ಅಡಕೆ ಕಾರ್ಯಪಡೆಗೆ 10 ಕೋಟಿ ಅನುದಾನ ಕೊಟ್ಟ ಸರ್ಕಾರ
ಬೆಂಗಳೂರು, ನವೆಂಬರ್ 30 : ಅಡಕೆ ಕಾರ್ಯಪಡೆಯ ಬೇಡಿಕೆಗಳನ್ನು ಈಡೇರಿಸುವುದಾಗಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಭರವಸೆ ಕೊಟ್ಟಿದ್ದರು. ಕಾರ್ಯಪಡೆಗೆ ಈಗ 10 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.
ಅಡಕೆ ಸಂಬಂಧಿತ ಸಂಶೋಧನೆ ಮತ್ತು ಇನ್ನಿತರ ಚಟುವಟಿಕೆಗಳಿಗೆ ಸಹಾಯಕವಾಗುವಂತೆ 10 ಕೋಟಿ ಅನುದಾನವನ್ನು ನೀಡಲಾಗಿದೆ. ತೀರ್ಥಹಳ್ಳಿಯ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ಕಾರ್ಯಪಡೆಯ ಅಧ್ಯಕ್ಷರಾಗಿದ್ದಾರೆ.
ಕರ್ನಾಟಕ ಸರ್ಕಾರ ಅಡಕೆ ಬೆಳೆಗಾರರ ಹಿತರಕ್ಷಣೆಗಾಗಿ ರಾಜ್ಯಮಟ್ಟದ ಕಾರ್ಯಪಡೆಯನ್ನು ರಚನೆ ಮಾಡಿತ್ತು. ಅಕ್ಟೋಬರ್ನಲ್ಲಿ ಆರಗ ಜ್ಞಾನೇಂದ್ರ ನೇತೃತ್ವದ ಕಾರ್ಯಪಡೆ ಹಾಗೂ ಬೆಳೆಗಾರರ ನಿಯೋಗ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ಮಾತುಕತೆ ನಡೆಸಿತ್ತು.

ಕಾರ್ಯಪಡೆಗೆ ಅನುದಾನ ಬಿಡುಗಡೆಯಾಗಿದ್ದು, ಮುಂದಿನ ಕಾರ್ಯ ಚಟವಟಿಕೆ ಕುರಿತು ಶೀಘ್ರದಲ್ಲಿಯೇ ಸಭೆ ಕರೆದು ಚರ್ಚೆ ನಡೆಸಲಾಗುತ್ತದೆ. ಅಡಕೆಯಿಂದ ಆರೋಗ್ಯಕ್ಕೆ ಹಾನಿಯಾಗುವುದಿಲ್ಲ ಎಂಬ ಕುರಿತು ಕ್ಲಿನಿಕಲ್ ವರದಿ ತಯಾರು ಮಾಡುವುದು ಕಾರ್ಯಪಡೆಯ ಮೊದಲ ಆದ್ಯತೆ ಆಗಲಿದೆ.
ಅಡಕೆಯ ಪರ್ಯಾಯ ಉಪಯೋಗದ ಕುರಿತು ಸಂಶೋಧನೆಗಳು ನಡೆಯಬೇಕಿದೆ. ಅಡಕೆ ಬೆಳೆಗಾರರ ವಿರುದ್ಧ ಸುಪ್ರೀಂಕೋರ್ಟ್ನಲ್ಲಿ ಪ್ರಕರಣವೊಂದು ದಾಖಲಾಗಿದೆ. ಅಲ್ಲಿ ವಾದ ಮಂಡನೆ ಮಾಡಲು ಹಿರಿಯ ವಕೀಲರನ್ನು ನೇಮಕ ಮಾಡಬೇಕಿದೆ.
ಕೋವಿಡ್ ಸಂದರ್ಭದಲ್ಲಿ ಗುಟ್ಕಾ, ತಂಬಾಕು ನಿಷೇಧದ ಬಗ್ಗೆ ಚರ್ಚೆಗಳು ಆರಂಭವಾಗಿದೆ. ಇದರಿಂದಾಗಿ ಅಡಕೆ ಬೆಳೆಯುವ ಜಿಲ್ಲೆಗಳ ರೈತರು ಆತಂಕಗೊಂಡಿದ್ದಾರೆ. ರೈತರ ಹಿತವನ್ನು ಕಾಪಾಡಬೇಕು ಎಂದು ಕಾರ್ಯಪಡೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿತ್ತು.
-
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ












Click it and Unblock the Notifications