ಹೈಬ್ರಿಡ್ ರೈತನಿಗೆ ದಾರಿಬಿಡಿ!

ಪಾಟಿಯಾಲಾದ ಗ್ಯಾನಿ ಜೈಲ್ ಸಿಂಗ್ ಕೃಷಿ ಸಂಶೋಧನಾಲಯದ ನೂತನ ಪ್ರಯೋಗ ಶಾಲೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಕೇಂದ್ರ ಕೃಷಿ ಸಚಿವ ಶರದ್ ಪವಾರ್, ಇನ್ನು ಕೆಲವೇ ವರ್ಷಗಳಲ್ಲಿ ದೇಶದ ಹಳ್ಳಿ-ಹಳ್ಳಿಗಳಲ್ಲೂ ಉತ್ತಮ ತಳಿಯ ರೈತರು ಕಂಡು ಬರಲಿದ್ದು, ರೈತರ ಆತ್ಮಹತ್ಯೆ ಎಂಬುದು ಸಂಪೂರ್ಣವಾಗಿ ಮರೆತ ಮಾತಾಗಲಿದೆ ಎಂದರು. "ಇಲ್ಲಿಯವರೆಗೆ ಕೃಷಿ ಸಂಶೋಧನೆ ಎಂದರೆ ಉತ್ತಮ ತಳಿಯ ಬಿತ್ತನೆ ಬೀಜಗಳ ಅಭಿವೃದ್ಧಿ, ಉತ್ತಮ ಮಟ್ಟದ ಗೊಬ್ಬರ, ಕ್ರಿಮಿ ನಾಶಕಗಳ ಉತ್ಪಾದನೆ ಎಂಬ ಅಭಿಪ್ರಾಯವಿತ್ತು. ಆದರೆ, ಇವು ಯಾವುದೂ ರೈತರ ಬವಣೆ ಮತ್ತು ಆತ್ಮಹತ್ಯೆಯ ಸುದ್ದಿಗಳ ಇರುಸು-ಮುರುಸನ್ನು ಕಡಿಮೆ ಮಾಡಲಿಲ್ಲ. ಹೀಗಾಗಿ, ಸರ್ಕಾರ ಬೇರೊಂದು ದಿಕ್ಕಿನಲ್ಲಿ ಯೋಚಿಸುವ ಪ್ರಮೇಯ ಒದಗಿತು" ಎಂದ ಪವಾರ್, "ಇನ್ನು ಮುಂದೆ ದೇಶದ ಜನತೆ ಯಾವುದೇ ಯೋಚನೆ ಇಲ್ಲದೆ ಐ.ಪಿ.ಎಲ್. ಪಂದ್ಯಾವಳಿಗಳನ್ನು ನೋಡಬಹುದು" ಎಂದು ನುಡಿದರು.
ಪ್ರಯೋಗಾಲಯದ ಮುಖ್ಯ ನಿರ್ದೇಶಕ ಡಾ.ಬೇಜಾನ್ ಸಿಂಗ್ ಮಾತನಾಡಿ, ತಮ್ಮ ಪ್ರಯೋಗಶಾಲೆಯಲ್ಲಿ ಅಭಿವೃದ್ಧಿಪಡೆಸಲಿರುವ ರೈತ ಹಲವಾರು ಉತ್ತಮ ಗುಣಗಳನ್ನು ಹೊಂದಿರುತ್ತಾನೆ ಎಂದರಲ್ಲದೆ "ನಮ್ಮ ಪ್ರಯೋಗಾಲಯದಿಂದ ಹೊರಬರುವ ರೈತ ಆಶಾವಾದಿ, ಶ್ರಮಜೀವಿ ಮಾತ್ರವಲ್ಲದೆ ಸ್ಫುರದ್ರೂಪಿ ಸಹ ಆಗಿರುತ್ತಾನೆ. ಬೆಳಗಿನಿಂದ ಸಂಜೆಯವರೆಗೆ ತನ್ನ ಹೊಲ ಗದ್ದೆಗಳಲ್ಲಿ ದುಡಿಯುವ ಈ ಉತ್ತಮ ತಳಿಯ ರೈತ, ಸಂಜೆಯ ನಂತರ, ನಗರ ಪ್ರದೇಶಗಳಿಂದ ಬರುವಂತಹ ಪ್ರವಾಸಿಗರಿಗೆ ಮನರಂಜನೆ ನೀಡಲು ಸಂಗೀತ ಮತ್ತು ನೃತ್ಯಗಳಲ್ಲಿ ಅತ್ಯುತ್ತಮ ಪರಿಣತಿ ಸಹ ಹೊಂದಿರುತ್ತಾನೆ. ಇಂತಹ ರೈತನನ್ನು ರೂಪಿಸಲು ನಮ್ಮ ವಿಜ್ಞಾನಿಗಳು ವಿವಿಧ ಭಾಷೆಯ ಹತ್ತು ಹಲವಾರು ಚಲನಚಿತ್ರಗಳನ್ನು ಮತ್ತೆ ಮತ್ತೆ ಸತತವಾಗಿ ನೋಡುತ್ತಿದ್ದಾರೆ" ಎಂದರು.
(ಮಜಾವಾಣಿ ಕೃಷಿ ವಾರ್ತೆ)
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications