ಲಹರಿಯಿಂದ ಮೂರು ಸಾವಿರ ಹಾಡುಗಳ ಬೃಹತ್ ಗೀತಗುಚ್ಛ
ಬೆಳಗಾವಿ ವಿಶ್ವಕನ್ನಡ ಸಮ್ಮೇಳನದಲ್ಲಿ ಲಹರಿ ರೆಕಾರ್ಡಿಂಗ್ ಕಂಪನಿ ತನ್ನದೇ ಆದ ಅಳಿಲು ಸೇವೆ ಸಲ್ಲಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ 'ಹಚ್ಚೇವು ಕನ್ನಡದ ದೀಪ' ಎಂಬ 3000 ಹಾಡುಗಳ ಬೃಹತ್ ಗೀತಗುಚ್ಛವನ್ನು ಹೊರತಂದಿದೆ. ಇದರ ಜೊತೆಗೆ ಲಹರಿ ಸಂಸ್ಥೆ ಮತ್ತೊಂದು ಹೆಜ್ಜೆಯನ್ನು ಇಟ್ಟಿದ್ದು ಆಡಿಯೋ ಪುಸ್ತಕಗಳನ್ನು ಹೊರತಂದಿದೆ.
ಕುವೆಂಪು, ದ.ರಾ.ಬೇಂದ್ರೆ, ಡಿ.ವಿ.ಜಿ, ಪುತಿನ, ಜಿ ಪಿ ರಾಜರತ್ನಂ, ಎಂ ಗೋಪಾಲಕೃಷ್ಣ ಅಡಿಗ, ಕೆ ಎಸ್ ನರಸಿಂಹಸ್ವಾಮಿ, ಕೆ ಎಸ್ ನಿಸಾರ್ ಅಹಮದ್, ಜಿ ಎಸ್ ಶಿವರುದ್ರಪ್ಪ, ಚೆನ್ನವೀರ ಕಣವಿ, ಎನ್ ಎಸ್ ಲಕ್ಷ್ಮಿನಾರಾಯಣ ಭಟ್ಟ, ಎಚ್ ಎಸ್ ವೆಂಕಟೇಶಮೂರ್ತಿ, ಬಿ ಆರ್ ಲಕ್ಷ್ಮಣರಾವ್, ಡಾ.ಸಿದ್ದಲಿಂಗಯ್ಯ, ದೊಡ್ಡರಂಗೇಗೌಡ ಮುಂತಾದ ಕವಿಗಳ ಗೀತೆಗಳಿವೆ.
ಇವುಗಳ ಜತೆಗೆ ದಾಸ ಸಾಹಿತ್ಯ, ವಚನ ಸಾಹಿತ್ಯ, ಭಾವಗೀತೆಗಳು, ಕನ್ನಡ ಜನಪ್ರಿಯ ಚಿತ್ರಗೀತೆಗಳು ಮತ್ತು ಕನ್ನಡ ಸಾಹಿತ್ಯ ಚರಿತ್ರೆ ಸೇರಿದಂತೆ ಒಟ್ಟು 3000 ಹಾಡುಗಳಿವೆ. ಪಿ ಕಾಳಿಂಗರಾವ್, ಮೈಸೂರು ಅನಂತಸ್ವಾಮಿ, ಡಾ.ರಾಜ್ ಕುಮಾರ್, ಪಂ.ಬಸವರಾಜ ರಾಜಗುರು, ಎಸ್ ಪಿ ಬಾಲಸುಬ್ರಹ್ಮಣ್ಯಂ, ಶಿವಮೊಗ್ಗ ಸುಬ್ಬಣ್ಣ, ಸಿ ಅಶ್ವತ್ಥ್, ವೈ ಕೆ ಮುದ್ದುಕೃಷ್ಣ ಮುಂತಾದವರು ಹಾಡಿದ್ದಾರೆ.
ಒಟ್ಟು 50 ಸಿಡಿಗಳಲ್ಲಿ 3000 ಹಾಡುಗಳನ್ನು ಅಡಕವಾಗಿವೆ. ಈ ಬೃಹತ್ ಗೀತಗುಚ್ಛದ ಬೆಲೆ ರು.2999. ಅಂದರೆ ಒಂದು ಹಾಡಿಗೆ ಒಂದು ರೂಪಾಯಿ ಕೊಟ್ಟಂತಾಗುತ್ತದೆ. ಸಂಗೀತ ಮತ್ತು ಸಾಹಿತ್ಯ ಪ್ರಿಯರಿಗೆ ನಾವು ನೀಡುತ್ತಿರುವ ಕಿರು ಕಾಣಿಕೆ ಇದು ಎನ್ನುತ್ತಾರೆ ಲಹರಿ ರೆಕಾರ್ಡಿಂಗ್ ಕಂಪನಿಯ ವೇಲು.
ಲಹರಿ ಸಂಸ್ಥೆ ಹೊರತಂದಿರುವ ಆಡಿಯೋ ಪುಸ್ತಕ ಮತ್ತೊಂದು ಪ್ರಮುಖ ಆಕರ್ಷಣೆ. ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಅವರ "ಸುಬ್ಬಣ್ಣ ಮತ್ತು ಆಯ್ದ ಕಥೆಗಳು", ಯು ಆರ್ ಅನಂತಮೂರ್ತಿ ಅವರ "ಸಂಸ್ಕಾರ", ಎಸ್ ಎಲ್ ಭೈರಪ್ಪ ಅವರ "ಧರ್ಮಶ್ರೀ", ಚಂದ್ರಶೇಖರ ಕಂಬಾರ ಅವರ "ಸಿಂಗಾರೆವ್ವ ಮತ್ತು ಅರಮನೆ", ಸುಧಾಮೂರ್ತಿ ಅವರ "ಮನದ ಮಾತು" ಆಡಿಯೋ ಪುಸ್ತಕ ರೂಪದಲ್ಲಿ ಹೊರಬಂದಿವೆ.
ನಟ, ರಂಗಕರ್ಮಿ ಸಿ ಆರ್ ಸಿಂಹ, ಋತ್ವಿಕ್ ಸಿಂಹ, ಲಕ್ಷ್ಮಿ ಚಂದ್ರಶೇಖರ್ ಹಾಗೂ ಇತರರು ತಮ್ಮ ವಿಶಿಷ್ಟ ಧ್ವನಿಯಲ್ಲಿ ವಾಚಿಸಿದ್ದಾರೆ. ಪ್ರತಿ ಆಡಿಯೋ ಪುಸ್ತಕದ ಬೆಲೆ ರು.125. ಓದಲು ಸಾಧ್ಯವಾಗದವರು, ಕೇಳಲು ಇಷ್ಟಪಡುವವರು ಈ ಆಡಿಯೋ ಪುಸ್ತಕಗಳನ್ನು ಕೊಳ್ಳಬಹುದು. ವಿವರಗಳಿಗೆ: 2224-1044, 2224-1306.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications