ಕರ್ನಾಟಕದ ಕಥೆ: ಲಾಕ್ ಡೌನ್ ವೇಳೆ ಪ್ರತಿನಿತ್ಯ ಒಬ್ಬ ರೈತ ಆತ್ಮಹತ್ಯೆ!
ಬೆಂಗಳೂರು, ಜುಲೈ.02: ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆ ಕರ್ನಾಟಕವು ಲಾಕ್ ಡೌನ್ ಆಗಿದೆ. ಕಳೆದ 61 ದಿನಗಳಲ್ಲಿ ಪ್ರತಿನಿತ್ಯ ರಾಜ್ಯದಲ್ಲಿ ಒಬ್ಬ ರೈತನು ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಅಂಶವು ಬೆಳಕಿಗೆ ಬಂದಿದೆ.
Recommended Video
ಏಪ್ರಿಲ್ ಮತ್ತು ಮೇ ತಿಂಗಳ 61 ದಿನಗಳಲ್ಲಿ ಸರಿಸುಮಾರು 75 ಮಂದಿ ರೈತರು ಸಾವಿಗೆ ಶರಣಾಗಿದ್ದಾರೆ ಎಂಬ ಅಂಕಿ-ಅಂಶಗಳು ಹೊರ ಬಿದ್ದಿದೆ. ಶ್ರಮಪಟ್ಟು ಬೆಳೆದ ಇಳುವರಿಯನ್ನು ಮಾರಾಟ ಮಾಡುವುದಕ್ಕೆ ಆಗದೇ, ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದ ಹಿನ್ನೆಲೆ ಸಾಕಷ್ಟು ರೈತರು ತಾವು ಬೆಳೆದ ಬೆಳೆಯನ್ನು ನಡುರಸ್ತೆಯಲ್ಲಿ ಎಸೆದ ಸಾಕಷ್ಟು ಉದಾಹರಣಗಳಿವೆ.
ಕರ್ನಾಟಕ ಲಾಕ್ ಡೌನ್ ನಿಂದಾಗಿ ರೈತರು ಬೆಳೆದ ಬೆಳೆಗೆ ಬೇಡಿಕೆ ಕುಸಿದಿದೆ. ಇದರ ನಡುವೆ ಸರ್ಕಾರದಿಂದ ಸೂಕ್ತ ಬೆಂಬಲ ಬೆಲೆ ಸಿಗದ ಹಿನ್ನೆಲೆ ರಾಜ್ಯದ ಅನ್ನದಾತರು ರೋಸಿ ಹೋಗಿದ್ದಾರೆ. ರೈತರಿಗೆ ಸರ್ಕಾರವು ಸರಿಯಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಒಂದು ಹೆಕ್ಟರ್ ಪ್ರದೇಶಕ್ಕೆ 25 ಸಾವಿರ ನೀಡಿದ ಸಿಎಂ
ಕಳೆದ ಮೇ.6ರಂದು ಕೊವಿಡ್-19 ಪರಿಹಾರ ನಿಧಿ ಅಡಿಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬರೋಬ್ಬರಿ 1600 ಕೋಟಿ ಪ್ಯಾಕೇಜ್ ಘೋಷಿಸಿದರು. ಈ ಪೈಕಿ ರೈತರಿಗೆ ಹೆಚ್ಚಿನ ಅನುದಾನವನ್ನು ಮೀಸಲು ಇರಿಸಲಿಲ್ಲ. ಬದಲಿಗೆ ಪ್ರತಿ ಹೆಕ್ಟರ್ ಪ್ರದೇಶಕ್ಕೆ ಒಂದು ಬಾರಿ 25,000 ರೂಪಾಯಿ ನೀಡುವುದಾಗಿ ತಿಳಿಸಿದರು. ಮೇ.16ರಂದು ಆಶಾ ಕಾರ್ಯಕರ್ತೆಯರು ಮತ್ತು ಮೆಕ್ಕೆಜೋಳ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಿಸಿದರು. ಅದರ ಪ್ರಕಾರ ಮೆಕ್ಕೆಜೋಳ ಬೆಳೆಗಾರರಿಗೆ ಒಂದು ಬಾರಿ 5000 ರೂಪಾಯಿ ಪರಿಹಾ ನೀಡುವುದಾಗಿ ಘೋಷಿಸಿದರು.
ಕರ್ನಾಟಕದಲ್ಲಿ ಈ ವರ್ಷದಲ್ಲಿ ರೈತರು ಬೆಳೆದ ಬೆಳೆಗೆ ಉತ್ತಮ ಇಳುವರಿ ಬಂದಿದೆ. ಕಳೆದ ಎರಡು ವರ್ಷಗಳಿಗೆ ಹೋಲಿಸಿದರೆ ಬಹಳ ಉತ್ತಮವಾಗಿ ಬೆಳೆಯು ಬೆಳೆದಿದ್ದಾರೆ. ಆದರೆ ಈ ಬಾರಿ ಕರ್ನಾಟಕ ಲಾಕ್ ಡೌನ್ ನಿಂದಾಗಿ ರೈತರು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗುತ್ತಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡ ಕೆ.ಎಸ್.ಸುಧೀರ್ ಕುಮಾರ್ ತಿಳಿಸಿದ್ದಾರೆ. ರೇಷ್ಮೆ ಬೆಳೆಗಾರರು ಶೇ.50ರಷ್ಟು ಬೆಲೆಗೆ ರೇಷ್ಮೆ ಮಾರಾಟ ಮಾಡುತ್ತಿದ್ದಾರೆ. ಬೇಳೆ ಹಾಗೂ ಭತ್ತದ ಬೆಲೆಯೂ ಕೂಡಾ ಪಾತಾಳಕ್ಕೆ ಕುಸಿದಿದ್ದು, ರೈತರನ್ನು ಕಂಗೆಡುವಂತೆ ಮಾಡಿದೆ ಎಂದು ಮಾಜಿ ಮುಖಂಡ ಮಾರುತಿ ಮಾನಪಡೆ ದೂಷಿಸಿದ್ದಾರೆ.
ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಮಾಣ ಕಿಂಚಿತ್ತೂ ಕಡಿಮೆಯಾಗಿಲ್ಲವೇ ಎಂಬ ಅನುಮಾನ ಹುಟ್ಟಿಕೊಳ್ಳುವಂತೆ ಈ ಅಂಕಿ-ಅಂಶಗಳು ಮಾಡುತ್ತಿವೆ. ಕಳೆದ 2019ರ ಏಪ್ರಿಲ್.01 ರಿಂದ 2020ರ ಮಾರ್ಚ್.31ರವರೆಗೂ ಬರೋಬ್ಬರಿ 800 ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications