ಮಳೆ ಕೆಲವರಿಗೆ ಸಂತಸ, ಹಲವರಿಗೆ ಸಂಕಟ

ರೈತರಿಗೆ ಬಿತ್ತನೆಗೆ ಭೂಮಿ ಹದವಾಯಿತು, ಮೃದುವಾಯಿತೆಂಬ ಖುಷಿ, ಪುಟ್ಟ ಮಕ್ಕಳಿಗೆ ಮನೆ ಮುಂದೆ ನಿಂತ ನೀರಲ್ಲ ಕಾಗದದ ದೋಣಿ ಬಿಡುವ ಸಂಭ್ರಮ, ಸುರಿದ ಮಳೆಯಿಂದ ಹುಟ್ಟಿದ ಚಳಿಗೆ ಬೆಚ್ಚಗೆ ಹೊದ್ದುವ ಮಲಗುವ, ಬಿಸಿಬಿಸಿ ಪಕೋಡ ಬೋಂಡ ತಿನ್ನುವ ಉಮೇದು ಹಲವರಿಗೆ. ಕಾದು ಬೆಂಡಾಗಿದ್ದ ಧರಿತ್ರಿ ತಂಪಾದಳಲ್ಲಾ! ಧಗೆ ಅಡಗಿತಲ್ಲಾ ಎಂಬ ಸಮಾಧಾನ ಮೊದಲ ಮಳೆಯ ಮಣ್ಣಿನ ವಾಸನೆ ಅನುಭವಿಸುವ ರಸಿಕತೆ ಕೆಲವರಿಗೆ ಸುರಿದ ಮಳೆಯಿಂದ ಸಿಕ್ಕ ಅನಿರೀಕ್ಷಿತ ಬಿಡುವಿನಿಂದ ಬಹಳ ದಿನಗಳಿಂದ ಉಳಿದ ಬಿಟ್ಟಿದ್ದ ಕೆಲಸಗಳನ್ನು ಪೂರೈಸುವ ಉತ್ಸಾಹ ಮತ್ತೆ ಕೆಲವರಿಗೆ...
ಮತ್ತೆ ಅದೆಷ್ಟು ಜನರಿಗೆ ಅದಿನ್ನಿನ್ಯಾವ ಬಗೆಯ ಸಂತಸವೋ ಉಣಿಸಲಾಗದಂತಹುದು! ಸಂತಸ ಒಂದು ಬದಿಯಾದರೆ, ಮಳೆ ಅನೇಕರಿಗೆ ಅನೇಕ ಬಗೆಯ ತೊಂದರೆಗಳನ್ನು ತೇಲಿಸಿಕೊಂಡು ಬಂದಿರುತ್ತದೆ. ಒಂದೆರಡು ದೃಶ್ಯಗಳು ಹೀಗಿರಬಹುದೆ...
ಬಿಡ ಬಿಡದೇ ಮೂರು ದಿವಸಗಳಿಂದ ಸುರಿಯುತ್ತಿರುವ ಬಿರು ಮಳೆಯಿಂದ ಇವನಂತೂ ಕಂಗಾಲಾಗಿದ್ದಾನೆ, ಒಂದು ದಿನ ಸಾಲ ತಂದು ಹೊಟ್ಟೆ ತುಂಬಿಸಿದ್ದಾಗಿದೆ, ಮತ್ತೆರಡು ದಿನದಿಂದ ಉಪವಾಸ ಜೊತೆಗೆ ಮನೆಯಿಡೀ ಸೋರಿ ಕರೆಯಂತಾಗಿದೆ. ಮೂಲೆಯಲ್ಲೆಲ್ಲೋ ಇವನ ಹೆಂಡತಿ, ಮೂವರು ಹಸಿದ ಮಕ್ಕಳು ಇವನತ್ತಲೇ ತಮ್ಮ ಕಣ್ಣು ಹರಿಸಿ ಕುಳಿತಿದ್ದಾರೆ. ಇವನಿಗೆ ಅವರನ್ನು ನೋಡುವ ಧೈರ್ಯವಿಲ್ಲ. ಅತ್ತ ನೋಡಿದೊಡನೆ ಅಪ್ಪ ಹಸಿವು ಎಂದು ಮಗುವೊಂದು ನುಡಿದುಬಿಟ್ಟರೆ ಇವನೇನು ಮಾಡಬೇಕು? ಸುರಿವ ಮಳೆಗೆ ಶಾಪ ಹಾಕಿ ಸಾಕಾಗಿದ್ದಾನೆ.
ಬೀದಿಯಲ್ಲಿ ತನ್ನ ದಿನವಿಡೀ ಸಣ್ಣ ಪುಟ್ಟ ಸಾಮಾನುಗಳನ್ನು ಹರಿವಿ ಕುಳಿತು ವ್ಯಾಪಾರ ಮಾಡಿ ಹೊಟ್ಟೆ ಹೊರೆದುಕೊಳ್ಳುವ ಫುಟ್ ಪಾತ್ ವ್ಯಾಪಾರಿ, ಮಾರಾಟವಾಗದ ದಿನ ಇವನ ಸಂಸಾರಕ್ಕೆ ಉಪವಾಸವೇ ಗತಿ. ಇವನೊಬ್ಬನದೇ ಸಮಸ್ಯೆಯಲ್ಲ ದಿನಗೂಲಿಯನ್ನು ನಂಬಿ ನೂರಾರು ಜನ ಬದುಕುತ್ತಿದ್ದಾರೆ. ಮಳೆಗಾಲದಲ್ಲಂತೂ ಉಪವಾಸ ಅನಿವಾರ್ಯ, ಕೆಲವೊಮ್ಮೆ ಒಂದು, ಎರಡು ದಿನ ಮತ್ತೆ ಹಲವಾರು ದಿನ ದೀರ್ಘ ಮಳೆ ಬಿಡದೆ ಹುಯ್ಯವ ದಿನಗಳಲ್ಲಿ ಅವರಿಗೊಂದೇ ಯೋಚನೆ, ಹೇಗೆ ತನ್ನ ಸಂಸಾರದ ಹೊಟ್ಟೆ ತುಂಬುವುದು?
ಇವರಿಗೆ ಗೊತ್ತಿರುವುದು, ಪುಟ್ ಪಾತ್ ವ್ಯಾಪಾರವೊಂದೇ! ಬೇರೆ ದಾರಿ ಹಿಡಿದು ನಂಬಿದವರ ಹೊಟ್ಟೆ ತುಂಬಿಸಲು ಮನಸು ಬಾರದು. ಧೋ ಎಂದು ಸುರಿವ ಮಳೆಗೆ ಮನ ಪೂರ್ತಿ ಬೈದು ಹಗುರವಾಗಬೇಕೆಂದು ಕತ್ತನ್ನು ಆಕಾಶದೆಡೆಗೆ ಎತ್ತಿದ್ದಾನೆ, ಅವನಿಗೆ ಅರಿವಿಲ್ಲದೇ ಅವನ ಕಣ್ಣಿಂದ ಧಾರಕಾರ ನೀರು! ಎಷ್ಟೆಲ್ಲಾ ಜನರಿಗೆ ಸಂತಸ ನೀಡುವ ಮಳೆಯೇ ನನ್ನಂತಹ ಕೆಲವೇ ಕೆಲವರಿಗೆ ತೊಂದರೆಯಾದರೂ ಏಕೆ ಸುರಿಸಬೇಕು, ಎಂದು ಎದೆ ತುಂಬಿ ಪ್ರಾಥಿಸುತ್ತೇನೆ.
ಈಗ ಮಳೆ ನಿಂತಿದೆ, ಮತ್ತೆ ಅವನ ವ್ಯಾಪಾರ ಭರದಿಂದ ಪ್ರಾರಂಭವಾಗಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications