ಅಡಿಕೆ ಪತ್ರಿಕೆ' ಓದೋಕೆ ಸಂಕೋಚ ಏಕೆ?

ಆದರೆ ದೂರದ ಪುತ್ತೂರಿನಿಂದ ಪ್ರಕಟಗೊಳ್ಳುವ ಅಡಿಕೆ ಪತ್ರಿಕೆ' ಇವತ್ತಿಗೂ ಗೌರವ ಪ್ರತಿ ಕಳುಹಿಸುವ ಸಂಸ್ಕೃತಿಯನ್ನು ಬಿಟ್ಟಿಲ್ಲ. ಅಷ್ಟೇಕೆ, ಯಾರ ಕುರಿತು ಲೇಖನ ಪ್ರಕಟವಾಗಿದೆಯೋ ಆ ವ್ಯಕ್ತಿಗೂ ಒಂದು ಕಾಂಪ್ಲಮೆಂಟರಿ ಕಾಪಿ ಮುದ್ದಾಂ ಹೋಗುತ್ತದೆ! ವಿಜಯ ಕರ್ನಾಟಕವೂ ನಾಚಿಕೊಳ್ಳುವಂತೆ ಸಾಕಷ್ಟು ಗಟ್ಟಿ ಚೆಕ್ ಕೂಡ ಲೇಖಕರಿಗೆ ನಿಕ್ಕಿ!
ಕೃಷಿ ನಿಯತಕಾಲಿಕಗಳಿಗೆ ಮಾದರಿ ಎನ್ನುವಂತಾದ್ದು ಅಡಿಕೆ ಪತ್ರಿಕೆ' ಮಾಸಿಕ. ನುಡಿಚಿತ್ರಕಾರ, ನೆಲ - ಜಲ ವಿಚಾರತಜ್ಞ ಶ್ರೀಪಡ್ರೆಯವರ ನೇತೃತ್ವದಲ್ಲಿ ರೂಪಗೊಂಡಿರುವ ಅಪ'ಕ್ಕೆ ಈಗ 22ರ ಪ್ರಾಯ. ಪ್ರಕಟಿಸುವ ಪ್ರತಿ ವಿಷಯವನ್ನು ಹಲವು ಕೋನಗಳಿಂದ ವಿಶ್ಲೇಷಿಸಿಯೇ ಪ್ರಕಟಿಸುವ ಇದರ ಧ್ಯೇಯ ರೈತಪರವಾದದ್ದು. ಇದ್ದಕ್ಕಿದ್ದಂತೆ ಲಾಭಕರ ಬೆಳೆ, ಭರ್ಜರಿ ಆದಾಯ ಎನ್ನುವಂತ ಸುಳ್ಳು ಸುಳ್ಳೇ ಲೇಖನಗಳು ಇದರಲ್ಲಿ ಪ್ರಕಟವಾಗುವುದಿಲ್ಲ. ಅನುಭವಿ ರೈತರ, ಕೃಷಿಲೋಕದ ಲೇಖಕರ ಬರಹಗಳು ಸುಲಭವಾಗಿ ಓದಿಸಿಕೊಂಡು ಹೋಗುತ್ತವೆ. ಹಾಗೆಯೇ ಎರೆಗೊಬ್ಬರ, ನೀರು ಇಂಗಿಸುವಿಕೆ, ಹಲಸು ಮುಂತಾದ ಬೆಳೆಗಳ ಮೌಲ್ಯವರ್ಧನೆ....... ಹೀಗೆ ಒಂದು ವಿಚಾರದಲ್ಲಿ ರೈತರಿಗೆ ಮನದಟ್ಟಾಗುವಂತೆ ಬರಹ ಆಂದೋಲನವನ್ನೇ ಹಮ್ಮಿಕೊಳ್ಳುವುದು ಅಡಿಕೆ ಪತ್ರಿಕೆಯ ಹೆಗ್ಗಳಿಕೆ. ಬಹುಷಃ ಕೃಷಿಕರ ಕೈಯಲ್ಲಿ ಮೊತ್ತಮೊದಲ ಬಾರಿಗೆ ಕತ್ತಿ, ಗುದ್ದಲಿಯ ಜಾಗದಲ್ಲಿ ಪೆನ್ನು ಹಿಡಿಸಿದ ಶ್ರೇಯಸ್ಸೂ ಅಪಕ್ಕೆ. ಶ್ರೀಪಡ್ರೆ ಹಿಂಸರಿದಿದ್ದ ಕೆಲಕಾಲ ಅಪ ಕಳೆಗುಂದಿತ್ತು. ಮತ್ತೆ ಈಗ ನಳನಳಿಸುತ್ತಿದೆ.
ಬಹುಷಃ ಇದಕ್ಕೆ ಅಡಿಕೆ ಪತ್ರಿಕೆ' ಎಂಬ ಶೀರ್ಷಿಕೆಯಿರುವುದೇ ಒಂದು ಸಮಸ್ಯೆಯಾಗಿರಲಿಕ್ಕೆ ಸಾಕು. ಅಡಿಕೆ ಬೆಳೆಯ ಹೊರತಾದ ಕೃಷಿಕರು ಇದು ತನಗಲ್ಲ ಎಂದುಕೊಂಡುಬಿಡುತ್ತಾರೆ. ಅಡಿಕೆ ಪತ್ರಿಕೆ ಹಾಗೇನೂ ಇಲ್ಲ. ಇದು ಎಲ್ಲ ಬೆಳೆಗಳ ಉಳುಮೆದಾರರಿಗೂ ಅನುಕೂಲಕರ. ಅದು ಮಾತ್ರವಲ್ಲ, ಕೃಷಿ ಜಗತ್ತಿನ ಮಾಹಿತಿ ನಮ್ಮಲ್ಲಿರಬೇಕು ಎಂದು ಬಯಸುವವರೆಲ್ಲ ತರಿಸಿಕೊಳ್ಳಲೇಬೇಕು.
ಯಾವುದೇ ಮುಖ್ಯವಾಹಿನಿಯ ಪತ್ರಿಕೆ ಅಚ್ಚರಿಪಡುವ ಮಟ್ಟಿಗೆ 'ಅಪ' ಅಂತರ್ಜಾಲವನ್ನು ಬಳಸಿಕೊಳ್ಳುತ್ತಿದೆ. ಇಂದು 'ಅಪ'ದ ನೆಟ್ ಆವೃತ್ತಿ ಲಭ್ಯ. ಬೇಕಿದ್ದರೆ ನೀವೇ ಹುಡುಕಿಕೊಳ್ಳಿ. ಬೇಕೆಂದೇ ಆ ಲಿಂಕ್ನ್ನು ತಿಳಿಸುತ್ತಿಲ್ಲ. ಹಾಗೆಯೇ ಅದರ ಚಂದಾದರದ ಬಗ್ಗೆಯೂ ಉಸುರುತ್ತಿಲ್ಲ. ಆಸಕ್ತರಿಗೆ ಇಷ್ಟು ಮಾಹಿತಿ ಸಾಕು. ಹುಡುಕಿಕೊಳ್ಳುತ್ತಾರೆ, ಅಲ್ಲವೇ?
ಅಡಿಕೆ ಪತ್ರಿಕೆಯ ವಿಳಾಸ : ಅಂಚೆ ಪಟ್ಟಿಗೆ ಸಂಖ್ಯೆ 29, ಭಟ್ ಬಿಲ್ಡಿಂಗ್, ಏಳ್ಮುಡಿ, ಪುತ್ತೂರು - 574201
ಲೇಖಕರ ವಿಳಾಸ : ಮಾ.ವೆಂ.ಸ.ಪ್ರಸಾದ್, ಮಾವಿನಸರ, ಪೋಸ್ಟ್-ಎಡಜಿಗಳೇಮನೆ. ಸಾಗರ ತಾ. ಶಿವಮೊಗ್ಗ ಜಿ. 577401 ಫೋನ್-08183 236068, 98864 07592 ಇ ಮೇಲ್ : [email protected]
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications