ಮಿತ್ತಲ್ ಘಟಕ ಸ್ಥಾಪನೆಗಾಗಿ ರೈತರಿಗೆ ಪುಡಿಗಾಸು ಹಂಚಿಕೆ

ಧಾರವಾಡದ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ವಿಶೇಷ ಭುಸ್ವಾಧೀನಾಧಿಕಾರಿ ಮಹಾಂತೇಶ ಬೀಳಗಿ ಅವರು ಈ ಮಾಹಿತಿ ನೀಡಿದ್ದಾರೆ. ಈ ಹಣವನ್ನು ಭೂ ಮಾಲೀಕರಿಗೆ ಪರಿಹಾರವಾಗಿ ನೀಡಲು ಮೀಸಲು ಮಾಡಲಾಗಿದೆ. ಭೂಸ್ವಾಧೀನ ಮಾಡಿಕೊಂಡಿರುವ ಜಮೀನಿಗೆ ಸರ್ಕಾರ - ರೈತರು ಮಾಡಿಕೊಂಡಿರುವ ಒಪ್ಪಂದದ ಪ್ರಕಾರ ಎನ್ಎ ಭೂಮಿಗೆ ತಲಾ 16 ಲಕ್ಷ ರುಪಾಯಿ, ರಾಷ್ಟ್ರೀಯ ಹೆದ್ದಾರಿ 63ಕ್ಕೆ ಹೊಂದಿಕೊಂಡು 500 ಮೀಟರ್ ವ್ಯಾಪ್ತಿ ವರೆಗಿನ ಭೂಮಿಗೆ ತಲಾ 12 ಲಕ್ಷ ರುಪಾಯಿ, ಉಳಿದ ಜಮೀನುಗಳಿಗೆ 8 ಲಕ್ಷ ರುಪಾಯಿ ಪರಿಹಾರ ನೀಡಲಾಗುತ್ತದೆ ಎಂದರು.
ಭೂಪರಿಹಾರ ವಿವಾದ ಕುರಿತು ಸ್ವೀಕರಿಸಲಾಗಿರುವ 89 ಪ್ರಕರಣಗಳ ಪೈಕಿ 74 ಪ್ರಕರಣಗಳನ್ನು ಪರಿಶೀಲಿಸಿ ವಿವಾದಿತ ಪ್ರಕರಣ ಹೊರತುಪಡಿಸಿ ಬಾಕಿ ಉಳಿದ 68 ಪ್ರಕರಣಗಳಲ್ಲಿ 257.60 ಎಕರೆ ಜಮೀನಿಗೆ ಒಟ್ಟು 19,71,93,480 ರೂ. ಭೂಪರಿಹಾರ ಪಾವತಿ ಮಾಡಲಾಗಿದೆ ಎಂದು ಅವರು ಹೇಳಿದರು.
ಭೂಮಾಲೀಕರು ಪರಿಹಾರ ಪಡೆಯಲು ಮಧ್ಯವರ್ತಿಗಳನ್ನು ಅವಲಂಬಿಸಬಾರದು. ಸೂಕ್ತ ದಾಖಲೆಗಳ ಜೊತೆ ಜಿಲ್ಲಾಡಳಿತ, ತಹಸೀಲ್ದಾರ್ ಅಥವಾ ಕೆಐಎಡಿಬಿ ಧಾರವಾಡ ಕಚೇರಿಯನ್ನು ಸಂಪರ್ಕ ಮಾಡಬೇಕು ಎಂದು ಅವರು ಕೋರಿದರು.
ರೈತರ ತೀವ್ರ ವಿರೋಧ: ಕುಡತಿನಿ - ಹರಗಿನಡೋಣಿ ಭೂ ಸಂತ್ರಸ್ತರ ಹೋರಾಟ ಸಮಿತಿಯು ಪ್ರತಿ ಎಕರೆಗೆ 77 ಲಕ್ಷ ರುಪಾಯಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಬೆಂಗಳೂರು ಚಲೋ ಪಾದಯಾತ್ರೆ, ರಸ್ತೆ ತಡೆ, ದೀರ್ಘದಂಡ ನಮಸ್ಕಾರ, ಹೀಗೇ ನಾನಾ ರೀತಿಯ ಪ್ರತಿಭಟನೆಗಳನ್ನು ನಡೆಸಿದೆ.
ರೈತರ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿರುವ ಸರ್ಕಾರ ಈಗಾಗಲೇ ನಿರ್ಧಾರ ಆಗಿರುವ ಬೆಲೆಯಲ್ಲೇ ಪರಿಹಾರವನ್ನು ವಿತರಣೆ ಮಾಡಲು ಮುಂದಾಗಿರುವುದು ಸಂತ್ರಸ್ತ ರೈತರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೇ, ರೈತರನ್ನು ಒಡೆದು ಆಳುವ ಸರ್ಕಾರದ ನೀತಿ ಇದಾಗಿದೆ ಎಂದು ಟೀಕೆಗೆ ಗುರಿ ಆಗಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications