ಕಾವೇರಿ ತವರಲ್ಲಿ ಮುಂಗಾರು ಮಳೆಯಲ್ಲಿ..

ಕಳೆದರೆಡು ದಿನಗಳಿಂದ ತಲಕಾವೇರಿ ವ್ಯಾಪ್ತಿಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಕಾವೇರಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿದ್ದು ಈ ವರ್ಷದಲ್ಲಿ ಇದೇ ಪ್ರಥಮ ಬಾರಿಗೆ ಭಾಗಮಂಡಲ ಜಲಾವೃತಗೊಂಡಿದೆ.
ದ್ವೀಪವಾದ ಸಂಗಮ:ಇಲ್ಲಿನ ಸಂಗಮದಲ್ಲಿ ನೀರು ಹೆಚ್ಚಳವಾಗುತ್ತಿದ್ದು, ಭಾಗಮಂಡಲ ನಾಪೋಕ್ಲು ಸಂಪರ್ಕ ಕಲ್ಪಿಸುವ ರಸ್ತೆಯ ಮೇಲೆ ನೀರು ಹರಿದು ಹೋಗುತ್ತಿರುವುದರಿಂದ ಸಂಪರ್ಕ ಕಡಿದುಕೊಂಡಿದೆ. ಮತ್ತೊಂದೆಡೆ ಭಾಗಮಂಡಲ ಹಾಗೂ ಮಡಿಕೇರಿ ಸಂಪರ್ಕ ಕಲ್ಪಿಸುವ ರಸ್ತೆಯ ಮೇಲೂ ನೀರು ಹರಿದು ಬರುತ್ತಿದ್ದು ಸಂಪರ್ಕ ಕಳೆದುಕೊಂಡು ದ್ವೀಪವಾಗಿ ಪರಿಣಮಿಸಿದೆ.
ಕಳೆದ ವರ್ಷ ಇದೇ ವೇಳೆಗೆ ಹಲವು ಬಾರಿ ಭಾಗಮಂಡಲ ಜಲಾವೃತವಾಗಿತ್ತಾದರೂ ಈ ಬಾರಿ ಪ್ರವಾಹ ಬಂದಿರುವುದು ಇದೇ ಮೊದಲಾಗಿದೆ. ನಿನ್ನೆ ರಾತ್ರಿಯಿಂದ ಭಾರಿ ಮಳೆ ಸುರಿಯುತ್ತಿರುವುದರಿಂದ ಸುತ್ತ ಮುತ್ತಲಿನ ತೊರೆಗಳು ತುಂಬಿ ಹರಿಯುತ್ತಿವೆ. ಹೀಗಾಗಿ ಗದ್ದೆ ಬಯಲುಗಳು ಜಲಾವೃತಗೊಂಡಿವೆ.
ಭಾಗಮಂಡಲ ವ್ಯಾಪ್ತಿಯಲ್ಲಿ ಎಲ್ಲಿ ನೋಡಿದರತ್ತ ಬರೀ ನೀರೇ ಕಂಡು ಬರುತ್ತಿದೆ. ಜಿಲ್ಲಾಡಳಿತ ಪ್ರವಾಹವನ್ನು ಎದುರಿಸಲು ಸಮರ್ಪಕ ಸಿದ್ಧತೆ ಮಾಡಿಕೊಂಡಿದ್ದು, ಅಧಿಕಾರಿಗಳು ಪ್ರವಾಹ ಸಾಧ್ಯತೆ ಇರುವ ಪ್ರದೇಶಗಳಲ್ಲಿ ಮೊಕ್ಕಾಂ ಹೂಡಿದ್ದಾರೆ.
ಚುರುಕುಕೊಂಡ ಕೃಷಿ ಚಟುವಟಿಕೆ:ಕೊಡಗಿನಲ್ಲಿ ಮಳೆ ಈ ಬಾರಿ ತಡವಾಗಿ ಆರಂಭಗೊಂಡಿದ್ದರಿಂದ ರೈತರು ಭತ್ತ ಬೆಳೆಯಲು ಸಾಧ್ಯವಿಲ್ಲವೇನೋ ಎಂಬ ಆತಂಕದಲ್ಲಿದ್ದರು. ಆದರೆ ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಆಶಾದಾಯಕವಾಗಿ ಮಳೆ ಸುರಿಯುತ್ತಿರುವುದರಿಂದ ರೈತರು ಕೃಷಿ ಚಟುವಟಿಕೆಗಳಲ್ಲಿ ನಿರತರಾಗಿರುವುದು ಕಂಡು ಬಂದಿದೆ. ಈಗಾಗಲೇ ಶೇ 50ರಷ್ಟು ನಾಟಿ ಕಾರ್ಯ ಮುಗಿಯ ಬೇಕಿತ್ತಾದರೂ ಮಳೆ ತಡವಾಗಿ ಆರಂಭವಾಗಿರುವುದರಿಂದ ಮಂದಗತಿಯಲ್ಲಿ ಸಾಗುತ್ತಿದೆ.
ಮಡಿಕೇರಿ, ವೀರಾಜಪೇಟೆ ಹಾಗೂ ಸೋಮವಾರಪೇಟೆಗಳಲ್ಲಿಯೂ ಉತ್ತಮ ಮಳೆಯಾಗುತ್ತಿರುವ ಕುರಿತು ವರದಿಯಾಗಿದೆ. ಹಾರಂಗಿ ಜಲಾಶಯದಲ್ಲಿ ನೀರಿನ ಒಳ ಹರಿವು ಹೆಚ್ಚಳವಾಗಿದೆ. ಜಿಲ್ಲೆಯಲ್ಲಿರುವ ಜಲಪಾತಗಳು ಮೈಕೈ ತುಂಬಿಕೊಂಡು ಧುಮುಕಲಾರಂಭಿಸಿವೆ.
ಗ್ಯಾಲರಿ: ಮಳೆ ಬಂತು ಮಳೆ ಕೊಡಗಿನಲ್ಲಿ ಕೊಡೆ ಹಿಡಿದು ನಡೆ
ಕಾವೇರಿ ನದಿ ದಂಡೆಯಲ್ಲಿರುವ ನಿವಾಸಿಗಳಿಗೆ ಸೂಕ್ತ ಸ್ಥಳಗಳಿಗೆ ತೆರಳಲು ಸೂಚನೆ ನೀಡಲಾಗಿದ್ದು, ಗಂಜಿ ಕೇಂದ್ರಗಳ ವ್ಯವಸ್ಥೆಯನ್ನು ಕೂಡ ಮಾಡಲಾಗಿದೆ. ಜಿಲ್ಲೆಯ ಹಲವೆಡೆ ಗಾಳಿ, ಮಳೆಗೆ ಮರಗಳು ವಿದ್ಯುತ್ ತಂತಿ ಮೇಲೆ ಬಿದ್ದಿದ್ದರಿಂದ ಜನತೆ ಕತ್ತಲಲ್ಲಿ ದಿನ ಕಳೆಯುವಂತಾಗಿದೆ.
ಕೊಡಗಿನಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಕೆ.ಆರ್.ಎಸ್.ನಲ್ಲಿಯೂ ಒಳ ಹರಿವು ಹೆಚ್ಚಾಗಿದೆ. ಕೇರಳದ ವೈನಾಡಿನಲ್ಲಿ ಮಳೆಯಾಗುತ್ತಿರುವುದರಿಂದ ಕಬಿನಿ ಜಲಾಶಯ ಕೂಡ ಇನ್ನೆರಡು ದಿನಗಳಲ್ಲಿ ಭರ್ತಿಯಾಗುವ ಸಾಧ್ಯತೆಯಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications