ಅಡಿಕೆ ಪತ್ರಿಕೆ' ಓದೋಕೆ ಸಂಕೋಚ ಏಕೆ?

ಆದರೆ ದೂರದ ಪುತ್ತೂರಿನಿಂದ ಪ್ರಕಟಗೊಳ್ಳುವ ಅಡಿಕೆ ಪತ್ರಿಕೆ' ಇವತ್ತಿಗೂ ಗೌರವ ಪ್ರತಿ ಕಳುಹಿಸುವ ಸಂಸ್ಕೃತಿಯನ್ನು ಬಿಟ್ಟಿಲ್ಲ. ಅಷ್ಟೇಕೆ, ಯಾರ ಕುರಿತು ಲೇಖನ ಪ್ರಕಟವಾಗಿದೆಯೋ ಆ ವ್ಯಕ್ತಿಗೂ ಒಂದು ಕಾಂಪ್ಲಮೆಂಟರಿ ಕಾಪಿ ಮುದ್ದಾಂ ಹೋಗುತ್ತದೆ! ವಿಜಯ ಕರ್ನಾಟಕವೂ ನಾಚಿಕೊಳ್ಳುವಂತೆ ಸಾಕಷ್ಟು ಗಟ್ಟಿ ಚೆಕ್ ಕೂಡ ಲೇಖಕರಿಗೆ ನಿಕ್ಕಿ!
ಕೃಷಿ ನಿಯತಕಾಲಿಕಗಳಿಗೆ ಮಾದರಿ ಎನ್ನುವಂತಾದ್ದು ಅಡಿಕೆ ಪತ್ರಿಕೆ' ಮಾಸಿಕ. ನುಡಿಚಿತ್ರಕಾರ, ನೆಲ - ಜಲ ವಿಚಾರತಜ್ಞ ಶ್ರೀಪಡ್ರೆಯವರ ನೇತೃತ್ವದಲ್ಲಿ ರೂಪಗೊಂಡಿರುವ ಅಪ'ಕ್ಕೆ ಈಗ 22ರ ಪ್ರಾಯ. ಪ್ರಕಟಿಸುವ ಪ್ರತಿ ವಿಷಯವನ್ನು ಹಲವು ಕೋನಗಳಿಂದ ವಿಶ್ಲೇಷಿಸಿಯೇ ಪ್ರಕಟಿಸುವ ಇದರ ಧ್ಯೇಯ ರೈತಪರವಾದದ್ದು. ಇದ್ದಕ್ಕಿದ್ದಂತೆ ಲಾಭಕರ ಬೆಳೆ, ಭರ್ಜರಿ ಆದಾಯ ಎನ್ನುವಂತ ಸುಳ್ಳು ಸುಳ್ಳೇ ಲೇಖನಗಳು ಇದರಲ್ಲಿ ಪ್ರಕಟವಾಗುವುದಿಲ್ಲ. ಅನುಭವಿ ರೈತರ, ಕೃಷಿಲೋಕದ ಲೇಖಕರ ಬರಹಗಳು ಸುಲಭವಾಗಿ ಓದಿಸಿಕೊಂಡು ಹೋಗುತ್ತವೆ. ಹಾಗೆಯೇ ಎರೆಗೊಬ್ಬರ, ನೀರು ಇಂಗಿಸುವಿಕೆ, ಹಲಸು ಮುಂತಾದ ಬೆಳೆಗಳ ಮೌಲ್ಯವರ್ಧನೆ....... ಹೀಗೆ ಒಂದು ವಿಚಾರದಲ್ಲಿ ರೈತರಿಗೆ ಮನದಟ್ಟಾಗುವಂತೆ ಬರಹ ಆಂದೋಲನವನ್ನೇ ಹಮ್ಮಿಕೊಳ್ಳುವುದು ಅಡಿಕೆ ಪತ್ರಿಕೆಯ ಹೆಗ್ಗಳಿಕೆ. ಬಹುಷಃ ಕೃಷಿಕರ ಕೈಯಲ್ಲಿ ಮೊತ್ತಮೊದಲ ಬಾರಿಗೆ ಕತ್ತಿ, ಗುದ್ದಲಿಯ ಜಾಗದಲ್ಲಿ ಪೆನ್ನು ಹಿಡಿಸಿದ ಶ್ರೇಯಸ್ಸೂ ಅಪಕ್ಕೆ. ಶ್ರೀಪಡ್ರೆ ಹಿಂಸರಿದಿದ್ದ ಕೆಲಕಾಲ ಅಪ ಕಳೆಗುಂದಿತ್ತು. ಮತ್ತೆ ಈಗ ನಳನಳಿಸುತ್ತಿದೆ.
ಬಹುಷಃ ಇದಕ್ಕೆ ಅಡಿಕೆ ಪತ್ರಿಕೆ' ಎಂಬ ಶೀರ್ಷಿಕೆಯಿರುವುದೇ ಒಂದು ಸಮಸ್ಯೆಯಾಗಿರಲಿಕ್ಕೆ ಸಾಕು. ಅಡಿಕೆ ಬೆಳೆಯ ಹೊರತಾದ ಕೃಷಿಕರು ಇದು ತನಗಲ್ಲ ಎಂದುಕೊಂಡುಬಿಡುತ್ತಾರೆ. ಅಡಿಕೆ ಪತ್ರಿಕೆ ಹಾಗೇನೂ ಇಲ್ಲ. ಇದು ಎಲ್ಲ ಬೆಳೆಗಳ ಉಳುಮೆದಾರರಿಗೂ ಅನುಕೂಲಕರ. ಅದು ಮಾತ್ರವಲ್ಲ, ಕೃಷಿ ಜಗತ್ತಿನ ಮಾಹಿತಿ ನಮ್ಮಲ್ಲಿರಬೇಕು ಎಂದು ಬಯಸುವವರೆಲ್ಲ ತರಿಸಿಕೊಳ್ಳಲೇಬೇಕು.
ಯಾವುದೇ ಮುಖ್ಯವಾಹಿನಿಯ ಪತ್ರಿಕೆ ಅಚ್ಚರಿಪಡುವ ಮಟ್ಟಿಗೆ 'ಅಪ' ಅಂತರ್ಜಾಲವನ್ನು ಬಳಸಿಕೊಳ್ಳುತ್ತಿದೆ. ಇಂದು 'ಅಪ'ದ ನೆಟ್ ಆವೃತ್ತಿ ಲಭ್ಯ. ಬೇಕಿದ್ದರೆ ನೀವೇ ಹುಡುಕಿಕೊಳ್ಳಿ. ಬೇಕೆಂದೇ ಆ ಲಿಂಕ್ನ್ನು ತಿಳಿಸುತ್ತಿಲ್ಲ. ಹಾಗೆಯೇ ಅದರ ಚಂದಾದರದ ಬಗ್ಗೆಯೂ ಉಸುರುತ್ತಿಲ್ಲ. ಆಸಕ್ತರಿಗೆ ಇಷ್ಟು ಮಾಹಿತಿ ಸಾಕು. ಹುಡುಕಿಕೊಳ್ಳುತ್ತಾರೆ, ಅಲ್ಲವೇ?
ಅಡಿಕೆ ಪತ್ರಿಕೆಯ ವಿಳಾಸ : ಅಂಚೆ ಪಟ್ಟಿಗೆ ಸಂಖ್ಯೆ 29, ಭಟ್ ಬಿಲ್ಡಿಂಗ್, ಏಳ್ಮುಡಿ, ಪುತ್ತೂರು - 574201
ಲೇಖಕರ ವಿಳಾಸ : ಮಾ.ವೆಂ.ಸ.ಪ್ರಸಾದ್, ಮಾವಿನಸರ, ಪೋಸ್ಟ್-ಎಡಜಿಗಳೇಮನೆ. ಸಾಗರ ತಾ. ಶಿವಮೊಗ್ಗ ಜಿ. 577401 ಫೋನ್-08183 236068, 98864 07592 ಇ ಮೇಲ್ : [email protected]
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications