ಮಹಾರಾಷ್ಟ್ರ ಸಿಎಂ ಹುದ್ದೆಗೆ ಫಡ್ನವಿಸ್, ಠಾಕ್ರೆ ಬಿಟ್ಟು ಹೊಸ ಹೆಸರು!
ಮುಂಬೈ, ನವೆಂಬರ್ 01: ಮುಖ್ಯಮಂತ್ರಿ ಹುದ್ದೆಗಾಗಿ ಶಿವಸೇನೆ ಮತ್ತು ಬಿಜೆಪಿ ನಡುವಿನ ಗುದ್ದಾಟ ನಡೆಯುತ್ತಿರುವ ಹೊತ್ತಲ್ಲಿ ಮುಖ್ಯಮಂತ್ರಿ ಹುದ್ದೆಗೆ ಹೊಸ ಹೆಸರೊಂದು ಕೇಳಿಬಂದಿದೆ.
ರೈತರೊಬ್ಬರು ತಮ್ಮನ್ನೇ ಮುಖ್ಯಮಂತ್ರಿ ಮಾಡಿ ಎಂದು ಗವರ್ನರ್ ಬಳಿ ಕೇಳಿದ ಘಟನೆ ಮಹಾರಾಷ್ಟ್ರದಲ್ಲಿಗುರುವಾರ ನಡೆದಿದೆ.
ಮಹಾರಾಷ್ಟ್ರದ ಬೀಡ್ ಜಿಲ್ಲೆಯ ವಾಡ್ಮೌಲಿ ಎಂಬ ಹಳ್ಳಿಯ ರೈತ ಶ್ರೀಕಾಂತ್ ವಿಷ್ಣು ಗಡಲೆ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರಿಗೆ ಪತ್ರವೊಂದನ್ನು ಬರೆದಿದ್ದು, ಶಿವಸೇನೆ ಮತ್ತು ಬಿಜೆಪಿ ನಡುವೆ ಮುಖ್ಯಮಂತ್ರಿ ಹುದ್ದೆ ಮತ್ತು ಸರ್ಕಾರ ರಚನೆಯ ಕುರಿತು ಒಮ್ಮತ ಮೂಡುವವರೆಗೂ ನನ್ನನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ, ನಾನೇ ರೈತರ ಸಮಸ್ಯೆಗಳನ್ನು ಪರಿಹರಿಸುತ್ತೇನೆ ಎಂದಿದ್ದಾರೆ.

ಕಳೆದ ಅಕ್ಟೋಬರ್ 21 ರಂದು ನಡೆದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಫಲಿತಾಂಶ ಅಕ್ಟೋಬರ್ 24 ರಂದು ಹೊರಬಿದ್ದಿದ್ದು, ಚುನಾವಣೆಯಲ್ಲಿ ಬಿಜೆಪಿ 105, ಶಿವಸೇನೆ 56 ಸ್ಥಾನಗಳಲ್ಲಿ ಜಯಗಳಿಸಿವೆ. ಬಹುಮತಕ್ಕೆ ಬೇಕಿರುವ ಮ್ಯಾಜಿಕ್ ನಂಬರ್ 145. ಆದರೆ ಬಿಜೆಪಿ ಏಕಾಂಗಿಯಾಗಿ ಈ ಸ್ಥಾನ ಪಡೆಯಲು ಅಶಕ್ತವಾಗಿದ್ದರಿಂದ ಶಿವಸೇನೆಯ ಬೆಂಬಲ ಬಿಜೆಪಿಗೆ ಅನಿವಾರ್ಯವಾಗಿದೆ. ಆದರೆ ಶಿವಸೇನೆ ಮುಖ್ಯಮಂತ್ರಿ ಹುದ್ದೆಯ ಬೇಡಿಕೆ ಇಟ್ಟಿದ್ದು, ಅದನ್ನು ನೀಡಲು ಬಿಜೆಪಿ ಸಿದ್ಧವಿಲ್ಲ. ಆದ್ದರಿಂದ ಸರ್ಕಾರ ರಚನೆ ವಿಳಂಬಾವುತ್ತಲೇ ಇದೆ.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ












Click it and Unblock the Notifications