ಮಂಡ್ಯದಲ್ಲಿ 'ಬೆವರುದಾನ' ಮಾಡಿದ ಇಂಟೆಲ್ ಟೆಕ್ಕಿಗಳು!
ಮಂಡ್ಯ, ಆಗಸ್ಟ್ 24: ಬೆಂಗಳೂರಿನ ಇಂಟೆಲ್ ಕಂಪನಿಯ ನೌಕರರು ಮಂಡ್ಯದ ಕೀಲಾರ ಗ್ರಾಮದ ಸಾವಯವ ರೈತ ಬೀರೇಶ್ ಅವರ ಗದ್ದೆಯಲ್ಲಿ 'ಬೆವರು ದಾನ' ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಗಮನಸೆಳೆದರು.
ಮಂಡ್ಯ ಸಾವಯವ ಕೃಷಿಕರ ಸಹಕಾರ ಸಂಘ ಹಾಗೂ ಆಗ್ರ್ಯಾನಿಕ್ ಮಂಡ್ಯ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಕಂಪನಿಯ ಸುಮಾರು 140 ಮಂದಿ ಯುವಕ-ಯುವತಿಯರು ಬೀರೇಶ್ ಅವರ ಸುಮಾರು 2 ಎಕರೆ ಗದ್ದೆಯಲ್ಲಿ ನಾಟಿ ಮಾಡುವ ಮೂಲಕ ಎಲ್ಲರನ್ನು ಹುಬ್ಬೇರಿಸುವಂತೆ ಮಾಡಿದರು.

ಕಾರ್ಯಕ್ರಮದ ಉದ್ದೇಶದ ಕುರಿತು ಆಗ್ರ್ಯಾನಿಕ್ ಮಂಡ್ಯದ ಅಧ್ಯಕ್ಷ ಎಸ್.ಸಿ.ಮಧುಚಂದನ್ ಮಾತನಾಡಿ, ರೈತರು ಹಾಗೂ ಸಾಫ್ಟ್ ವೇರ್ ಕಂಪನಿ ನೌಕರರ ನಡುವೆ ಕೃಷಿ ಸಂಬಂಧ ವೃದ್ಧಿಗಾಗಿ, ಕೃಷಿಯ ಬಗ್ಗೆ ಸಾಫ್ಟ್ ವೇರ್ ನೌಕರರಿಗೆ ಅರಿವು ಮೂಡಿಸುವ ಸಲುವಾಗಿ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಹೇಳಿದರು.
ಆಗ್ರ್ಯಾನಿಕ್ ಮಂಡ್ಯ ಸುಮಾರು 15ಕ್ಕೂ ಹೆಚ್ಚು ಬೆವರು ದಾನ ಶಿಬಿರ ನಡೆಸಿದೆ. ವಿದ್ಯಾರ್ಥಿಗಳು ಶ್ರಮದಾನ ಶಿಬಿರ ನಡೆಸುವ ರೀತಿಯಲ್ಲಿ ಬೆವರುದಾನ ಶಿಬಿರ ನಡೆಸುತ್ತಿದೆ. ಕೃಷಿಗೆ ಇಲ್ಲಿ ಯಾವುದೇ ರಾಸಾಯನಿಕ ಗೊಬ್ಬರ ಬಳಸುತ್ತಿಲ್ಲ. ಸಾವಯವ ಪದ್ಧತಿಯಲ್ಲಿ ಕೃಷಿ ಮಾಡಲಾಗುತ್ತಿದೆ. ರಾಸಾಯನಿಕ ಗೊಬ್ಬರ ಬಳಕೆಯಿಂದ ಕೃಷಿಯಲ್ಲಿ ವಿಷಯುಕ್ತ ಉತ್ಪನ್ನ ಬೆಳೆಯಲಾಗುತ್ತಿದೆ. ಬೆಳೆಯುವ ಎಲ್ಲಾ ಆಹಾರ ಪದಾರ್ಥಗಳೂ ವಿಷವಾಗಿ ನೂರಾರು ಬಗೆಯ ಖಾಯಿಲೆಗಳು ಕಾಡುತ್ತಿವೆ. ಆರೋಗ್ಯಪೂರ್ಣ ಆಹಾರ ಬೆಳೆಯುವ ಉದ್ದೇಶದಿಂದ ಸಾವಯವ ಕೃಷಿ ಬಗ್ಗೆ ವ್ಯಾಪಕ ಅರಿವು ಮೂಡಿಸಲಾಗುತ್ತಿದೆ ಎಂದರು.

ಸಂಸ್ಥೆಯ ಕಾರ್ಯನಿರ್ವಹಣಾಧಿಕಾರಿ ಕಾರಸವಾಡಿ ಮಹದೇವು ಮಾತನಾಡಿ, ಕಳೆದ 2 ವರ್ಷಗಳಿಂದ ಸಾವಯವ ಕೃಷಿಕರ ಸಹಕಾರ ಸಂಘ ವಿಷಮಯವಾಗಿರುವ ಕೃಷಿ ಭೂಮಿಯನ್ನು ಮರಳಿ ಫಲವತ್ತತೆಯತ್ತ ತರಲು ವ್ಯಾಪಕ ಪ್ರಚಾರ ಮಾಡುತ್ತಿದೆ ಎಂದರು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications