ಮಾಗಡಿಯ ರೈತರ ಮೇಲೆ ಗಜಪಡೆ ದಾಳಿ

ರಾಮನಗರ ಜಿಲ್ಲೆಯ ಮಾಗಡಿಯ ಸಾವನದುರ್ಗ ಅರಣ್ಯ ಪ್ರದೇಶದ ಸುತ್ತಮುತ್ತಲ ವ್ಯಾಪ್ತಿಯ ಹಳ್ಳಿಗಳ ರೈತರ ಕೃಷಿ ಭೂಮಿಯ ಮೇಲೆ ಗಜಪಡೆಯ ನಿರಂತರ ದಾಳಿಯಿಂದ ಬೆಳೆದ ಬೆಳೆ ಮಣ್ಣು ಪಾಲಾಗುತ್ತಿದೆ. ಆನೆಗಳ ದಾಳಿಯಿಂದ ಬೆಳೆ ನಷ್ಟ ಮಾಡಿಕೊಂಡ ರೈತರು ಮುಂದಿನ ದಾರಿ ಕಾಣದೇ ತಲೆ ಮೇಲೆ ಕೈಹೊತ್ತು ಕುಳಿತುಕೊಳ್ಳುವಂತಾಗಿದೆ.
ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಸಾವನದುರ್ಗ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತಿರುವ ನಾಯ್ಕನಪಾಳ್ಯ ಸುತ್ತಮುತ್ತಲ ವ್ಯಾಪ್ತಿಯ ಹಳ್ಳಿಗಳಲ್ಲಿ ವರ್ಷಕ್ಕೆ ಐದಾರು ಬಾರಿಯಾದರೂ ಬೆಳೆದ ಬೆಳೆಗಳ ಮೇಲೆ ಗಜಪಡೆ ದಾಳಿ ನಡೆಯುತ್ತಲೇ ಇದೆ. ರೈತಾಪಿ ವರ್ಗದವರು ಇರುವ ಜಮೀನಿನಲ್ಲಿ ಮಿಶ್ರತಳಿಯ ಬೇಸಾಯ ಮಾಡಿಕೊಂಡು ತಮ್ಮ ಬದುಕಿನ ಮಾರ್ಗವನ್ನ ಕಂಡು ಕೊಂಡಿದ್ದಾರೆ. ಆದರೆ ವರ್ಷದಲ್ಲಿ ಐದಾರು ಬಾರಿಯಾದರೂ ಗಜಪಡೆಗಳು ಸಮೀಪದಲ್ಲೇ ಅರಣ್ಯ ಪ್ರದೇಶವಿರುವುದರಿಂದ ರೈತರ ಕೃಷಿ ಭೂಮಿಯ ಮೇಲೆ ದಾಳಿಯಿಡುತ್ತಿವೆ.
ಇದರಿಂದ ಈ ಬಾರಿ ಹತ್ತಾರು ಎಕರೆ ಜಮೀನಿನಲ್ಲಿ ಬಾಳೆ, ತೆಂಗು, ಮಾವು, ಸೀಬೆ, ಅಡಿಕೆ ಬೆಳೆಯ ಮೇಲೆ ಆನೆಗಳು ದಾಳಿಯಿಟ್ಟಿರುವುದರಿಂದ ಬೆಳೆದ ಬೆಳೆ ಮಣ್ಣು ಪಾಲಾಗಿ ಹಾಕಿದ ಬಂಡವಾಳ ಕೈಗೆ ಬರದಂತಾಗಿದೆ. ಸಾಲ ಸೋಲ ಮಾಡಿ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿದ ರೈತನ ಬೆಳೆಯನ್ನ ಕ್ಷಣಾರ್ಧದಲ್ಲಿ ಗಜಪಡೆ ನಾಶ ಪಡಿಸುತ್ತಿದೆ. ಇದರಿಂದ ಕುಂಬಾರನಿಗೆ ವರುಷ ಬಡಿಗೆಗೆ ನಿಮಿಷವೆಂಬಂತೆ ವರ್ಷಪೂರಾ ಬೆಳೆದ ಬೆಳೆ ಕ್ಷಣಾರ್ಧದಲ್ಲ ಗಜಗರ್ಭಕ್ಕೆ ಸೇರುತ್ತಿದ್ದು ಅಳಿದುಳಿದಿದ್ದು ಮಣ್ಣುಪಾಲಾಗುತ್ತಿದೆ.
ರೈತರ ಬೆಳೆ ನಷ್ಟಕ್ಕೆ ವೈಜ್ಞಾನಿಕ ರೀತಿಯಲ್ಲಿ ಪರಿಹಾರ ನೀಡುತ್ತಿಲ್ಲವಾದ್ದರಿಂದ ರೈತರು ಸಮಸ್ಯೆಯ ಸುಳಿಯಲ್ಲೇ ಬದುಕುವಂತಾಗಿದೆ. ಈ ಭಾಗದ ವ್ಯಾಪ್ತಿಯ ರೈತರ ಪಾಲಿಗೆ ಮಾರಕವಾಗಿ ಪರಿಣಮಿಸಿದೆ. ಇಷ್ಟೆಲ್ಲಾ ನಡೆಯುತ್ತಿದ್ದರೂ ಅರಣ್ಯ ಇಲಾಖೆ ಗಜಪಡೆಯ ಹಾವಳಿಯನ್ನ ತಡೆಗಟ್ಟುವಲ್ಲಿ ವಿಫಲವಾಗಿದೆ ಇದರಿಂದ ಆತ್ಮಹತ್ಯೆಗೆ ಶರಣಾಗುವ ಪರಿಸ್ಥಿತಿ ಎದುರಾಗಿದೆ ಎಂಬುದು ಪ್ರಗತಿಪರ ರೈತ ನಾಯಕನಪಾಳ್ಯದ ರಂಗಪ್ಪರ ಅಳಲಾಗಿದೆ.
ಮನೆಮಂದಿಯೆಲ್ಲ ಹಗಲಿರುಳು ಕೃಷಿ ಚಟುವಟಿಕೆ ನಡೆಸಿ ಬದುಕಿನ ಬಂಡಿ ತಳ್ಳಲು ಆಶ್ರಯಿಸಿಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ ಅತೀವೃಷ್ಟಿ ಅನಾವೃಷ್ಟಿ ಮತ್ತು ಕೀಟಬಾಧೆಯಿಂದ ಬೆಳೆದ ಫಸಲು ಕೈಗೆ ಸಿಗದೇ ನಷ್ಟಅನುಭವಿಸುವಂತಾಗಿದೆ. ಈ ನಡುವೆ ಕಾಡಿನಲ್ಲಿರಬೇಕಾದ ಗಜಪಡೆ ಅನ್ನದಾತರ ಬೆಳೆಯ ಮೇಲೆ ದಾಳಿ ನಡೆಸುತ್ತಿರುವುದರಿಂದ ಸಮಸ್ಯೆಯ ನಡುವೆ ಬದುಕುವಂತಾಗಿದೆ.
ಸಾಲಸೋಲ ಮಾಡಿ ಬೆಳೆ ಬೆಳೆದು ಜೀವನಕ್ಕೆ ದಾರಿ ಮಾಡಿಕೊಳ್ಳಬಹುದೆಂದು ರೈತರು ಕನಸು ಕಾಣುತ್ತಾರೆ. ಆದರೆ ಅರಣ್ಯ ಇಲಾಖೆಯವರು ಗಜಪಡೆಯ ಹಾವಳಿಯನ್ನ ತಪ್ಪಿಸದಿರುವುದರಿಂದ ಬಾಳೆ, ಮಾವು, ಹಲಸು, ಸೀಬೆ, ಮತ್ತು ಅಡಿಕೆ ಬೆಳೆಗಳನ್ನ ನಾಶ ಮಾಡುತ್ತಿವೆ. ನಿರಂತರವಾಗಿ ನಷ್ಟದಿಂದ ಬೇಸತ್ತಿರುವ ರೈತರಿಗೆ ಸರ್ಕಾರ ಸರಿಯಾದ ರೀತಿಯಲ್ಲಿ ಪರಿಹಾರ ಧನವನ್ನು ನೀಡಬೇಕು ಇಲ್ಲದಿದ್ದಲ್ಲಿ ಆತ್ಯಹತ್ಯೆಯೇ ದಾರಿಯಾಗುತ್ತದೆಂಬುದು ರೈತ ನರಸಿಂಹಮೂರ್ತಿಯವರ ನೋವಿನ ನುಡಿಯಾಗಿದೆ.
ಸಾವನದುರ್ಗ ಅರಣ್ಯ ಪ್ರದೇಶದ ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ಹಲವಾರು ರೈತರ ಕೃಷಿ ಭೂಮಿಯಲ್ಲಿ ಬೆಳೆಯಲಾಗಿದ್ದ ಬೆಳೆಗಳ ಮೇಲೆ ಗಜಪಡೆ ದಾಳಿ ನಡೆಸಿ ನಷ್ಟವನ್ನುಂಟುಮಾಡಿವೆ. ಕಟಾವಿಗೆ ಬಂದಿದ್ದ ಮಾವು, ಅಡಿಕೆ, ಮತ್ತು ಬಾಳೆ ಬೆಳೆ ನೆಲಕ್ಕುರುಳಿ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಮುಂದಿನ ದಿನಗಳಲ್ಲಿ ಕಾಡು ಪ್ರಾಣಿಗಳ ಹಾವಳಿಯನ್ನ ತಡೆಗಟ್ಟಲು ಅರಣ್ಯ ಇಲಾಖೆ ಸೂಕ್ತ ಕ್ರಮಕೈಗೊಂಡು ರೈತರ ಬದುಕನ್ನ ಹಸನುಗೊಳಿಸಬೇಕೆಂಬುದು ರೈತರ ಒತ್ತಾಯವಾಗಿದೆ.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications