ಮಳೆ ಕೆಲವರಿಗೆ ಸಂತಸ, ಹಲವರಿಗೆ ಸಂಕಟ

ರೈತರಿಗೆ ಬಿತ್ತನೆಗೆ ಭೂಮಿ ಹದವಾಯಿತು, ಮೃದುವಾಯಿತೆಂಬ ಖುಷಿ, ಪುಟ್ಟ ಮಕ್ಕಳಿಗೆ ಮನೆ ಮುಂದೆ ನಿಂತ ನೀರಲ್ಲ ಕಾಗದದ ದೋಣಿ ಬಿಡುವ ಸಂಭ್ರಮ, ಸುರಿದ ಮಳೆಯಿಂದ ಹುಟ್ಟಿದ ಚಳಿಗೆ ಬೆಚ್ಚಗೆ ಹೊದ್ದುವ ಮಲಗುವ, ಬಿಸಿಬಿಸಿ ಪಕೋಡ ಬೋಂಡ ತಿನ್ನುವ ಉಮೇದು ಹಲವರಿಗೆ. ಕಾದು ಬೆಂಡಾಗಿದ್ದ ಧರಿತ್ರಿ ತಂಪಾದಳಲ್ಲಾ! ಧಗೆ ಅಡಗಿತಲ್ಲಾ ಎಂಬ ಸಮಾಧಾನ ಮೊದಲ ಮಳೆಯ ಮಣ್ಣಿನ ವಾಸನೆ ಅನುಭವಿಸುವ ರಸಿಕತೆ ಕೆಲವರಿಗೆ ಸುರಿದ ಮಳೆಯಿಂದ ಸಿಕ್ಕ ಅನಿರೀಕ್ಷಿತ ಬಿಡುವಿನಿಂದ ಬಹಳ ದಿನಗಳಿಂದ ಉಳಿದ ಬಿಟ್ಟಿದ್ದ ಕೆಲಸಗಳನ್ನು ಪೂರೈಸುವ ಉತ್ಸಾಹ ಮತ್ತೆ ಕೆಲವರಿಗೆ...
ಮತ್ತೆ ಅದೆಷ್ಟು ಜನರಿಗೆ ಅದಿನ್ನಿನ್ಯಾವ ಬಗೆಯ ಸಂತಸವೋ ಉಣಿಸಲಾಗದಂತಹುದು! ಸಂತಸ ಒಂದು ಬದಿಯಾದರೆ, ಮಳೆ ಅನೇಕರಿಗೆ ಅನೇಕ ಬಗೆಯ ತೊಂದರೆಗಳನ್ನು ತೇಲಿಸಿಕೊಂಡು ಬಂದಿರುತ್ತದೆ. ಒಂದೆರಡು ದೃಶ್ಯಗಳು ಹೀಗಿರಬಹುದೆ...
ಬಿಡ ಬಿಡದೇ ಮೂರು ದಿವಸಗಳಿಂದ ಸುರಿಯುತ್ತಿರುವ ಬಿರು ಮಳೆಯಿಂದ ಇವನಂತೂ ಕಂಗಾಲಾಗಿದ್ದಾನೆ, ಒಂದು ದಿನ ಸಾಲ ತಂದು ಹೊಟ್ಟೆ ತುಂಬಿಸಿದ್ದಾಗಿದೆ, ಮತ್ತೆರಡು ದಿನದಿಂದ ಉಪವಾಸ ಜೊತೆಗೆ ಮನೆಯಿಡೀ ಸೋರಿ ಕರೆಯಂತಾಗಿದೆ. ಮೂಲೆಯಲ್ಲೆಲ್ಲೋ ಇವನ ಹೆಂಡತಿ, ಮೂವರು ಹಸಿದ ಮಕ್ಕಳು ಇವನತ್ತಲೇ ತಮ್ಮ ಕಣ್ಣು ಹರಿಸಿ ಕುಳಿತಿದ್ದಾರೆ. ಇವನಿಗೆ ಅವರನ್ನು ನೋಡುವ ಧೈರ್ಯವಿಲ್ಲ. ಅತ್ತ ನೋಡಿದೊಡನೆ ಅಪ್ಪ ಹಸಿವು ಎಂದು ಮಗುವೊಂದು ನುಡಿದುಬಿಟ್ಟರೆ ಇವನೇನು ಮಾಡಬೇಕು? ಸುರಿವ ಮಳೆಗೆ ಶಾಪ ಹಾಕಿ ಸಾಕಾಗಿದ್ದಾನೆ.
ಬೀದಿಯಲ್ಲಿ ತನ್ನ ದಿನವಿಡೀ ಸಣ್ಣ ಪುಟ್ಟ ಸಾಮಾನುಗಳನ್ನು ಹರಿವಿ ಕುಳಿತು ವ್ಯಾಪಾರ ಮಾಡಿ ಹೊಟ್ಟೆ ಹೊರೆದುಕೊಳ್ಳುವ ಫುಟ್ ಪಾತ್ ವ್ಯಾಪಾರಿ, ಮಾರಾಟವಾಗದ ದಿನ ಇವನ ಸಂಸಾರಕ್ಕೆ ಉಪವಾಸವೇ ಗತಿ. ಇವನೊಬ್ಬನದೇ ಸಮಸ್ಯೆಯಲ್ಲ ದಿನಗೂಲಿಯನ್ನು ನಂಬಿ ನೂರಾರು ಜನ ಬದುಕುತ್ತಿದ್ದಾರೆ. ಮಳೆಗಾಲದಲ್ಲಂತೂ ಉಪವಾಸ ಅನಿವಾರ್ಯ, ಕೆಲವೊಮ್ಮೆ ಒಂದು, ಎರಡು ದಿನ ಮತ್ತೆ ಹಲವಾರು ದಿನ ದೀರ್ಘ ಮಳೆ ಬಿಡದೆ ಹುಯ್ಯವ ದಿನಗಳಲ್ಲಿ ಅವರಿಗೊಂದೇ ಯೋಚನೆ, ಹೇಗೆ ತನ್ನ ಸಂಸಾರದ ಹೊಟ್ಟೆ ತುಂಬುವುದು?
ಇವರಿಗೆ ಗೊತ್ತಿರುವುದು, ಪುಟ್ ಪಾತ್ ವ್ಯಾಪಾರವೊಂದೇ! ಬೇರೆ ದಾರಿ ಹಿಡಿದು ನಂಬಿದವರ ಹೊಟ್ಟೆ ತುಂಬಿಸಲು ಮನಸು ಬಾರದು. ಧೋ ಎಂದು ಸುರಿವ ಮಳೆಗೆ ಮನ ಪೂರ್ತಿ ಬೈದು ಹಗುರವಾಗಬೇಕೆಂದು ಕತ್ತನ್ನು ಆಕಾಶದೆಡೆಗೆ ಎತ್ತಿದ್ದಾನೆ, ಅವನಿಗೆ ಅರಿವಿಲ್ಲದೇ ಅವನ ಕಣ್ಣಿಂದ ಧಾರಕಾರ ನೀರು! ಎಷ್ಟೆಲ್ಲಾ ಜನರಿಗೆ ಸಂತಸ ನೀಡುವ ಮಳೆಯೇ ನನ್ನಂತಹ ಕೆಲವೇ ಕೆಲವರಿಗೆ ತೊಂದರೆಯಾದರೂ ಏಕೆ ಸುರಿಸಬೇಕು, ಎಂದು ಎದೆ ತುಂಬಿ ಪ್ರಾಥಿಸುತ್ತೇನೆ.
ಈಗ ಮಳೆ ನಿಂತಿದೆ, ಮತ್ತೆ ಅವನ ವ್ಯಾಪಾರ ಭರದಿಂದ ಪ್ರಾರಂಭವಾಗಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications