ಮೈಸೂರು: ನೇಣುಬಿಗಿದುಕೊಂಡು ರೈತ ಆತ್ಮಹತ್ಯೆ
ಮೈಸೂರು, ಅಕ್ಟೋಬರ್, 25: ಮೈಸೂರು ಜಿಲ್ಲೆಯಲ್ಲಿ ವಾರಕ್ಕೊಬ್ಬರಂತೆ ಅದರಲ್ಲೂ ಕೆ.ಆರ್.ನಗರ ತಾಲ್ಲೂಕಿನಲ್ಲಿ ಮೇಲಿನಿಂದ ಮೇಲೆ ಸಾಲಬಾಧೆಗೆ ಸಿಲುಕಿ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ.
ಇದೀಗ ಮತ್ತೊಬ್ಬ ರೈತ ತಂಬಾಕು ಬ್ಯಾರಲ್ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಘಟನೆ ಸಾಲಿಗ್ರಾಮ ಹೋಬಳಿಯ ಲಕ್ಕಿಕುಪ್ಪೆ ಗ್ರಾಮದಲ್ಲಿ ನಡೆದಿದೆ. ಅಲ್ಲಿನ ಗ್ರಾಮದ ನಿವಾಸಿ ರೈತ ಸ್ವಾಮಿಗೌಡ (50) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ಇವರು ತಮಗಿದ್ದ ಒಂದು ಎಕರೆ ಜಮೀನಿನಲ್ಲಿ ತಂಬಾಕು ಬೆಳೆ ಬೆಳೆದು ಒಂದಷ್ಟು ಆದಾಯ ಪಡೆಯುವ ನಿರೀಕ್ಷೆಯಲ್ಲಿದ್ದರು. ಅಲ್ಲದೆ ತಂಬಾಕು ಬೆಳೆಯಲೆಂದು ಸಾಲ ಕೂಡ ಮಾಡಿದ್ದರು.
ಕಾವೇರಿ ಗ್ರಾಮೀಣ ಬ್ಯಾಂಕ್ನಲ್ಲಿ ತಂಬಾಕು ಬೆಳೆ ಸಾಲ ಮತ್ತು ತಂಬಾಕು ಪರವಾನಿಗೆ ಸಾಲ ಸೇರಿದಂತೆ ಒಟ್ಟು 2.80 ಲಕ್ಷ ರೂ. ಸಾಲ ಮಾಡಿದ್ದಲ್ಲದೆ, 2 ಲಕ್ಷದಷ್ಟು ಕೈ ಸಾಲ ಮಾಡಿಕೊಂಡಿದ್ದರು. ಆದರೆ ಬೆಳೆದ ತಂಬಾಕು ನಿರೀಕ್ಷೆಯಷ್ಟು ಇಳುವರಿ ನೀಡಲಿಲ್ಲ.
ಜತೆಗೆ ತಂಬಾಕು ಬೆಲೆ ಕುಸಿತವಾಗಿದ್ದರಿಂದ ಮಾಡಿದ ಸಾಲವನ್ನು ತೀರಿಸುವುದು ಹೇಗೆ ಎಂಬ ಚಿಂತೆ ಕಾಡಿತ್ತು. ಸಾಲಕೊಟ್ಟವರು ಕೇಳ ತೊಡಗಿದ್ದರು.
ಇದರಿಂದ ಬೇಸತ್ತ ಸ್ವಾಮಿಗೌಡ ಬೆಳೆ ಸಾಲವನ್ನು ತೀರಿಸುವ ಹಾದಿ ಕಾಣದಾಗಿದ್ದು, ಅದೇ ಚಿಂತೆಯಲ್ಲಿ ಮನೆಯಲ್ಲಿ ಯಾರು ಇಲ್ಲದ ಸಂದರ್ಭ ನೋಡಿ ಮನೆಯ ಹಿಂಭಾಗದಲ್ಲಿರುವ ತಂಬಾಕು ಹದ ಮಾಡುವ ಬ್ಯಾರಲ್ ಮನೆಯಲ್ಲೇ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ.
ಮೃತ ರೈತ ಸ್ವಾಮಿಗೌಡ ಅವರಿಗೆ ಮೂವರು ಪುತ್ರಿಯರು, ಓರ್ವ ಪುತ್ರನಿದ್ದಾನೆ.
ಈ ಸಂಬಂಧ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಹಸೀಲ್ದಾರ್ ನಾಗರಾಜ್ ಸ್ಥಳಕ್ಕೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವ್ವಾನ ಹೇಳಿದ್ದಾರೆ. ನಂತರ ಶವ ಪರೀಕ್ಷೆ ಮಾಡಿ ವಾರಸುದಾರರಿಗೆ ಒಪ್ಪಿಸಲಾಗಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications