ಓದುವ ಒಕ್ಕಲುತನಕ್ಕೆ ತೊಡಗಿಕೊಳ್ಳಿ

ದ್ವೈಮಾಸಿಕ ಪತ್ರಿಕೆಯಿದು. 28ರಿಂದ 32ರವರೆಗೆ ಪುಟಗಳು. ಆರಂಭಿಕ ದಿನಗಳ ಅಡಿಕೆ ಪತ್ರಿಕೆ'ಯ ಆಕಾರ. ಕಾರ್ಪೊರೇಟ್ ದುರಾಕ್ರಮಣವನ್ನು ವಿರೋಧಿಸುವ ಖಡಕ್ ನೀತಿ. ಹಾಗಾಗಿ ರಾಸಾಯನಿಕ ಗೊಬ್ಬರ, ಕೆಮಿಕಲ್ ಔಷಧಿ, ಬಿಟಿ ಜ್ಞಾನಗಳನ್ನು ಆಮೂಲಾಗ್ರವಾಗಿ ಸಹಜ ಸಾಗುವಳಿ ವಿರೋಧಿಸುತ್ತದೆ. ಇವುಗಳ ಮೂಲವಾದ ಬಹುರಾಷ್ಟ್ರೀಯ ಕಂಪನಿಗಳನ್ನು, ಉತ್ಪಾದಕರನ್ನು ಟೀಕಿಸುತ್ತಲೇ ಇರುವುದರಿಂದ ಜಾಹೀರಾತುಗಳ ಕಾಟ ಈ ಪತ್ರಿಕೆ ಓದುಗನಿಗಿಲ್ಲ. ಅಷ್ಟೇಕೆ, ಹಿಂದೊಮ್ಮೆ ನನ್ನ ಇಲಿಗಳ ನಾಶ' ತಂತ್ರದ ಲೇಖನವನ್ನು ಪ್ರಕಟಿಸಿದ್ದರೂ ಅದರಲ್ಲಿದ್ದ ಹಿಟ್ಟಿಗೆ ರಾಸಾಯನಿಕ ಥಿಮೆಟ್ ಹಾಕಿ ಇಟ್ಟರೆ ತಿನ್ನುವ ಹೆಗ್ಗಣ ಸಾಯುತ್ತದೆ' ಎಂಬ ವಾಕ್ಯವನ್ನು ನಿರ್ದಾಕ್ಷಿಣ್ಯವಾಗಿ ಸಂಪಾದಕಿ ವಿ.ಗಾಯತ್ರಿಯವರು ಕತ್ತರಿಸಿ ಎಸೆದಿದ್ದರು!
ಸಹಜ ಸಾಗುವಳಿಯನ್ನು ಸರ್ಕಾರೇತರ ಸಂಸ್ಥೆ ಇಕ್ರಾ ಹೊರತರುತ್ತಿದೆ. ಇತ್ತೀಚೆಗೆ ನಡೆದ ರೈತಶಕ್ತಿ' ಎಂಬ ದೊಡ್ಡ ಕಾರ್ಯಕ್ರಮ ಸಂಯೋಜನೆಯಲ್ಲಿಯೂ ಇಕ್ರಾ ಪಾಲ್ಗೊಂಡಿತ್ತು. ಹಲವು ಪುಸ್ತಕ ಪ್ರಕಟನೆಗಳನ್ನು ಮಾಡಿದೆ ಕೂಡ. ಖುದ್ದು ಸಸಾ ತನ್ನನ್ನು ಸುಸ್ಥಿರ ಸಾವಯವ-ಸಹಜ ಕೃಷಿಗೆ ಮೀಸಲಾದ ಪತ್ರಿಕೆ ಎಂದು ಹೇಳಿಕೊಂಡಿದೆ. ಸಸಾ ಉತ್ತಮ ಗುಣಮಟ್ಟದ ಕಾಗದದಲ್ಲಿ ಮುದ್ರಣಗೊಳ್ಳುತ್ತಿದೆ.
ಹಲವು ಲೇಖನಗಳನ್ನು ರೈತರ ಆಡುಭಾಷೆಯಲ್ಲಿಯೇ ಇಡುವುದು ವೈಶಿಷ್ಟ್ಯತೆ. ವಿಷಯ ವೈವಿಧ್ಯಕ್ಕೂ ಕೊರತೆಯಿಲ್ಲ. ಮುಖ್ಯವಾಗಿ, ರೈತರಲ್ಲದ ಓದುಗರು ಕೂಡ ಸಹಜ ಸಾಗುವಳಿಯನ್ನು ಖುಷಿಯಿಂದ ಓದಬಹುದು. ಜಿಎಂ ತಂತ್ರಜ್ಞಾನ, ಪರ್ಮಾಕಲ್ಚರ್ಗಳಂತ ಹತ್ತಾರು ವಿಚಾರಗಳ ಬಗ್ಗೆ ಮತ್ತು ಅದೇ ವೇಳೆ ಸಾಂಪ್ರದಾಯಿಕ ಕೃಷಿ ಪದ್ಧತಿಗಳ ಕುರಿತು ಮಾಹಿತಿ ಪಡೆಯಬಹುದು. ತಜ್ಞರ ಬರಹಗಳ ಭಾಷಾಂತರವೂ ಇಲ್ಲಿ ಲಭ್ಯ.
ಬಿಡಿ ಪ್ರತಿಗೆ 12 ರೂ. ವಾರ್ಷಿಕ ಚಂದಾ 60 ರೂ.
ವಿಳಾಸ : ಸಂಪಾದಕರು,
ಸಹಜ ಸಾಗುವಳಿ,
ನಂ 22, 5ನೇ ಕ್ರಾಸ್,
ಮೈಖೇಲ್ ಪಾಳ್ಯ, 2ನೇ ಹಂತ,
ಹೊಸ ತಿಪ್ಪಸಂದ್ರ ಅಂಚೆ,
ಬೆಂಗಳೂರು -560075
ದೂರವಾಣಿ - 080-2528 3370 / 2521 3104
ಕೊನೆಮಾತು : ಪತ್ರಿಕೆಗಳ ಕೊರತೆಗಳ ಬಗ್ಗೆ ಪ್ರಜ್ಞಾಪೂರ್ವಕವಾಗಿಯೇ ನಾನು ಬರೆಯುತ್ತಿಲ್ಲ. ವಿಮರ್ಶೆಯ ಗುರಿ ಸದ್ಯಕ್ಕೆ ನನ್ನದಲ್ಲ. ಪತ್ರಿಕೆಗಳ ಪರಿಚಯ ಈಗಿನ ಜರೂರಿ. ಹಾಗಾಗಿ ತುಸು ಹೊಗಳಿಕೆ ಹೆಚ್ಚಿದೆ ಎನ್ನಿಸಿದರೆ ಅದನ್ನು ರುಚಿಗೆ ಹಾಕಿದ ಒಗ್ಗರಣೆ ಎಂದುಕೊಳ್ಳಿ!.ಇನ್ನೂ ಒಂದು ಮಾತು. ಸಹಜ ಸಾಗುವಳಿಯಲ್ಲಿ ಇದು ಬೇಕು, ಇದಿರಬೇಕಿತ್ತು ಎಂಬ ಸಲಹೆಗಳ ಪಟ್ಟಿಯನ್ನು ನಿರ್ವಾಹಕ ಸಂಪಾದಕಿ ಗಾಯತ್ರಿಯವರಿಗೆ ಕಳಿಸಿಕೊಟ್ಟಿದ್ದೆ. ಅಂತಹ ಒಂದು ಸಲಹೆ ಜಾರಿಗೊಂಡಿದ್ದರ ಪರಿಣಾಮವಾಗಿ ಇವತ್ತು ನಾನು ಆ ಪತ್ರಿಕೆಯಲ್ಲಿ ಅಂಕಣಕಾರ!'
* ಅಂಕಣಕಾರರ ವಿಳಾಸ : ಮಾ.ವೆಂ.ಸ. ಪ್ರಸಾದ್, ಮಾವಿನಸರ, ಪೋಸ್ಟ್-ಎಡಜಿಗಳೇಮನೆ, ಸಾಗರ ತಾ. ಶಿವಮೊಗ್ಗ ಜಿಲ್ಲೆ. 577401. ಫೋನ್ 08183 236068, 296543, ಸೆಲ್ 98864 07592
ಇ ಮೇಲ್ : [email protected]
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications