Krishi Mela-2022 : ಬೆಂಗಳೂರು ಕೃಷಿ ವಿವಿಯಲ್ಲಿ ನವೆಂಬರ್ 3ರಿಂದ 6ರವರೆಗೆ 4 ದಿನ 'ಕೃಷಿ ಮೇಳ-2022'
ಬೆಂಗಳೂರು, ಆಕ್ಟೋಬರ್ 8: ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ವತಿಯಿಂದ ಜಿಕೆವಿಕೆ ಆವರಣದಲ್ಲಿ ಇದೇ ನವೆಂಬರ್ 3ರಿಂದ 6ರವರೆಗೆ ಒಟ್ಟು ನಾಲ್ಕು ದಿನಗಳ ರಾಜ್ಯ ಮಟ್ಟದ 'ಕೃಷಿ ಮೇಳ-2022' ಮತ್ತು ಕೃಷಿ ವಸ್ತು ಪ್ರದರ್ಶನ ನಡೆಯಲಿದೆ. ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಸಂಸ್ಥೆಗಳು, ಸಂಶೋಧನಾ ಸಂಸ್ಥೆಗಳು, ಬೃಹತ್ ಮತ್ತು ಸಣ್ಣ ಗಾತ್ರ ಕೃಷಿ ಯಂತ್ರೋಪಕರಣ ತಯಾರಕರು, ಸರ್ಕಾರಿ, ಅರೇ ಸರ್ಕಾರಿ ಸಂಸ್ಥೆಗಳು, ಅಲ್ಲದೇ ಸರ್ಕಾರೇತರ ಸಂಸ್ಥೆಗಳು ಈ ಕೃಷಿ ಮೇಳದಲ್ಲಿ ಭಾಗವಹಿಸಲಿವೆ.
ಈ ವರ್ಷದ ಕೃಷಿ ಮೇಳೆದಲ್ಲಿ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ, ರಾಜ್ಯ ಸರ್ಕಾರದ ಕೃಷಿ ಇಲಾಖೆ, ಜಲಾನಯನ ಅಭಿವೃದ್ಧಿ, ತೋಟಗಾರಿಕೆ, ರೇಷ್ಮೆ, ಅರಣ್ಯ, ಪಶುಸಂಗೋಪನೆ, ಮೀನುಗಾರಿಕೆ, ಕೃಷಿ ಮಾರುಕಟ್ಟೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಕರ್ನಾಟಕ ಹಾಲು ಮಹಾಮಂಡಳಿಗಳ ಸಂಯುಕ್ತ ಆಶ್ರಯದಲ್ಲಿ ಕೃಷಿ ವಿವಿ ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ (ಜಿಕೆವಿಕೆ) ಆವರಣದಲ್ಲಿ ಕೃಷಿ ಮೇಳವನ್ನು ನವೆಂಬರ್ 3ರಿಂದ 6ರವರೆಗೆ 4 ದಿನಗಳ ಕಾಲ "ಕೃಷಿಯಲ್ಲಿ ನವೋದ್ಯಮಗಳು" ಎಂಬ ಘೋಷವಾಕ್ಯದೊಂದಿಗೆ ಕೃಷಿ ಮೇಳವನ್ನು ಆಯೋಜಿಸಲಾಗಿದೆ.

ವಿವಿಧ ಬೆಳೆಗಳು 38 ಕೃಷಿ ತಂತ್ರಜ್ಞಾನ ಪರಿಚಯ
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ (ಯುಎಎಸ್) ಒಂಬತ್ತು ಹೊಸ ತಳಿಗಳನ್ನು ಪ್ರಕಟಿಸಿದೆ. ಈ ವರ್ಷ ಕೃಷಿ ಮೇಳದಲ್ಲಿ ಬೆಳೆಗಳು ಮತ್ತು 38 ಕೃಷಿ ತಂತ್ರಜ್ಞಾನಗಳನ್ನು ಪರಿಚಯಿಸಲಾಗುತ್ತಿದೆ.
ಹೊಸ ಬೆಳೆಗಳು ಎರಡು ವಿಧದ ಅಲ್ಪಾವಧಿಯ ಭತ್ತವನ್ನು ಒಳಗೊಂಡಿರುತ್ತದೆ. ಬಿತ್ತನೆ ಮಾಡಿದ ನಾಲ್ಕು ತಿಂಗಳ ನಂತರ ಕೊಯ್ಲು ಮಾಡಬಹುದು, ಹೆಚ್ಚು ಇಳುವರಿ ನೀಡುವ ಜೋಳದ ಹೈಬ್ರಿಡ್ ಮತ್ತು ಕಂದುಬಣ್ಣದ ರಾಗಿ, ಇದು ಎಲೆ ಕೊಳೆತ, ಅಲ್ಪಾವಧಿಯ ಹೊಲ ಹುರುಳಿ, ಎಳ್ಳು ಮತ್ತು ನೈಗರ್, ಅಧಿಕ. -ಇಳುವರಿ ಕ್ಯಾಸ್ಟರ್ ಹೈಬ್ರಿಡ್ ಮತ್ತು ಹೆಚ್ಚಿನ ಇಳುವರಿ, ಮೇವಿನ ಸೋರ್ಗಮ್ ಹಾಗೂ ಈ ವರ್ಷದ ಮೇಳವು ಕೃಷಿ ಸ್ಟಾರ್ಟ್ಅಪ್ಗಳ ಮೇಲೆ ಕೇಂದ್ರೀಕರಿಸುತ್ತದೆ. ಇನ್ನು ಈ ಕೃಷಿ ಮೇಳದಲ್ಲಿ ಸಂಖ್ಯೆಯು ಕಳೆದ ವರ್ಷಕ್ಕಿಂತ ಹೆಚ್ಚಿದೆ ಏಕೆಂದರೆ ರಾಜ್ಯದ ಆರಂಭಿಕ ಆರ್ಥಿಕತೆಯ ಮೇಲೆ ಕೇಂದ್ರೀಕರಿಸಿದೆ.

ಕೃಷಿ ಸಾಧಕರಿಗೆ ಪುರಸ್ಕಾರ
ಮೇಳದ ಸಂದರ್ಭದಲ್ಲಿ ರಾಜ್ಯದಾದ್ಯಂತದ ರೈತರನ್ನು ಅವರ ಸಾಧನೆ ಮತ್ತು ಕೊಡುಗೆಗಳಿಗಾಗಿ ಸನ್ಮಾನಿಸಲಾಗುವುದು. ಮೇಳದಲ್ಲಿ ಐಸಿಎಆರ್, ತೋಟಗಾರಿಕೆ, ರೇಷ್ಮೆ ಕೃಷಿ, ಅರಣ್ಯ, ಪಶುಸಂಗೋಪನೆ, ಮೀನುಗಾರಿಕೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳು ಸೇರಿದಂತೆ ವಿವಿಧ ಪ್ರದರ್ಶಕರಿಂದ 800 ಮಳಿಗೆಗಳು ಇರಲಿವೆ. ರಾಜ್ಯ ಮಟ್ಟದ ಪ್ರಶಸ್ತಿಗಳನ್ನು ಕೃಷಿಯಲ್ಲಿ ಉತ್ತಮ ಸಾಧನೆ ಮಾಡಿದ ರೈತರಿಗೆ ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಲಾಗುತ್ತಿದೆ, ಅವುಗಳೆಂದರೆ, ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ರಾಜ್ಯ ಮಟ್ಟದ ಅತ್ಯುತ್ತಮ ರೈತ / ರೈತ ಮಹಿಳೆ ಪ್ರಶಸ್ತಿ, ಡಾ. ಎಂ.ಹೆಚ್. ಮರಿಗೌಡ ರಾಜ್ಯ ಮಟ್ಟದ ಅತ್ಯುತ್ತಮ ತೋಟಗಾರಿಕಾ ರೈತ / ರೈತ ಮಹಿಳೆ ಪ್ರಶಸ್ತಿ, ಕೆನರಾ ಬ್ಯಾಂಕ್ ಪ್ರಯೋಜಿತ ಕ್ಯಾನ್ ಬ್ಯಾಂಕ್ ಅತ್ಯುತ್ತಮ ರೈತ ಮತ್ತು ರೈತ ಮಹಿಳೆ ಪ್ರಶಸ್ತಿ, ಡಾ. ಆರ್. ದ್ವಾರಕೀನಾಥ್ ಅತ್ಯುತ್ತಮ ವಿಸ್ತರಣಾ ಕಾರ್ಯಕರ್ತ ಪ್ರಶಸ್ತಿ, ಡಾ. ಆರ್. ದ್ವಾರಕೀನಾಥ್ ಅತ್ಯುತ್ತಮ ರೈತ/ರೈತಮಹಿಳೆ ಪ್ರಶಸ್ತಿಗಳಾಗಿವೆ.

ಜಿಲ್ಲಾ ಹಾಗೂ ತಾಲೂಕು ಮಟ್ಟದ ಪ್ರಶಸ್ತಿಗಳು ಹೀಗೆವೆ
ಕೃಷಿ ಮೇಳದಲ್ಲಿ ಜಿಲ್ಲಾ ಮಟ್ಟದ ಪ್ರಗತಿಪರ ರೈತ ಪ್ರಶಸ್ತಿ ಮತ್ತು ರೈತ ಮಹಿಳಾ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರಿನ ವ್ಯಾಪ್ತಿಗೆ ಒಳಪಡುವ ೧೦ ಜಿಲ್ಲೆಗಳಲ್ಲಿ ಪ್ರಗತಿಪರ ರೈತ ಪ್ರಶಸ್ತಿ ಮತ್ತು ಪ್ರಗತಿಪರ ರೈತ ಮಹಿಳಾ ಪ್ರಶಸ್ತಿಗಳನ್ನು ಅರ್ಹ ಪ್ರಗತಿ ಪರ ರೈತ ಮತ್ತು ರೈತ ಮಹಿಳೆಯರಿಗೆ ನೀಡಲಾಗುವುದು ಬೆಂಗಳೂರು ಕೃಷಿ ವಿವಿ ಹೇಳಿದೆ. ತಾಲ್ಲೂಕು ಮಟ್ಟದ ಪ್ರಗತಿಪರ ಯುವ ರೈತ ಪ್ರಶಸ್ತಿ ಮತ್ತು ಯುವ ರೈತ ಮಹಿಳಾ ಪ್ರಶಸ್ತಿ: ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರಿನ ವ್ಯಾಪ್ತಿಗೆ ಒಳಪಡುವ 61ತಾಲ್ಲೂಕುಗಳಲ್ಲಿ ಪ್ರಗತಿಪರ ಯುವ ರೈತ ಪ್ರಶಸ್ತಿ ಮತ್ತು ಪ್ರಗತಿಪರ ಯುವ ರೈತ ಮಹಿಳಾ ಪ್ರಶಸ್ತಿಗಳನ್ನು ಅರ್ಹ ಪ್ರಗತಿಪರ ಯುವ ರೈತ ಮತ್ತು ಪ್ರಗತಿಪರ ಯುವ ರೈತ ಮಹಿಳೆಯರಿಗೆ ನೀಡಲಾಗುವುದು. ಅಭ್ಯರ್ಥಿಗಳ ವಯಸ್ಸು 35 ವರ್ಷ ಮೀರಿರಬಾರದು.

'ಕೃಷಿ ಮೇಳ-2022' ಕೃಷಿ ಮೇಳದ ವೈಶಿಷ್ಟ್ಯಗಳು
ಕೃಷಿ ತಂತ್ರಜ್ಞಾನಗಳ ಪ್ರಾತ್ಯಕ್ಷಿಕೆ ತಾಕುಗಳು, ಸುಧಾರಿತ ಕೃಷಿ ತಂತ್ರಜ್ಞಾನಗಳ ಪ್ರಾತ್ಯಕ್ಷಿಕೆಗಳು , ಖುಷ್ಕಿ ಬೇಸಾಯಕ್ಕೆ ಸೂಕ್ತವಾದ ಬೆಳೆ ಪದ್ಧತಿಗಳು ನೂತನವಾಗಿ ಬಿಡುಗಡೆಯಾದ ವಿವಿಧ ಬೆಳೆ ತಳಿಗಳ ಪ್ರಾತ್ಯಕ್ಷಿಕೆ, ತೋಟಗಾರಿಕೆ ಬೆಳೆಗಳ ಮತ್ತು ನಿಖರ ಕೃಷಿ ಪ್ರಾತ್ಯಕ್ಷಿಕೆ , ಸಂಮಗ್ರ ಬೇಸಾಯ ಪದ್ಧತಿ ಪ್ರಾತ್ಯಕ್ಷಿಕೆ, ಸಿರಿಧಾನ್ಯಗಳು ಹಾಗೂ ಮಹತ್ವ , ಔಷಧೀಯ ಮತ್ತು ಸುಗಂಧ ದ್ರವ್ಯ ಸಸ್ಯಗಳು, ಜಲಾನಯನ ನಿರ್ವಹಣೆ , ಸಾವಯವ ಕೃಷಿ ಪದ್ಧತಿಗಳು, ಸಮಗ್ರ ಪೋಷಕಾಂಶಗಳು, ರೋಗ ಹಾಗೂ ಪೀಡೆ ನಿರ್ವಹಣೆ , ಮಣ್ಣು, ಪರೀಕ್ಷೆಗನುಗುಣವಾಗಿ ಬೆಳೆ ಸ್ಪಂದನೆ ಪ್ರಾತ್ಯಕ್ಷಿಕೆ ,ಹನಿ ಮತ್ತು ತುಂತುರು ನೀರಾವರಿ ಪದ್ಧತಿಗಳು , ಮಳೆ ಹಾಗೂ ಮೇಲ್ಛಾವಣಿ ನೀರಿನ ಕೋಯ್ಲು
ಸುಧಾರಿತ ಕೃಷಿ ಯಂತ್ರೋಪಕರಣಗಳ ಪ್ರದರ್ಶನ , ಕೊಯ್ಲಿನೋತ್ತರ ತಾಂತ್ರಿಕತೆ, ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ಮೌಲ್ಯವರ್ಧನೆ, ಬಿತ್ತನೆ ಬೀಜಗಳ ಪರೀಕ್ಷೆ ಹಾಗೂ ಶೇಖರಣೆ , ಪಶುಸಂಗೋಪನೆ, ಹೈನುಗಾರಿಕೆ, ಕುರಿ, ಕೋಳಿ ಹಾಗೂ ಮೀನು ಸಾಕಣೆ , ಮಾರುಕಟ್ಟೆ ನೈಪುಣ್ಯತೆ ಮಾಹಿತಿ ಟ, ಹವಾಮಾನ ಚತುರ ಕೃಷಿ, ಕೃಷಿಯಲ್ಲಿ ನೂತನ ಮಾಹಿತಿ ತಂತ್ರಜ್ಞಾನ , ಜೈವಿಕ ಹಾಗೂ ನವೀಕರಿಸಲ್ಪಡುವ ಇಂಧನ, ರೈತ ಸಮಸ್ಯೆಗಳಿಗೆ ತಜ್ಞರಿಂದ ಸಲಹೆ ಹಾಗೂ ರೈತರಿಂದ ರೈತರಿಗಾಗಿ ಚರ್ಚಾಗೋಷ್ಠಿ, ಮಣ್ಣುರಹಿತ ಕೃಷಿ ಹೀಗೆ ಅನೇಕ 'ಕೃಷಿ ಮೇಳ-2022' ಕೃಷಿ ಮೇಳದ ವೈಶಿಷ್ಟ್ಯಗಳು ಮೇಳದಲ್ಲಿ ಪ್ರದರ್ಶನಗೊಳ್ಳವಿವೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications