ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೈತರ ಖಾತೆಗೆ ಎರಡು ಸಾವಿರ: ಎರಡು ದಿನದಲ್ಲಿ ಯಡಿಯೂರಪ್ಪ ಆದೇಶ

|
Google Oneindia Kannada News

Recommended Video

ಎರಡು ದಿನದಲ್ಲಿ ಯಡಿಯೂರಪ್ಪ ಆದೇಶ/ B. S. Yeddyurappa | Oneindia Kannada

ಬೆಂಗಳೂರು, ಆಗಸ್ಟ್ 02: ರೈತರ ಖಾತೆಗೆ ವರ್ಷಕ್ಕೆ ಆರು ಸಾವಿರ ಹಾಕುವ ಕೇಂದ್ರ ಸರ್ಕಾರದ ಕಿಸಾನ್ ಸಮ್ಮಾನ್ ಯೋಜನೆಯ ಜೊತೆಗೆ ಯಡಿಯೂರಪ್ಪ ಅವರು ನಾಲ್ಕು ಸಾವಿರ ಹಣವನ್ನು ರಾಜ್ಯ ಸರ್ಕಾರವು ನೀಡುವ ಯೋಜನೆಯನ್ನು ಸಿಎಂ ಆದ ಮೊದಲ ದಿನದಂದೇ ಘೋಷಿಸಿದ್ದರು. ಸಆ ಘೋಷಣೆಗೆ ಇನ್ನೆರಡು ದಿನಗಳಲ್ಲಿ ಅಧಿಕೃತ ಒಪ್ಪಿಗೆ ದೊರೆಯಲಿದೆ.

ಇಂದು ವಿಧಾನಸೌಧದದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಭೆಯಲ್ಲಿ ಮಾತನಾಡಿದ ಯಡಿಯೂರಪ್ಪ, ಮೊದಲ ಕಂತಿನ 2 ಸಾವಿರ ರೂಪಾಯಿಗಳನ್ನು 15-20 ದಿನಗಳೊಳಗೆ ರೈತರಿಗೆ ಪಾವತಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕಿಸಾನ್ ಸಮ್ಮಾನ್ ಯೋಜನೆ, ತಿಂಗಳೊಳಗೆ ಮೊದಲ ಕಂತು ಪಾವತಿ: ಸಿಎಂಕಿಸಾನ್ ಸಮ್ಮಾನ್ ಯೋಜನೆ, ತಿಂಗಳೊಳಗೆ ಮೊದಲ ಕಂತು ಪಾವತಿ: ಸಿಎಂ

ಸಿಎಂ ಅವರು ಕರೆದಿದ್ದ ಸಭೆಯಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳು, ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಭಾಗವಹಿಸಿದ್ದರು.

2000 thousand to farmers account in few days: Yeddyurappa

ಒಟ್ಟು ನಾಲ್ಕು ಸಾವಿರ ರೂಪಾಯಿ ಹಣವನ್ನು ರಾಜ್ಯ ಸರ್ಕಾರವು ರೈತರಿಗೆ ಎರಡು ಕಂತುಗಳಲ್ಲಿ ನೀಡುವುದಾಗಿ ಯಡಿಯೂರಪ್ಪ ಅವರು ಘೋಷಿಸಿದ್ದು, ಇನ್ನೆರಡು ದಿನಗಳಲ್ಲಿ ಇದಕ್ಕೆ ಅಧಿಕೃತ ಮೊಹರು ಬಿದ್ದು 15-20 ದಿನಗಳಲ್ಲಿ ಹಣ ಖಾತೆಗೆ ತಲುಪಲಿದೆ.

ಸಿಎಂ ಆಗುತ್ತಿದ್ದಂತೆ ರೈತರಿಗೆ, ನೇಕಾರರಿಗೆ ಉಡುಗೊರೆ ಕೊಟ್ಟ ಯಡಿಯೂರಪ್ಪ ಸಿಎಂ ಆಗುತ್ತಿದ್ದಂತೆ ರೈತರಿಗೆ, ನೇಕಾರರಿಗೆ ಉಡುಗೊರೆ ಕೊಟ್ಟ ಯಡಿಯೂರಪ್ಪ

ಕುಮಾರಸ್ವಾಮಿ ಅವರು ಪ್ರಾರಂಭಿಸಿದ್ದ ಅರ್ಧಕ್ಕೆ ನಿಂತಿರುವ ರೈತರ ಸಾಲ ಮನ್ನಾ ಬಗ್ಗೆ ಯಡಿಯೂರಪ್ಪ ಅವರು ಇನ್ನೂ ಯಾವ ನಿರ್ಣಯವನ್ನೂ ಪ್ರಕಟಿಸಿಲ್ಲ, ಕೆಲವು ದಿನಗಳ ನಂತರ ಸ್ಪಷ್ಟ ನಿರ್ಣಯ ತಳೆಯುವುದಾಗಿ ಅವರು ತಿಳಿಸಿದ್ದಾರೆ.

English summary
Karnataka farmers will get 2000 rs to their account in few days says CM Yeddyurappa. Today he instructed officers to do the necessary.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X