ತುಂಗಾ ನಾಲೆಗೆ ನೀರು : ಸಾರ್ವಜನಿಕರಿಗೆ ಎಚ್ಚರಿಕೆ
ಶಿವಮೊಗ್ಗ, ಸೆ.11 : ತುಂಗಾ ಮೇಲ್ದಂಡೆ ಯೋಜನೆ ಮುಖ್ಯ ನಾಲೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರಾಯೋಗಿಕವಾಗಿ ನೀರು ಹರಿಸಲು ತೀರ್ಮಾನಿಸಲಾಗಿದ್ದು, ಯಾವುದೇ ಜನ-ಜಾನುವಾರುಗಳು ನಾಲೆಗೆ ಇಳಿಯದಂತೆ ನೋಡಿಕೊಳ್ಳಲು ಹಾಗೂ ನಾಲೆಯಲ್ಲಿ ನೀರು ಹರಿಯಬಿಡುವಾಗ ಸಾರ್ವಜನಿಕರು ಜಾಗರೂಕತೆಯಿಂದ ಇರಬೇಕೆಂದು ತುಂಗಾ ಮೇಲ್ದಂಡೆ ಯೋಜನೆ ವಲಯದ ಮುಖ್ಯ ಇಂಜಿನಿಯರ್ ಆರ್.ರುದ್ರಯ್ಯ ತಿಳಿಸಿದ್ದಾರೆ.
ಶುಕ್ರವಾರ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಲೆಯ ಕಾಮಗಾರಿಯು 272 ಕಿ.ಮೀಟರ್ನಷ್ಟಿದ್ದು, ಈಗ ಅದರಲ್ಲಿ 156 ಕಿ.ಮೀ.ನಷ್ಟು ನಾಲೆ ಕಾಮಗಾರಿಯು ಮುಗಿದಿದೆ. ಹೀಗಾಗಿ ಇಂದಿನಿಂದ 156 ಕಿ.ಮೀ.ನಷ್ಟು ನಾಲೆಯಲ್ಲಿ ನೀರು ಹರಿಸಲಾಗುವುದೆಂದರು.
ಈ ಯೋಜನೆಯಡಿ ಶಿವಮೊಗ್ಗ, ದಾವಣಗೆರೆ ಹಾಗೂ ಹಾವೇರಿ ಜಿಲ್ಲೆಗಳ ಅಡಿಯಲ್ಲಿ ಬರುವ 80,434 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಯೋಜನೆಯನ್ನು ರೂಪಿಸಲಾಗಿದೆ. ಈ ಯೋಜನೆಯನ್ನು 1991ರಲ್ಲಿ ಸರ್ಕಾರದಿಂದ ಆಡಳಿತಾತ್ಮಕ ಅನುಮೋದನೆ ಪಡೆದು ಪ್ರಾರಂಭಿಸಲಾಯಿತು. ಈ ಯೋಜನೆಯ ಅಂದಾಜು ವೆಚ್ಚ 1,052.33 ಕೋಟಿ ಮೊತ್ತದ ಪರಿಷ್ಕೃತ ಅಂದಾಜಿಗೆ ಅನುಮೋದನೆ ನೀಡಿದ್ದು, ಇಲ್ಲಿಯವರೆಗೆ ಒಟ್ಟು 987ಕೋಟಿ ರೂ. ಖರ್ಚು ಮಾಡಲಾಗಿದೆ ಎಂದು ತಿಳಿಸಿದರು.
ಸುಮಾರು 22 ಸಾವಿರ ಹೆಕ್ಟೇರ್ನಷ್ಟು ನೀರಾವರಿ ಸಾಮರ್ಥ್ಯದ ಗುರಿಯನ್ನು ಹೊಂದಲಾಗಿದೆ. ಇದರಲ್ಲಿ ಶಿವಮೊಗ್ಗ ತಾಲ್ಲೂಕಿನಲ್ಲಿ 686 ಹೆಕ್ಟೇರ್, ಹೊನ್ನಾಳಿ ತಾಲ್ಲೂಕಿನ 5976 ಹೆಕ್ಟೇರ್, ಹರಿಹರ ತಾಲ್ಲೂಕಿನಲ್ಲಿ 593 ಹೆಕ್ಟೇರ್, ಹಿರೇಕೆರೂರು ತಾಲ್ಲೂಕಿನಲ್ಲಿ 8391 ಹೆಕ್ಟೇರ್ ಹಾಗೂ ರಾಣೆಬೆನ್ನೂರು ತಾಲ್ಲೂಕಿನ 6404 ಹೆಕ್ಟೇರ್ ಗಳಷ್ಟು ಕೃಷಿ ಭೂಮಿಗೆ ನೀರನ್ನು ಒದಗಿಸುವ ಉದ್ದೇಶ ಹೊಂದಲಾಗಿದೆ ಎಂದರು.
ಜೊತೆಗೆ ನಾಲೆ ನಿರ್ಮಿಸುವ ಸಲುವಾಗಿ ಭೂಮಿ ಕಳೆದುಕೊಂಡ ಫಲಾನುಭವಿಗಳಿಗೆ 13.32 ಕೋಟಿ ರೂ. ಪರಿಹಾರ ಕೊಡಬೇಕಾಗಿದ್ದು, ಇಲ್ಲಿಯವರೆಗೆ ಸುಮಾರು 9.19 ಕೋಟಿ ರೂ. ಪರಿಹಾರ ವಿತರಿಸಲಾಗಿದೆ. ಹಾಗೆಯೇ, 146 ಫಲಾನುಭವಿಗಳಿಗೆ 158 ನಿವೇಶನಗಳನ್ನು ಮಂಜೂರು ಮಾಡಲಾಗಿದೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು.
ಮುಖ್ಯ ನಾಲೆಯಡಿಯಲ್ಲಿ ಬರುವ ಕೆಲವು ಕಾಮಗಾರಿ ಪೂರ್ಣಗೊಳ್ಳದೆ ಇರುವುದರಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಇಂಧನ ಸಚಿವರ ಆದೇಶದಂತೆ ಕಾಮಗಾರಿಗಳನ್ನು ಸಮಾರೋಪಾದಿಯಲ್ಲಿ ಕೈಗೊಂಡು ಪ್ರಾಯೋಗಿಕವಾಗಿ ಇಂದಿನಿಂದ ನೀರು ಹರಿಸಲಾಗುತ್ತದೆ. ಹೀಗಾಗಿ ಸಾರ್ವಜನಿಕರಿಗೆ ಯಾವುದೇ ಸಮಸ್ಯೆ ಉಂಟಾಗಬಾರದು. ಹೀಗಾಗಿ ಜಾಗರೂಕತೆಯಿಂದ ಇರಲು ಮನವಿ ಮಾಡಿದರು.
-
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ












Click it and Unblock the Notifications