ಹುಬ್ಬಳ್ಳಿ: ರೈತಪಕ್ಷ ಸ್ಥಾಪನೆ ಕುರಿತು ಸುಳಿವು ನೀಡಿದ ಬಾಬಾಗೌಡ
ಹುಬ್ಬಳ್ಳಿ, ಜುಲೈ 22: ಅಖಿಲ ಕರ್ನಾಟಕ ರೈತ ಸಂಘದ ಅಧ್ಯಕ್ಷ ಹಾಗೂ ಕೇಂದ್ರ ಮಾಜಿ ಸಚಿವ ಬಾಬಾಗೌಡ ಪಾಟೀಲ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಇದಕ್ಕಾಗಿ ಅವರು ರೈತರನ್ನು ಸಂಘಟಿಸಿ ನೂತನ ರೈತರ ಪಕ್ಷದ ಮೂಲಕ ಚುನಾವಣಾ ಕಣಕ್ಕಿಳಿಯಲು ಸಿದ್ಧತೆ ನಡೆಸಿದ್ದಾರೆ.
ನಗರದಲ್ಲಿ ಜುಲೈ 21ರಂದು ರೈತ ಹುತಾತ್ಮರ ದಿನಾಚರಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರನ್ನು ಸಂಘಟಿಸಲು ರೈತ ಯಾತ್ರೆ ಮೂಲಕ ರಾಜಕೀಯ ಶಕ್ತಿಯನ್ನಾಗಿ ರೂಪಿಸಲು ಯೋಜಿಸಿದ್ದೇವೆ. ರಾಜಕೀಯ ಶಕ್ತಿ ಇಲ್ಲದಿದ್ದರೇ ಏನನ್ನು ಸಾಸಲು ಸಾಧ್ಯವಿಲ್ಲ. ಅಗತ್ಯ ಬಿದ್ದರೆ ರೈತ ಪರವಾದ ರಾಜಕೀಯ ಪಕ್ಷ ಸ್ಥಾಪಿಸುವ ಗಂಭೀರ ಚಿಂತನೆಯೂ ಇದೆ ಎಂದು ಸ್ಪಷ್ಟಪಡಿಸಿದರು.

ರಾಜಕಾರಣಿಗಳ ಮನಸ್ಥಿತಿ, ಭಾಷೆ ಬದಲಾಗಿಲ್ಲ. ಸಮಾವೇಶಗಳ ಮೂಲಕ ಹವಾ ಮಾಡುತ್ತಿದ್ದಾರೆ. ಇವರಿಗೆ ತಕ್ಕ ಉತ್ತರ ನೀಡಲು ಮುಂಬರುವ ಚುನಾವಣೆಗಾಗಿ ಆಯ್ದ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹುಡುಕಾಟ ನಡೆದಿದೆ. ನಾವು ಗೆಲ್ಲದಿದ್ದರೂ ರೈತರನ್ನು ಅವಮಾನಿಸಿದವರನ್ನು ಸೋಲಿಸುವುದು ಶತಃಸಿದ್ಧ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಚುನಾವಣೆ ಸಮಿಪಿಸುತ್ತಿದ್ದಂತೆ ಶಾಸಕರು, ಮಂತ್ರಿಗಳು, ರಾಜಕಾರಣಿಗಳಿಗೆ ರೈತರ ನೆನಪಾಗುತ್ತಿದ್ದಾರೆ. ಅಣ್ಣ, ತಮ್ಮ, ಚಿಕ್ಕಮ್ಮ, ಹಿರಿಯರು, ಹೆಸರು ಹಿಡಿದು ಕರೆದು ಕಾಳಜಿ ವ್ಯಕ್ತಪಡಿಸುತ್ತ ಹೆಗಲ ಮೇಲೆ ಕೈ ಹಾಕಿ ಚೆನ್ನಾಗಿ ಮಾಡನಾಡಿಸಿ ಮರಳು ಮಾಡುತ್ತಾರೆ. ಹೀಗೆ ಮಾತಿನಲ್ಲೇ ಮರಳು ಮಾಡಿ ವೋಟು ಕೀಳುವ ತಂತ್ರ ಮಾಡುತ್ತಾರೆ. ಇದಕ್ಕೆಲ್ಲ ಸೊಪ್ಪು ಹಾಕದೇ ರೈತ ಎನ್ನುವುದನ್ನು ಸ್ವಾಭಿಮಾನ ಪ್ರದರ್ಶಿಸಿ ಪಾಠ ಕಲಿಸಬೇಕು. ರೈತರ ಬಗ್ಗೆ ನಿಜವಾದ ಕಳಕಳಿ ಇರುವವರನ್ನು ಬೆಂಬಲಿಸಿ, ಆದರೆ, ನಾಟಕ ಮಾಡುವವರನ್ನು ದೂರ ಇಡಬೇಕೆಂದು ಕಿವಿಮಾತು ಹೇಳಿದರು.
-
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications