ಮಾದರಿ ಪತ್ರಿಕೆಯಿದು, ಖಾಯಂ ಓದಿರಿ ನೀವು!

* ಮಾವೆಂಸ ಪ್ರಸಾದ್
ಇದೊಂದು ವಿಚಿತ್ರ ಸನ್ನಿವೇಶ. ಈ ಅಂಕಣವಿರುವುದು ಪತ್ರಿಕೆಗಳನ್ನು ಪರಿಚಯಿಸಲು ಮತ್ತು ಅವುಗಳ ಪ್ರಸಾರ ಸಂಖ್ಯೆ ಹೆಚ್ಚಿಸಲು ಕಿಂಚಿತ್ ಪ್ರಯತ್ನಿಸಲು. ಆದರೆ ಈ ವಾರ ಪರಿಚಯಿಸುತ್ತಿರುವ ಪತ್ರಿಕೆಯನ್ನು ನೀವು ಚಿಂತಾಮಣಿ ತಾಲ್ಲೂಕಿನವರಲ್ಲದಿದ್ದರೆ ಓದುವುದು ವ್ಯರ್ಥ. ಹಾಗೆಂದು ನೀವೊಮ್ಮೆ ಪತ್ರಿಕೆಯನ್ನು ಗಮನಿಸದಿದ್ದರೂ ನಷ್ಟ ನಷ್ಟ!
ಬೆಂಗಳೂರು ಸಮೀಪದ ಚಿಂತಾಮಣಿಯ ಮಂಜುನಾಥ ರೆಡ್ಡಿ ಮಾಹಿತಿ ಹಕ್ಕು ಕಾಯ್ದೆ ಬಳಸಿಕೊಂಡು ಭ್ರಷ್ಟಾಚಾರದ ಎದುರು ಹೋರಾಟ ನಡೆಸಿದಾಗಲೊಮ್ಮೆ ಗೂಂಡಾಗಳಿಂದ ದೈಹಿಕ ಹಲ್ಲೆಗೆ ತುತ್ತಾದವರು. ನನಗೆ ಪರಿಚಿತರು. ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲ್ಲೂಕಿನಲ್ಲಿ 'ಜನಜಾಗೃತಿ ವೇದಿಕೆ" ಎಂಬ ಜನಪರ ಸಂಸ್ಥೆಯ ಮುಂಚೂಣಿಯಲ್ಲಿದ್ದಾರೆ. ಅವರದೇ ಸಂಪಾದಕೀಯದಲ್ಲಿ ಪ್ರಕಟವಾಗುತ್ತಿರುವ ದ್ವೈಮಾಸಿಕ ಅಂಚೆ ಪತ್ರಿಕೆ 'ಅರಿವು".
ಪತ್ರಿಕೆಯ ಓದುಗರಸಂಖ್ಯೆ ಹೆಚ್ಚಲು ಅದರಲ್ಲಿ ಲೇಖನ ಕಸುಬು ಚೆಂದವಿರಬೇಕು ಎಂಬ ಮಾತಿದೆ. ಈ ಮಾತನ್ನು ಸುಳ್ಳಾಗಿಸಿರುವುದೇ ಈ ಪತ್ರಿಕೆಯ ಯಶಸ್ಸು. ಇದು ಮಾಹಿತಿ ಹಕ್ಕಿನ ಅಸ್ತ್ರದ ಬಳಕೆಯ ಮೂಲಕ ಚಿಂತಾಮಣಿಯ ನಗರಸಭೆ, ಗ್ರಾಮಪಂಚಾಯ್ತಿ ಹಾಗೂ ಸರ್ಕಾರಿ ಇಲಾಖೆಗಳಿಂದ ಮಾಹಿತಿ ಸಂಗ್ರಹಿಸಿ ಅದನ್ನು ಯಥಾವತ್ ಆಗಿ ಪ್ರಕಟಿಸುತ್ತದೆ.
ಉದಾಹರಣೆಗೆ ರೇಷ್ಮೆ ಕೃಷಿಗೆ ಈ ವರ್ಷ ಯಾರ್ಯಾರಿಗೆ ನೀರಾವರಿ ಸಬ್ಸಿಡಿ ಸಿಕ್ಕಿದೆ ಎಂಬ ಪಟ್ಟಿಯನ್ನು ಪಡೆದು ಪ್ರಕಟಿಸುತ್ತದೆ. ಖುದ್ದು ಹೆಸರಿಸಲಾದ ರೈತನಿಗೆ ಗಾಬರಿಯಾಗಬಹುದು. ಏಕೆಂದರೆ ಆತ ಅದನ್ನು ಪಡೆಯದೇ ಇರುವ ಸಾಧ್ಯತೆಯಿದೆ. ಅಥವಾ ಏನೂ ಕೆಲಸ ಮಾಡಿರದ ಖದೀಮ ಸಬ್ಸಿಡಿ ಹೊಡೆದಿರಬಹುದು. ಈ ಎರಡೂ ಪ್ರಕರಣದಲ್ಲಿ ಹೋರಾಡಲು ಈ ಮಾಹಿತಿ ನೆರವು ನೀಡುತ್ತದೆ.
ಈ ರೀತಿ ಕಾಮಗಾರಿ ಪಟ್ಟಿ, ಯಶಸ್ವಿನಿಯಡಿ ಆಸ್ಪತ್ರೆಗಳು ಪಡೆದಿರುವ ಮೊತ್ತ, ತೋಟಗಾರಿಕೆ ಇಲಾಖೆಯ ಹನಿ ನೀರಾವರಿ ಸಬ್ಸಿಡಿ, ಗ್ರಾಮಪಂಚಾಯ್ತಿಗಳ ಖರ್ಚು ವಿವರ... ಹೀಗೆ ನೇರನೇರವಾಗಿ ಅಂಕಿಅಂಶಗಳು ಪ್ರಕಟಗೊಳ್ಳುವುದರಿಂದ ಹೊಣೆಗಾರರಾದ ಅಧಿಕಾರಿಗಳು ಮುಜುಗರಕ್ಕೊಳಗಾಗುವ ಸಾಧ್ಯತೆಗಳಿವೆ. ಹೀಗೆ ಹೇಳಬಹುದು, ಲೆಕ್ಕದಲ್ಲಿ ಯಾವುದೋ ಕೆರೆಯ ಹೂಳು ತೆಗೆದಿದ್ದಾರೆಂದರೆ ಅದು ಚಿಂತಾಮಣಿಯಲ್ಲಿ 'ಅರಿವು" ಮೂಲಕ ಜಗಜ್ಜಾಹೀರವಾಗುತ್ತದೆ. ಸಾಕಲ್ಲ? ಪ್ರಜ್ಞಾವಂತ ನಾಗರಿಕ ಮುಂದಿನ ಹೆಜ್ಜೆ ಇಟ್ಟಾನು!
ಇಂತಹ ಪತ್ರಿಕೆ ಪ್ರತಿ ತಾಲ್ಲೂಕಿಗೊಂದರಂತೆ ಶುರುವಾಗಬೇಕು. ಅದಕ್ಕೂ ಮುನ್ನ ಒಮ್ಮೆ 'ಅರಿವು" ನೋಡಬೇಕು. ಇವತ್ತು ಚಿಂತಾಮಣಿಯಲ್ಲಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಹಿಳೆಯರು ಮೂತ್ರ ವಿಸರ್ಜಿಸಿದರೆ ಶುಲ್ಕ ಕೊಡಬೇಕಾದುದಿಲ್ಲ, ಅಲ್ಲಿನ ಬಿಪಿಎಲ್ ಕಾರ್ಡ್ದಾರರಿಗೆ ಸಕ್ಕರೆ, ಗೋಧಿ, ಅಕ್ಕಿ ಎಲ್ಲವೂ ಸಿಗುತ್ತಿದೆ. ಇದಕ್ಕೆಲ್ಲ ಕಾರಣ 'ಅರಿವು" ದ್ವೈಮಾಸಿಕ.
ಜೊತೆಜೊತೆಗೆ ಎಲ್ಲರಿಗೂ ಅನುಕೂಲವಾಗಬಲ್ಲ ಕಾನೂನು ಮಾಹಿತಿಗಳೂ ಈ ಪತ್ರಿಕೆಯಲ್ಲಿದೆ. ಇದನ್ನು ನೋಡಿದಾಗ ನನಗೆ ಮಂಡ್ಯದ 'ಗ್ರಾಮಸರ್ಕಾರ" ಎಂಬ ಪತ್ರಿಕೆಯ ನೆನಪಾಗುತ್ತದೆ. ಅದರ ಬಗ್ಗೆ ಮುಂದೆ ಬರೆಯುವೆ. ಮುಖ್ಯವಾಗಿ ಬೇರೆಡೆಯಲ್ಲೂ ಸಂಘಟನೆಗಳು ಈ ಅರಿವು ಪತ್ರಿಕೆಯ ಮಾದರಿಯನ್ನು ಮುದ್ದಾಂ ಆರಂಭಿಸಬೇಕು. ಈ ಬರಹ ಕೆಲವರಲ್ಲಾದರೂ ಆ ಕೆಲಸ ಮಾಡಿಸಿದರೆ ಸಾರ್ಥಕ.
'ಅರಿವು" ವಿಳಾಸ : ಜಿ.ವಿ.ಮಂಜುನಾಥ್ ರೆಡ್ಡಿ, ಸಂಪಾದಕರು, 'ಅರಿವು", ಎನ್.ಆರ್.ಬಡಾವಣೆ, ಚಿಂತಾಮಣಿ, ಚಿಕ್ಕಬಳ್ಳಾಪುರ ಜಿಲ್ಲೆ -563125. ದೂರವಾಣಿ - 08158-254030, ಮೊಬೈಲ್ -99453 12314
ಲೇಖಕರ ವಿಳಾಸ : ಮಾ.ವೆಂ.ಸ.ಪ್ರಸಾದ್, ಮಾವಿನಸರ, ಪೋಸ್ಟ್-ಎಡಜಿಗಳೇಮನೆ. ಸಾಗರ ತಾ. ಶಿವಮೊಗ್ಗ ಜಿ. 577401 ಫೋನ್-08183 236068, 98864 07592 ಇ ಮೇಲ್ : [email protected]
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications