ಮಿತ್ತಲ್ ಕಂಪೆನಿ ವಿರುದ್ಧ ಆಹೋರಾತ್ರಿ ಪ್ರತಿಭಟನೆ

ಈ ಕೈಗಾರಿಕೆಗಳ ಭೂ ಸಂತ್ರಸ್ತ ರೈತರ ಹೋರಾಟ ಸಮಿತಿ ಸಂಚಾಲಕ ಎಂ. ಬಸವರಾಜ್ ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕುಡತಿನಿ, ಹರಗಿನಡೋಣಿ, ವೇಣಿವೀರಾಪುರ, ಕೊಳಗಲ್ಲು, ಎರ್ರಂಗಳಿ, ಸಿದ್ಧಮ್ಮನಹಳ್ಳಿ ಗ್ರಾಮಗಳ ರೈತರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಆಗಸ್ಟ್ 30 ರ ಸೋಮವಾರ ಬೆಳಗ್ಗೆ 10ಗಂಟೆಗೆ ಪ್ರತಿಭಟನೆ ಪ್ರಾರಂಭ. ಆಗಸ್ಟ್ 31ರ ಮಂಗಳವಾರ ಬೆಳಗ್ಗೆ 10ಗಂಟೆಗೆ ಪ್ರತಿಭಟನೆ ಮುಕ್ತಾಯ ಆಗಲಿದೆ ಎಂದು ಅವರು ಹೇಳಿದರು.
ಕುಡತಿನಿ ಗ್ರಾಮವು ಈಗಾಗಲೇ ವಾಡಾ ವ್ಯಾಪ್ತಿಗೆ ಸೇರಿದೆ. ಈ ಗ್ರಾಮದ ಆಸುಪಾಸಿನಲ್ಲಿ ಪ್ರತಿ 30X40 ನಿವೇಶನಕ್ಕೆ 8 ರಿಂದ 15 ಲಕ್ಷ ರು. ಬೆಲೆ ಇದೆ. ಈ ಕಾರಣಕ್ಕಾಗಿ ರೈತರು ಭೂಮಿಯಲ್ಲಿ ಭಾರೀ ಯೋಜನೆಗಳಿಗೆ ನೀಡುತ್ತಿದ್ದು ಸರ್ಕಾರ - ಜಿಲ್ಲಾಡಳಿತ ಪ್ರತೀ ಎಕರೆಗೆ ಕನಿಷ್ಠ 77ಲಕ್ಷ ರು.ಗಳನ್ನು ಪರಿಹಾರವಾಗಿ ನಿಗದಿ ಮಾಡಬೇಕು ಎಂದು ಅವರು ಆಗ್ರಹಿಸಿದರು.












Click it and Unblock the Notifications