ಮಾಗಡಿಯ ರೈತರ ಮೇಲೆ ಗಜಪಡೆ ದಾಳಿ

ರಾಮನಗರ ಜಿಲ್ಲೆಯ ಮಾಗಡಿಯ ಸಾವನದುರ್ಗ ಅರಣ್ಯ ಪ್ರದೇಶದ ಸುತ್ತಮುತ್ತಲ ವ್ಯಾಪ್ತಿಯ ಹಳ್ಳಿಗಳ ರೈತರ ಕೃಷಿ ಭೂಮಿಯ ಮೇಲೆ ಗಜಪಡೆಯ ನಿರಂತರ ದಾಳಿಯಿಂದ ಬೆಳೆದ ಬೆಳೆ ಮಣ್ಣು ಪಾಲಾಗುತ್ತಿದೆ. ಆನೆಗಳ ದಾಳಿಯಿಂದ ಬೆಳೆ ನಷ್ಟ ಮಾಡಿಕೊಂಡ ರೈತರು ಮುಂದಿನ ದಾರಿ ಕಾಣದೇ ತಲೆ ಮೇಲೆ ಕೈಹೊತ್ತು ಕುಳಿತುಕೊಳ್ಳುವಂತಾಗಿದೆ.
ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಸಾವನದುರ್ಗ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತಿರುವ ನಾಯ್ಕನಪಾಳ್ಯ ಸುತ್ತಮುತ್ತಲ ವ್ಯಾಪ್ತಿಯ ಹಳ್ಳಿಗಳಲ್ಲಿ ವರ್ಷಕ್ಕೆ ಐದಾರು ಬಾರಿಯಾದರೂ ಬೆಳೆದ ಬೆಳೆಗಳ ಮೇಲೆ ಗಜಪಡೆ ದಾಳಿ ನಡೆಯುತ್ತಲೇ ಇದೆ. ರೈತಾಪಿ ವರ್ಗದವರು ಇರುವ ಜಮೀನಿನಲ್ಲಿ ಮಿಶ್ರತಳಿಯ ಬೇಸಾಯ ಮಾಡಿಕೊಂಡು ತಮ್ಮ ಬದುಕಿನ ಮಾರ್ಗವನ್ನ ಕಂಡು ಕೊಂಡಿದ್ದಾರೆ. ಆದರೆ ವರ್ಷದಲ್ಲಿ ಐದಾರು ಬಾರಿಯಾದರೂ ಗಜಪಡೆಗಳು ಸಮೀಪದಲ್ಲೇ ಅರಣ್ಯ ಪ್ರದೇಶವಿರುವುದರಿಂದ ರೈತರ ಕೃಷಿ ಭೂಮಿಯ ಮೇಲೆ ದಾಳಿಯಿಡುತ್ತಿವೆ.
ಇದರಿಂದ ಈ ಬಾರಿ ಹತ್ತಾರು ಎಕರೆ ಜಮೀನಿನಲ್ಲಿ ಬಾಳೆ, ತೆಂಗು, ಮಾವು, ಸೀಬೆ, ಅಡಿಕೆ ಬೆಳೆಯ ಮೇಲೆ ಆನೆಗಳು ದಾಳಿಯಿಟ್ಟಿರುವುದರಿಂದ ಬೆಳೆದ ಬೆಳೆ ಮಣ್ಣು ಪಾಲಾಗಿ ಹಾಕಿದ ಬಂಡವಾಳ ಕೈಗೆ ಬರದಂತಾಗಿದೆ. ಸಾಲ ಸೋಲ ಮಾಡಿ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿದ ರೈತನ ಬೆಳೆಯನ್ನ ಕ್ಷಣಾರ್ಧದಲ್ಲಿ ಗಜಪಡೆ ನಾಶ ಪಡಿಸುತ್ತಿದೆ. ಇದರಿಂದ ಕುಂಬಾರನಿಗೆ ವರುಷ ಬಡಿಗೆಗೆ ನಿಮಿಷವೆಂಬಂತೆ ವರ್ಷಪೂರಾ ಬೆಳೆದ ಬೆಳೆ ಕ್ಷಣಾರ್ಧದಲ್ಲ ಗಜಗರ್ಭಕ್ಕೆ ಸೇರುತ್ತಿದ್ದು ಅಳಿದುಳಿದಿದ್ದು ಮಣ್ಣುಪಾಲಾಗುತ್ತಿದೆ.
ರೈತರ ಬೆಳೆ ನಷ್ಟಕ್ಕೆ ವೈಜ್ಞಾನಿಕ ರೀತಿಯಲ್ಲಿ ಪರಿಹಾರ ನೀಡುತ್ತಿಲ್ಲವಾದ್ದರಿಂದ ರೈತರು ಸಮಸ್ಯೆಯ ಸುಳಿಯಲ್ಲೇ ಬದುಕುವಂತಾಗಿದೆ. ಈ ಭಾಗದ ವ್ಯಾಪ್ತಿಯ ರೈತರ ಪಾಲಿಗೆ ಮಾರಕವಾಗಿ ಪರಿಣಮಿಸಿದೆ. ಇಷ್ಟೆಲ್ಲಾ ನಡೆಯುತ್ತಿದ್ದರೂ ಅರಣ್ಯ ಇಲಾಖೆ ಗಜಪಡೆಯ ಹಾವಳಿಯನ್ನ ತಡೆಗಟ್ಟುವಲ್ಲಿ ವಿಫಲವಾಗಿದೆ ಇದರಿಂದ ಆತ್ಮಹತ್ಯೆಗೆ ಶರಣಾಗುವ ಪರಿಸ್ಥಿತಿ ಎದುರಾಗಿದೆ ಎಂಬುದು ಪ್ರಗತಿಪರ ರೈತ ನಾಯಕನಪಾಳ್ಯದ ರಂಗಪ್ಪರ ಅಳಲಾಗಿದೆ.
ಮನೆಮಂದಿಯೆಲ್ಲ ಹಗಲಿರುಳು ಕೃಷಿ ಚಟುವಟಿಕೆ ನಡೆಸಿ ಬದುಕಿನ ಬಂಡಿ ತಳ್ಳಲು ಆಶ್ರಯಿಸಿಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ ಅತೀವೃಷ್ಟಿ ಅನಾವೃಷ್ಟಿ ಮತ್ತು ಕೀಟಬಾಧೆಯಿಂದ ಬೆಳೆದ ಫಸಲು ಕೈಗೆ ಸಿಗದೇ ನಷ್ಟಅನುಭವಿಸುವಂತಾಗಿದೆ. ಈ ನಡುವೆ ಕಾಡಿನಲ್ಲಿರಬೇಕಾದ ಗಜಪಡೆ ಅನ್ನದಾತರ ಬೆಳೆಯ ಮೇಲೆ ದಾಳಿ ನಡೆಸುತ್ತಿರುವುದರಿಂದ ಸಮಸ್ಯೆಯ ನಡುವೆ ಬದುಕುವಂತಾಗಿದೆ.
ಸಾಲಸೋಲ ಮಾಡಿ ಬೆಳೆ ಬೆಳೆದು ಜೀವನಕ್ಕೆ ದಾರಿ ಮಾಡಿಕೊಳ್ಳಬಹುದೆಂದು ರೈತರು ಕನಸು ಕಾಣುತ್ತಾರೆ. ಆದರೆ ಅರಣ್ಯ ಇಲಾಖೆಯವರು ಗಜಪಡೆಯ ಹಾವಳಿಯನ್ನ ತಪ್ಪಿಸದಿರುವುದರಿಂದ ಬಾಳೆ, ಮಾವು, ಹಲಸು, ಸೀಬೆ, ಮತ್ತು ಅಡಿಕೆ ಬೆಳೆಗಳನ್ನ ನಾಶ ಮಾಡುತ್ತಿವೆ. ನಿರಂತರವಾಗಿ ನಷ್ಟದಿಂದ ಬೇಸತ್ತಿರುವ ರೈತರಿಗೆ ಸರ್ಕಾರ ಸರಿಯಾದ ರೀತಿಯಲ್ಲಿ ಪರಿಹಾರ ಧನವನ್ನು ನೀಡಬೇಕು ಇಲ್ಲದಿದ್ದಲ್ಲಿ ಆತ್ಯಹತ್ಯೆಯೇ ದಾರಿಯಾಗುತ್ತದೆಂಬುದು ರೈತ ನರಸಿಂಹಮೂರ್ತಿಯವರ ನೋವಿನ ನುಡಿಯಾಗಿದೆ.
ಸಾವನದುರ್ಗ ಅರಣ್ಯ ಪ್ರದೇಶದ ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ಹಲವಾರು ರೈತರ ಕೃಷಿ ಭೂಮಿಯಲ್ಲಿ ಬೆಳೆಯಲಾಗಿದ್ದ ಬೆಳೆಗಳ ಮೇಲೆ ಗಜಪಡೆ ದಾಳಿ ನಡೆಸಿ ನಷ್ಟವನ್ನುಂಟುಮಾಡಿವೆ. ಕಟಾವಿಗೆ ಬಂದಿದ್ದ ಮಾವು, ಅಡಿಕೆ, ಮತ್ತು ಬಾಳೆ ಬೆಳೆ ನೆಲಕ್ಕುರುಳಿ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಮುಂದಿನ ದಿನಗಳಲ್ಲಿ ಕಾಡು ಪ್ರಾಣಿಗಳ ಹಾವಳಿಯನ್ನ ತಡೆಗಟ್ಟಲು ಅರಣ್ಯ ಇಲಾಖೆ ಸೂಕ್ತ ಕ್ರಮಕೈಗೊಂಡು ರೈತರ ಬದುಕನ್ನ ಹಸನುಗೊಳಿಸಬೇಕೆಂಬುದು ರೈತರ ಒತ್ತಾಯವಾಗಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications