ಶ್ರೀಸಾಮಾನ್ಯ ಕನ್ನಡಿಗನಿಂದ ಮಹದಾಯಿ ನ್ಯಾಯಾಧಿಕರಣ ತೀರ್ಪಿನ ವಿಶ್ಲೇಷಣೆ
ಕೊನೆಗೂ ಮಹದಾಯಿ ಜಲವಿವಾದ ನ್ಯಾಯಮಂಡಳಿಯು ತನ್ನ ಐತೀರ್ಪನ್ನು ನೀಡಿ ಕರ್ನಾಟಕಕ್ಕೆ ಒಟ್ಟು 13.42 ಟಿಎಂಸಿ ಅಡಿ ನೀರು ಹಂಚಿಕೆ ಮಾಡಿದೆ.
ಕಳಸಾ ನಾಲೆಯಿಂದ 1.72 ಟಿಎಂಸಿ, ಬಂಡೂರಿ ನಾಲೆಯಿಂದ 2.18 ಟಿಎಂಸಿ, ಮಹದಾಯಿ ಜಲನಯನ ಪ್ರದೇಶದ ವ್ಯಾಪ್ತಿಯಲ್ಲಿ ಬಳಕೆ ಮಾಡಲು 1.50 ಟಿಎಂಸಿ ನೀರು ಹಾಗೂ ವಿದ್ಯುಚ್ಛಕ್ತಿಗೆ ಉತ್ಪಾದನೆಗೆ 8.02 ಟಿಎಂ ನೀರು ಬಳಸಿಕೊಳ್ಳುವಂತೆ ಹಂಚಿಕೆ ಮಾಡಿದೆ.
ಕರ್ನಾಟಕಕ್ಕೆ ಕುಡಿಯುವ ನೀರಿಗಾಗಿ ಕೇವಲ 5.5 ಟಿಎಂಸಿ ಹಂಚಿಕೆ ಮಾಡಿದೆ. ಈ ಪೈಕಿ ಮಲಪ್ರಭಾ ಡ್ಯಾಂಗೆ 4 ಟಿಎಂಸಿ ನೀರು ಬಿಡಬೇಕು ಎಂದು ಹೇಳಿದೆ.
ಹುಬ್ಬಳ್ಳಿ-ಧಾರವಾಡ ನಗರ ಮತ್ತು ಗದಗ ಜಿಲ್ಲೆಯ ನರಗುಂದ ನವಲಗುಂದ ಪಟ್ಟಣ ಹಾಗೂ ಗ್ರಾಮಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಹದಾಯಿ ನದಿಯಿಂದ ಮಲಪ್ರಭಾ ನದಿ ಕಣಿವೆಯ ಜಲಾಶಯಕ್ಕೆ ನೀರು ತಿರುಗಿಸುವ ಕರ್ನಾಟಕದ ಪ್ರಸ್ತಾಪಕ್ಕೆ ನ್ಯಾಯ ಮಂಡಳಿ ಒಪ್ಪಿಗೆ ನೀಡಿದೆ.

ಗೋವಾಕ್ಕೆ ತೀರ್ಪಿನಿಂದ ಮುಖಭಂಗ
ಕರ್ನಾಟಕಕ್ಕೆ ಮಹದಾಯಿಯಿಂದ ಒಂದು ಹನಿ ನೀರು ಕೊಡಲ್ಲ ಎಂದ ಗೋವಾ ರಾಜ್ಯಕ್ಕೆ ತೀರ್ಪಿನಿಂದ ಮುಖಭಂಗವಾಗಿದೆ. 1000 ಕ್ಕೂ ಹೆಚ್ಚು ದಿನಗಳು ಮಾಡಿದ ಅಹಿಂಸಾತ್ಮಕ ಹೋರಾಟಕ್ಕೆ ವಿಜಯ ಸಿಕ್ಕಂತಾಗಿದೆ.

ನಮ್ಮ ಮನವಿ ಪೂರ್ಣ ಈಡೇರಿಲ್ಲ
ಕುಡಿಯುವ ಉದ್ದೇಶಕ್ಕಾಗಿ 7.5 ಟಿಎಂಸಿ ನೀರು ಹಂಚಿಕೆ ಮಾಡುವಂತೆ ಕರ್ನಾಟಕ ನ್ಯಾಯಮಂಡಳಿಗೆ ಮನವಿ ಮಾಡಿತ್ತು. ಆದರೆ ಕುಡಿಯುವ ನೀರಿಗಾಗಿ ಸದ್ಯಕ್ಕೆ 5.5 ಟಿಎಂಸಿ ಅಡಿ ನೀರು ಹಂಚಿಕೆ ಮಾಡಿರುವುದು ಸಂಪೂರ್ಣ ತೃಪ್ತಿ ಇಲ್ಲದಿದ್ದರೂ ಸಮಾಧಾನಕರ ತೀರ್ಪಾಗಿದೆ ಎಂದು ಮಹದಾಯಿ ನದಿಯ ನೀರಿಗಾಗಿ ಎಡಬಿಡದೆ ಹೋರಾಡಿದ ನಾಡಿನ ರೈತ ಮುಖಂಡರ ಅನಿಸಿಕೆ.

ಮೇಲ್ಮನವಿ ಸಲ್ಲಿಸಬೇಕು
ಆದರೂ ಕರ್ನಾಟಕ ರಾಜ್ಯ ಸರ್ಕಾರ ತೀರ್ಪಿನ ವರದಿಯನ್ನು ಕೂಲಂಕಷವಾಗಿ ಅಧ್ಯಯನ ಮಾಡಿ ಕರ್ನಾಟಕವನ್ನು ಪ್ರತಿನಿಧಿಸಿದ ವಕೀಲರು, ರೈತ ಮುಖಂಡರು ಹಾಗೂ ವಿರೋಧ ಪಕ್ಷದ ನಾಯಕರೊಂದಿಗೆ ಚರ್ಚಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಬೇಕು. ಕರ್ನಾಟಕಕ್ಕೆ ನ್ಯಾಯಯುತವಾಗಿ ಸಿಗಬೇಕಾದ ನೀರನ್ನು ದೊರಕಿಸಲು ನ್ಯಯಾಲಯದಲ್ಲಿ ಹೋರಾಟವನ್ನು ಮುಂದುವರಿಸಬೇಕಿದೆ.

ಕಾಮಗಾರಿಯನ್ನು ಚುರುಕುಗೊಳಿಸಬೇಕು
ಮಹದಾಯಿಯಿಂದ ಮಲಪ್ರಭಾ ಕಣಿವೆಗೆ ನೀರು ಪೂರೈಸುವ ಕಾಲುವೆಗಳನ್ನು ಹಾಗೂ ಇತರ ಕಾಮಗಾರಿಗಳನ್ನು ಇನ್ನು ತಡ ಮಾಡದೆ ಬೇಗ ಮಾಡಿ ಮುಗಿಸಿ ನಮಗೆ ದೊರೆತಿರುವ ನೀರಿನ ಪಾಲನ್ನು ಸದುಪಯೋಗಪಡಿಸಿಕೊಳ್ಳುವ ಇಚ್ಛಾ ಶಕ್ತಿಯನ್ನು ಸರ್ಕಾರ ತೋರಿಸಬೇಕು.

ಮಲಪ್ರಭಾಗೆ ಕೃಷ್ಣಾ ನದಿಯಿಂದ ನೀರು
ಇದರ ಜೊತೆಗೆ ಮಲಪ್ರಭಾ ನದಿ ಕಣಿವೆಗೆ ಕೃಷ್ಣ ನದಿಯಿಂದ ನೀರು ತಿರುಗಿಸಲು ನೀರಾವರಿ ತ್ಯಜ್ಞರೊಡನೆ ಚರ್ಚಿಸಿ ಯೋಜನೆ ಕೈಗೊಳ್ಳುವುದು ಒಳಿತು. ಮಲಪ್ರಭಾ ಕೃಷ್ಣ ನದಿಯ ಉಪನದಿ ಮತ್ತು ಕೃಷ್ಣ ಕಣಿವೆ ವ್ಯಾಪ್ತಿಗೆ ಬರುವುದರಿಂದ ಕೃಷ್ಣ ನದಿಯ ಹೆಚ್ಚುವರಿ ನೀರನ್ನು ಗದಗ ಧಾರವಾಡ ಜಿಲ್ಲೆಗಳ ಹಳ್ಳಿಗಳ ಕುಡಿಯುವ ನೀರು ಪೂರೈಸಲು ಶಾಶ್ವತ ಪರಿಹಾರ ರೂಪಿಸಿದಂತಾಗುತ್ತದೆ. ಆಗ ಮಾತ್ರ ಮಹದಾಯಿ ನದಿಯ ನೀರಿಗಾಗಿ ಪ್ರಾಣ ತೆತ್ತ ರೈತರ ಆತ್ಮಕ್ಕೆ ಶಾಂತಿ ಸಿಗುತ್ತದೆ.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ











Click it and Unblock the Notifications