಈ ವಿವಾದ ಸೃಷ್ಟಿಯಾಗುವ ಮುನ್ನವೇ ಸರಕಾರ ಸಮ್ಮೇಳನದ ಸಮಾರೋಪ ಸಮಾರಂಭದ ಆತಿಥಿಗಳ ಪಟ್ಟಿಯಲ್ಲಿ ಡಾ. ಬರಗೂರು ಹೆಸರನ್ನು ಸೇರಿಸಿತ್ತು. ಸಮ್ಮೇಳನದ ವಿಶೇಷಾಧಿಕಾರಿ ಡಾ. ಐ.ಎಂ. ವಿಠ್ಠಲಮೂರ್ತಿ ದೂರವಾಣಿ ಮೂಲಕ ಅವರನ್ನು ಅಹ್ವಾನಿಸಿದ್ದರು. ಆದರೆ, ಸ್ವತಃ ಈಗ ಬರಗೂರು ಪತ್ರ ಬರೆದು ಯಾವುದೇ ಕಾರಣಕ್ಕೂ ತಾವು ಸಮ್ಮೇಳನದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
'ಸಮ್ಮೇಳನ ಉದ್ಘಾಟನೆ ವಿಷಯದಲ್ಲಿ ತಾತ್ತ್ವಿಕ ವಿರೋಧ ವ್ಯಕ್ತಪಡಿಸಿದ ನಾನು ನನ್ನ ನೈತಿಕತೆ ಮತ್ತು ವಿಶ್ವಾಸಾರ್ಹತೆಯ ದೃಷ್ಟಿಯಿಂದ ವಿಶ್ವ ಕನ್ನಡ ಸಮ್ಮೇಳನದಲ್ಲಿ ಭಾಗವಹಿಸುತ್ತಿಲ್ಲ. ಇದು ನನ್ನ ತಾತ್ವಿಕ ವಿರೋಧದ ನೆಲೆಗೆ ಅನುಗುಣವಾಗಿದೆ. ತಾವು ಅರ್ಥ ಮಾಡಿಕೊಳ್ಳುವಿರೆಂದು ನಂಬಿರುವೆ. ಇದು ವಿವಾದವೂ ಆಗುವುದು ಬೇಡ. ಇಷ್ಟಾದರೂ ನಾನು ಸಮ್ಮೇಳನದ ವಿರೋಧಿಯಲ್ಲ. ನನ್ನ ಬಹಿಷ್ಕಾರವೂ ಅಲ್ಲ. ನೈತಿಕ ನೆಲೆಯ ಗೈರು ಹಾಜರಿ ಅಷ್ಟೆ. ಸಮ್ಮೇಳನ ಯಶಸ್ವಿಯಾಗಲಿ' ಎಂದು ಅವರು ಪತ್ರದಲ್ಲಿ ಹಾರೈಸಿದ್ದಾರೆ.
ಅತ್ತೂ ಕರೆದೂ ಆಮಂತ್ರಣ: ಈ ಮಧ್ಯೆ ಇಂದು (ಮಾರ್ಚ್ 13) ನಡೆಯಲಿರುವ ಸಮ್ಮಳನದ ಸಮಾರೋಪದ ಅಧ್ಯಕ್ಷತೆ ವಹಿಸಲಿರುವ ಹಿರಿಯ ಪತ್ರಕರ್ತ, ನಾಡೋಜ ಡಾ. ಪಾಟೀಲ ಪುಟ್ಟಪ್ಪ ಅವರಿಗೆ ಸರಕಾರದಿಂದ ಅಧಿಕೃತ ಕರೆ ಬಂದಿದೆ. ಸಮ್ಮೇಳನದ ಆಯೋಜಕರಾಗಲಿ ಅಥವಾ ಸರಕಾರವಾಗಲಿ ತಮ್ಮನ್ನು ಸರಿಯಾಗಿ ಆಹ್ವಾನಿಸಿಲ್ಲ ಎಂದು ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ನಡೆಸಿ, ತೀವ್ರ ಅಸಾಮಾಧಾನ ವ್ಯಕ್ತಪಡಿಸಿದ್ದರು.
ಈ ಹಿನ್ನೆಲೆಯಲ್ಲಿ ಧಾರವಾಡದ ಜಿಲ್ಲಾಧಿಕಾರಿ ದರ್ಪಣ ಜೈನ್ ಶುಕ್ರವಾರ ಸಂಜೆ ಪಾಪು ಮನೆಗೆ ಭೇಟಿ ನೀಡಿ, ಸಮ್ಮೇಳನದಲ್ಲಿ ಪಾಲ್ಗೊಳ್ಳುವಂತೆ ಸರಕಾರದ ವತಿಯಿಂದ ವಿನಂತಿಸಿದ್ದಾರೆ. ಇದೇ ಸಂದರ್ಭದಲ್ಲಿ ಸಮ್ಮೇಳನದ ವಿಶೇಷಾಧಿಕಾರಿ ಡಾ. ಐ.ಎಂ. ವಿಠ್ಠಲಮೂರ್ತಿ ಅವರು ಶನಿವಾರ ಪಾಪು ಜತೆ ದೂರವಾಣಿಯಲ್ಲಿ ಮಾತನಾಡಿ, ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ವಿನಂತಿಸಿದ್ದಾರೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications