ಬಯಲುಸೀಮೆಯ ಬಂಟ ಡಾ ಮಧು ಸೀತಪ್ಪ

ಅದೇ ರೀತಿಯಲ್ಲಿ ವಿದೇಶದಿಂದ ಆಗಾಗ ಬಂದು ತಮ್ಮವರೊಂದಿಗೆ ಬೆರೆತು, ಬೆಸೆದು, ಹರಟಿ, ಸಂತೋಷ ಕೂಟಗಳಲ್ಲಿ ಭಾಗವಹಿಸಿ, ಸಾಹಿತ್ಯದಂತಹ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿದ್ದರೆ ಒಂದೆರಡು ಬುಕ್ ರಿಲೀಸ್ ಮಾಡಿ ಸಾಧಕರ ಜೊತೆ ಸಂತೋಷದಿಂದ ಸಮಯ ಕಳೆದು ಹೋಗುವವರು ಇದ್ದಾರೆ. ಅದು ಅವರ ಜೀವನ ಶೈಲಿ. ಆದರೆ ವಿದೇಶದಲ್ಲಿ ಪ್ರಸಿದ್ದ ವೈದ್ಯರಾಗಿ ಸೇವೆ ಸಲ್ಲಿಸುತ್ತಾ ತಾಯಿನಾಡಿನ ಅಭಿವೃದ್ಧಿ ಬಗ್ಗೆ ಭಿನ್ನ ರೀತಿಯಲ್ಲಿ ಆಲೋಚಿಸುತ್ತ ಪೂರಕ yochane, ಯೋಜನೆಗಳನ್ನು ಕೈಕೊಂಡ ಓರ್ವ ವಿಶೇಷ ವ್ಯಕ್ತಿತ್ವ ಇದ್ದಾರೆ, ಅವರೇ ಡಾ.ಮಧು ಸೀತಪ್ಪ.
ಕೋಲಾರ ಜಿಲ್ಲೆಯ ಚಿಲಕನೆಪುರ ಗ್ರಾಮದಲ್ಲಿ ಜನಿಸಿದ ಡಾ.ಮಧು ಅವರ ತಂದೆ ಸೀತಪ್ಪ ಸ್ವಾತಂತ್ರ ಹೋರಾಟಗಾರರು. ತಾಯಿ ಶಾರದ ಸೀತಪ್ಪ ವಿದ್ಯಾ ಸಂಸ್ಥೆಯಲ್ಲಿ ತಮ್ಮ ಸೇವೆ ಸಲ್ಲಿಸುತ್ತಾ ಇದ್ದಾರೆ. ಮಧು ತಮ್ಮ ಆರಂಭಿಕ ಶಿಕ್ಷಣವನ್ನು ಕೋಲಾರದ ಹೈಸ್ಕೂಲ್ನಲ್ಲಿ ಪೂರೈಸಿದರು. ಆ ಬಳಿಕ ಬೆಂಗಳೂರಿನ ನ್ಯಾಷನಲ್ ಕಾಲೇಜ್ ನಲ್ಲಿ ಪಿಯುಸಿ ಮತ್ತು ಬೆಂಗಳೂರು ಮೆಡಿಕಲ್ ಕಾಲೇಜ್ ನಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಪೂರೈಸಿದರು.
ಕೋಲಾರ, ತುಮಕೂರು, ಚಿತ್ರದುರ್ಗ, ರಾಮನಗರ, ಸೇರಿದಂತೆ ನಮ್ಮ ರಾಜ್ಯದ ಕೆಲವು ಜಿಲ್ಲೆಗಳು ಕೆಲವು ವರ್ಷಗಳನಂತರ ನೀರಿಲ್ಲದೆ ಬರಡಾಗುತ್ತದೆ. ಕುಡಿಯುವ ನೀರಿನ ಹಾಹಾಕಾರ ಉಂಟಾಗುತ್ತದೆ. ಇಂತಹ ದಾರುಣ ಪರಿಸ್ಥಿತಿ ತಪ್ಪಿಸಲು ಪೂರಕ ಯೋಜನೆಗಳ ಅನುಷ್ಠಾನದ ಅಗತ್ಯವಿದೆ. ಅದರ ಬಗ್ಗೆ ಸಾಕಷ್ಟು ಕೆಲಸ ಮಾಡಿದವರು ಸಮಾಜಮುಖಿ ಪರಮಶಿವಯ್ಯನವರು. ಬಾಲ್ಯದಿಂದಲೂ ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿಯ ಕಡೆ ತುಡಿತ ಹೊಂದಿದ್ದರು. ಪರಮಶಿವಯ್ಯನವರ ದೃಷ್ಟಿಕೋನ ಹಾಗೂ ಚಿಂತನೆಗಳ ಬಗ್ಗೆ ಆಕರ್ಷಿತರಾದ ಡಾ. ಮಧು ಪರಮಶಿವಯ್ಯನವರನ್ನು ಭೇಟಿಯಾಗಿ ಅವರೊಂದಿಗೆ ಚರ್ಚಿಸಿ ಅಗತ್ಯ ಕೆಲಸಗಳತ್ತ ಗಮನ ಹರಿಸಿದ್ದಾರೆ.
ಲಂಡನ್ ಆಸ್ಪತ್ರೆಯಲ್ಲಿ ಪ್ರಸಿದ್ಧ ನೇತ್ರ ತಜ್ಞರಾಗಿರುವ ಡಾ. ಮಧುಸೀತಪ್ಪ ಕನ್ನಡದ ಅನೇಕ ಪ್ರಖ್ಯಾತ ಪತ್ರಿಕೆಗಳಿಗೆ ತಮ್ಮ ಚಿಂತನ- ಮಂಥನವನ್ನು ಲೇಖನಗಳ ಮೂಲಕ ಪ್ರಸ್ತುತ ಪಡಿಸುತ್ತಿದ್ದಾರೆ. ಕೇವಲ ಬರಹಗಳ ಮೂಲಕ ಮಾತ್ರವಲ್ಲದೆ ತಾವು ಭಾರತಕ್ಕೆ ಬಂದಾಗ ಈ ಯೋಜನೆಗಳಿಗೆ ಬೇಕಾದ ಸಲಹೆ ಸೂಚನೆ, ರೈತರ ಜೊತೆ ಮಾತುಕತೆ, ಸಂಬಂಧಿತ ಅಧಿಕಾರಿಗಳು ಹಾಗೂ ಮಂತ್ರಿಗಳೊಂದಿಗೆ ಚರ್ಚೆ ನಡೆಸಿ ರಜೆಯನ್ನು ಸದುಪಯೋಗ ಮಾಡಿಕೊಳ್ತಾ ಇದ್ದಾರೆ. ಈ ಕೆಲಸಗಳಿಗಾಗಿ ತಮ್ಮ ದುಡಿಮೆಯ ಒಂದಷ್ಟು ಭಾಗವನ್ನು ಡಾ.ಮಧುಸೀತಪ್ಪ ಮೀಸಲಿಟ್ಟಿದ್ದಾರೆ ಎನ್ನುವ ಮಾತು ಸಹ ಉತ್ಪ್ರೇಕ್ಷೆಯಲ್ಲ.
ರೈತ, ಸ್ವಾತಂತ್ರ ಹೋರಾಟಗಾರರ ಮಗ ಡಾ.ಮಧುಸೀತಪ್ಪ ವೈದ್ಯರಾಗಿ, ವಿಜ್ಞಾನಿ ಹಾಗೂ ಸಂಶೋಧಕರಾಗಿ ತಮ್ಮ ಸೇವೆ ಸಲ್ಲಿಸುತ್ತಿರುವ ಮಹನೀಯರು. ದೇಶವು ನಮಗೇನು ಮಾಡಿತು ಎನ್ನುತ್ತಾ ಕೂರದೆ ನಮ್ಮಿಂದ ಭೂಮಿತಾಯಿಗೆ ಯಾವರೀತಿಯ ಸಾಂತ್ವನ ಸಿಗುತ್ತದೆ, ಹೇಗೆ ತಾಯ್ನೆಲದ ಋಣ ತೀರಿಸಬಹುದು ಎನ್ನುವವರ ಸಂಖ್ಯೆ ತುಂಬಾ ಚಿಕ್ಕದು. ಆದರೆ ಡಾ.ಮಧು ಸೀತಪ್ಪ ಆ ಸಾಲಿಗೆ ಸೇರಿರುವ ಎಲೆಮರೆಯ ಕಾಯಿ, ಅವರ ಈ ಪ್ರಯತ್ನಕ್ಕೆ ಸಮಾನಮನಸ್ಕರು ಕೈ ಜೋಡಿಸಿದರೆ ಬಯಲು ಸೀಮೆಯು ಬರಡು ನಾಡಾಗುವ ದುಸ್ಥಿತಿ ದೂರವಾಗುತ್ತದೆ. ಅವರ ಆಲೋಚನೆಗಳನ್ನು ಒಪ್ಪುವವರು ಮತ್ತು ಅವರ ಜತೆ ಸಮಾಲೋಚನೆ ಮತ್ತು ಸೇವಾಕಾರ್ಯಗಳಲ್ಲಿ ಭಾಗಿಯಾಗ ಬಯಸುವವರು ಡಾ.ಮಧುಸೀತಪ್ಪ ಅವರೊಂದಿಗೆ ಕನೆಕ್ಟ್ ಆಗಬಹುದು:- [email protected], [email protected]
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications