ಎಚ್.ಡಿ.ಕೋಟೆ ಅರಣ್ಯದಂಚಿನಲ್ಲಿ ಭಯ ಸೃಷ್ಟಿಸಿದ ಹುಲಿ, ಚಿರತೆ!
ಮೈಸೂರು, ಜನವರಿ 03: ಎಚ್.ಡಿ.ಕೋಟೆಯ ನಾಗರಹೊಳೆ ಅರಣ್ಯ ವ್ಯಾಪ್ತಿಯ ಅಂತರಸಂತೆ ವಲಯದಲ್ಲಿ ಕಾಣಿಸಿಕೊಂಡಿರುವ ಹುಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದು ತಿನ್ನುತ್ತಿರುವುದರಿಂದ ರೈತರು ಭಯಗೊಂಡಿದ್ದಾರೆ.
ಈಗಾಗಲೇ ಅಂತರಸಂತೆ ವ್ಯಾಪ್ತಿಯ ಹೊನ್ನಮನಕಟ್ಟೆ ಗ್ರಾಮ ಸೇರಿದಂತೆ ಹಲವೆಡೆ ಸಂಚರಿಸಿರುವ ಈ ಹುಲಿ ಸುಮಾರು ನಾಲ್ಕು ಜಾನುವಾರುಗಳನ್ನು ಬಲಿತೆಗೆದುಕೊಂಡಿದೆ. ಅಲ್ಲಲ್ಲಿ ಹುಲಿಯ ಹೆಜ್ಜೆಗುರುತುಗಳು ಕಂಡು ಬಂದಿರುವ ಕಾರಣ ಜನ ಮನೆಯಿಂದ ಹೊರಗೆ ಬರಲು ಭಯಪಡುವಂತಾಗಿದೆ.

ಇಲ್ಲಿ ರೈತರೇ ಹೆಚ್ಚಾಗಿರುವ ಕಾರಣ ಬೆಳಗ್ಗಿನಿಂದ ಸಂಜೆವರೆಗೆ ಜಮೀನಿನಲ್ಲಿ ದುಡಿಯಬೇಕಾಗಿದೆ. ಆದರೆ ಹುಲಿಯ ಭಯದಿಂದ ಜಮೀನಿಗೆ ತೆರಳಲು ಭಯಪಡುವಂತಾಗಿದೆ. ಇನ್ನು ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ.
ಸಾಮಾನ್ಯವಾಗಿ ಈ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಕಷ್ಟಪಟ್ಟು ಬೆಳೆ ಬೆಳೆಸಿ ಅದು ಫಸಲಿಗೆ ಬರುತ್ತಿದ್ದಂತೆಯೇ ದಾಳಿ ಮಾಡಿ ಬೆಳೆಯನ್ನು ತಿಂದು ತುಳಿದು ಹಾಕುತ್ತಿವೆ. ಇದೀಗ ಹುಲಿಯ ಭಯವೂ ಇಲ್ಲಿನವರನ್ನು ಕಾಡತೊಡಗಿದೆ. ಜೀವನ ನಿರ್ವಹಣೆಯ ಮೂಲವಾದ ಹಸುಗಳ ಮೇಲೆ ಹುಲಿ ದಾಳಿ ಮಾಡಿ ಕೊಂದು ಹಾಕಿದರೆ ಜೀವನ ಮಾಡುವುದು ಹೇಗೆ ಎಂಬ ಆತಂಕ ರೈತರನ್ನು ನಿತ್ಯ ಕಾಡುತ್ತಿದೆ.
ಅಂತರಸಂತೆ ವ್ಯಾಪ್ತಿಯಲ್ಲಿ ಓಡಾಡುತ್ತಿರುವ ಹುಲಿಯನ್ನು ಹಿಡಿಯಲು ಈಗಾಗಲೇ ಅರಣ್ಯ ಇಲಾಖೆ ಸಾಕಾನೆಗಳ ಮೂಲಕ ಕಾರ್ಯಾಚರಣೆ ನಡೆಸುತ್ತಿದೆ. ಬಳ್ಳೆ ಮತ್ತು ಮತ್ತಿಗೋಡು ಸಾಕಾನೆ ಶಿಬಿರಗಳಿಂದ ಅರ್ಜುನ, ಸರಳ, ನಂಜುಂಡ, ದ್ರೋಣ ಎಂಬ ನಾಲ್ಕು ಸಾಕಾನೆಗಳನ್ನು ಕರೆಯಿಸಿಕೊಂಡು ಅವುಗಳ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ. ಆದರೆ ಎಲ್ಲಿಯೂ ಹುಲಿಯ ಸುಳಿವು ಸಿಗುತ್ತಿಲ್ಲ.

ಇನ್ನು ಹುಲಿ ಹಸುವನ್ನು ಬೇಟೆಯಾಡಿದ್ದ ಹೊನ್ನಮನಕಟ್ಟೆ ಗ್ರಾಮದ ರೈತ ಭೈರೇಗೌಡ ಜಮೀನಿನ ಸಮೀಪ ಟ್ರಾಪಿಂಗ್ ಕ್ಯಾಮೆರಾ ಅಳವಡಿಸಲಾಗಿದ್ದು, ಅಲ್ಲಿ ಹುಲಿ ಬೇಟೆಯಾಡಿದ್ದ ಜಾನುವಾರನ್ನು ತಿನ್ನಲು ಬಂದ ಚಿರತೆಯ ದೃಶ್ಯ ಸೆರೆಯಾಗಿದೆ. ಸದ್ಯ ಹುಲಿಯ ಸುಳಿವು ಮಾತ್ರ ಎಲ್ಲೂ ಕಾಣುತ್ತಿಲ್ಲ. ಆದ್ದರಿಂದ ಹುಲಿಯನ್ನು ಕಂಡರೆ ತಕ್ಷಣ ಅರಣ್ಯ ಇಲಾಖೆಗೆ ತಿಳಿಸುವಂತೆ ಅರಣ್ಯಾಧಿಕಾರಿಗಳು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
ಇದೆಲ್ಲದರ ನಡುವೆ ಚಿರತೆ ಕಾಣಿಸಿಕೊಂಡಿರುವುದರಿಂದ ಜನಕ್ಕೆ ಈಗ ಹುಲಿ ಜತೆ ಚಿರತೆಯ ಭಯವೂ ಕಾಡತೊಡಗಿದೆ. ಒಟ್ಟಾರೆ ಇಲ್ಲಿನ ರೈತರಿಗಂತೂ ವನ್ಯಪ್ರಾಣಿಗಳ ಹಾವಳಿಯಿಂದ ನೆಮ್ಮದಿಯೇ ಇಲ್ಲದಂತಾಗಿದೆ. ಪ್ರಾಣಿಗಳು ಅರಣ್ಯವನ್ನು ದಾಟಿ ಬರದಂತೆ ಕ್ರಮ ಕೈಗೊಳ್ಳಿ ಎಂಬುದು ಸ್ಥಳೀಯರ ಮನವಿ.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications