ಕೊಡಗಿನಲ್ಲಿ ಫಸಲು ನಾಶ ಮಾಡುವ ಪುಂಡಾನೆಗಳು

ಮಧ್ಯರಾತ್ರಿಯಲ್ಲಿ ಯಡವನಾಡು ಮೀಸಲು ಅರಣ್ಯ ಪ್ರದೇಶದಿಂದ ಹಾರಂಗಿ ಎಡದಂತೆ ನಾಲೆಯ ಮೇಲೆ ಧಾವಿಸಿದ ಕಾಡಾನೆಗಳ ಹಿಂಡು ರೈತರು ಕಷ್ಟಪಟ್ಟು ಬೆಳೆಸಿದ ಭತ್ತ, ಬಾಳೆ, ತೆಂಗು, ಕಾಫಿ ಮತ್ತಿತರರ ಫಸಲನ್ನು ತಿಂದು ಹಾಕಿದಿರುವುದಲ್ಲದೆ, ತುಳಿದು ನಾಶ ಮಾಡಿವೆ.
ಹುದುಗೂರು ರೈತನ ಅಳಲು: ಗ್ರಾಮದ ಕರಿಯಪ್ಪ ಎಂಬುವವರ ಮಗ ಕೆ.ತಿಮ್ಮಪ್ಪ ಅವರು ಎರಡು ಎಕರೆ ಪ್ರದೇಶದಲ್ಲಿ ಸಮೃದ್ಧವಾಗಿ ಬೆಳೆಸಿದ್ದ ಬಾಳೆ, ತೆಂಗು, ಸಿಲ್ವರ್ ಮರ ಸೇರಿದಂತೆ ಇತರೆ ಕೃಷಿ ಫಸಲು ಕಾಡಾನೆ ದಾಳಿಯಿಂದ ಸಂಪೂರ್ಣ ನೆಲಕಚ್ಚಿದೆ. ವರ್ಷ ಪೂರ್ತಿ ದುಡಿದು ಬೆಳೆದ ಬೆಳೆ ಫಸಲು ಬಿಡುವ ಸಂದರ್ಭವೇ ಕಾಡಾನೆಗಳು ದಾಳಿ ಮಾಡಿ ನಾಶ ಮಡಿರುವುದರಿಂದ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.
ಅದೇ ರೀತಿ ಕೃಷ್ಣ ಎಂಬುವವರಿಗೆ ಸೇರಿದ ಕಟಾವು ಮಾಡಿದ ಜೋಳವನ್ನು ಕಾಡಾನೆಗಳು ತಿಂದು ಸುತ್ತಮುತ್ತಲ ಪ್ರದೇಶದಲ್ಲಿ ಬೆಳೆದಿರುವ ಭತ್ತವನ್ನು ತುಳಿದು ಧ್ವಂಸಪಡಿಸಿವೆ. ಕಾಡಾನೆಗಳ ಹಾವಳಿಯಿಂದ ಯಡವನಾಡು, ಹುದುಗೂರು ಸುತ್ತಮುತ್ತಲ ಭಾಗದ ಜನತೆ ಭಯಭೀತರಾಗಿದ್ದು, ಆತಂಕದಲ್ಲಿಯೇ ದಿನ ಕಳೆಯುವಂತಾಗಿದೆ. ಕಾಡಾನೆಗಳ ದಾಳಿಯಿಂದ ಹಾನಿಗೀಡಾಗಿರುವ ಬೆಳೆಗೆ ಸೂಕ್ತ ಪರಿಹಾರ ನೀಡಬೇಕು ಎಂದು ರೈತರು ಅರಣ್ಯ ಇಲಾಖಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಅರಣ್ಯ ಇಲಾಖೆ ವತಿಯಿಂದ ಕಾಡಾನೆಗಳ ಹಾವಳಿಯನ್ನು ತಡೆಯಲು ಅಳವಡಿಸಿದ್ದ ಸೌರವಿದ್ಯುತ್ ತಂತಿಬೇಲಿ ಸಂಪೂರ್ಣ ಹಾಳಾಗಿರುವುದರಿಂದ ಕಾಡಾನೆಗಳು ಗ್ರಾಮದೊಳಗೆ ನುಸುಳಿ ಬರುತ್ತಿವೆ ಎಂದು ಗ್ರಾಮಸ್ಥರು ದೂರಿದ್ದಾರೆ. ಆದರೆ ಗ್ರಾಮಸ್ಥರ ಕೂಗು ಅರಣ್ಯ ಅಧಿಕಾರಿಗಳ ಕಿವಿಗೆ ಬೀಳದಿರುವುದು ದುರಂತವೇ ಎನ್ನಬೇಕು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications