ಮಹಿಳೆಯರು, ವೃದ್ಧರೂ ಸಹ ಅಡಿಕೆ ಮರ ಏರಲು ನೆರವಾಗುವ ಟ್ರೀ ಸೈಕಲ್ ಆವಿಷ್ಕರಿಸಿದ ರೈತ
ಮಂಗಳೂರು, ಅಕ್ಟೋಬರ್ 1: ಕರಾವಳಿಯ ಕೃಷಿಕರ ಜೀವನಾಡಿ ಅಡಿಕೆ ಬೆಳೆ. ಗದ್ದೆಗಳೆನ್ನೆಲ್ಲಾ ತೋಟವನ್ನಾಗಿಸಿ, ಗದ್ದೆಗೆ ಅಡಿಕೆ ಗಿಡ ಹಾಕಿ ಲಾಭ ಗಳಿಸುವ ಯೋಚನೆ ಮಾಡಿದ ಕೃಷಿಕ ಈಗ ಕಾರ್ಮಿಕರ ಸಮಸ್ಯೆಯನ್ನು ಅನುಭವಿಸುತ್ತಿದ್ದಾನೆ.
ನುರಿತ ಕಾರ್ಮಿಕರ ಅಭಾವದಿಂದ ಅಡಿಕೆ ಮರವೇರಲು ಜನವಿಲ್ಲದೇ ಅಡಿಕೆ ಬೆಳೆಯನ್ನು ಸರಿಯಾಗಿ ನಿರ್ವಹಣೆ ಮಾಡಲಾಗದೇ ನಷ್ಟವನ್ನು ಅನುಭವಿಸುತ್ತಿದ್ದಾನೆ. ಅಡಿಕೆಬೆಳೆಗಾರರ ಸಂಕಟ ಅರಿತ ಕೃಷಿಕ ನೋರ್ವ ಅಡಿಕೆ ಮರ ಏರಲು ಟ್ರೀ ಸೈಕಲ್ ಅವಿಷ್ಕಾರ ಮಾಡಿದ್ದು, ಕೃಷಿಕರ ಚಿತ್ತ ಸೆಳೆದಿದೆ.
ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಚಾರ್ವಾಕದ ಯುವ ಕೃಷಿಕ ಬಾಸ್ಕರ್ ಟ್ರೀ ಸೈಕಲ್ ಅವಿಷ್ಕಾರ ಮಾಡಿ ಎಲ್ಲರ ಕಣ್ಣು ಸೆಳೆದಿದ್ದಾರೆ. ಸಣ್ಣ ತೋಟ ಹೊಂದಿರುವ ಭಾಸ್ಕರ್ ತಾನೇ ಸ್ವಾವಲಂಭಿಯಾಗಿ ತೋಟದ ಕೆಲಸದಲ್ಲಿ ತೊಡಗುವಂತಹ ಉಪಕರಣವೊಂದನ್ನು ಆವಿಷ್ಕರಿಸಿದ್ದಾರೆ. ಅಡಿಕೆ ಮರಗಳಿಗೆ ಸಲೀಸಾಗಿ ಹತ್ತಲು ಉಪಕಾರಿಯಾಗುವ ಈ ಉಪಕರಣದಿಂದ ಅಡಿಕೆಗೆ ಔಷದಿ ಸಿಂಪಡಿಸುವ, ಅಡಿಕೆ ಕೊಯ್ಯವ ಕೆಲಸವನ್ನು ಮಾಡಬಹುದಾಗಿದೆ. ಮಹಿಳೆಯರು ಸೇರಿದಂತೆ ಎಲ್ಲಾ ವಯೋಮಾನದವರೂ ಈ ಉಪಕರಣವನ್ನು ಬಳಸಿ ಅಡಿಕೆ ಮರವನ್ನು ಹತ್ತಬಹುದಾಗಿದೆ.
ಕಬ್ಬಿಣದ ರಾಡ್ ಗಳನ್ನು ಬಳಸಿ ಈ ಉಪಕರಣವನ್ನು ನಿರ್ಮಿಸಲಾಗಿದ್ದು, ಅಡಿಕೆ ಮರವನ್ನು ಚೈನ್ ಮೂಲಕ ಲಾಕ್ ಮಾಡಿ, ಕೈ ಹಾಗೂ ಕಾಲಿನ ಸಹಾಯದಿಂದ ಈ ಉಪಕರಣವನ್ನು ಉಪಯೋಗಿಸಬಹುದಾಗಿದೆ.

ಸಣ್ಣ ಕೃಷಿಕರಿಗೆ ಉಪಕಾರಿ ಟ್ರೀ ಸೈಕಲ್
5 ನೇ ತರಗತಿಯವರೆಗೆ ಓದಿರುವ ಬಾಸ್ಕರ್, ಬಳಿಕ ಹಲವಾರು ಕಾರಣಗಳಿಂದಾಗಿ ಓದನ್ನು ಅರ್ಧಕ್ಕೇ ಬಿಟ್ಟು ಕೃಷಿಯತ್ತ ಮುಖ ಮಾಡಿದವರು. ಅಡಿಕೆ ತೋಟವನ್ನು ಹೊಂದಿರುವ ಭಾಸ್ಕರ್ ಗೆ ಕಾರ್ಮಿಕರ ಸಮಸ್ಯೆಯ ಬಗ್ಗೆ ಅರಿವಿತ್ತು. ಸಾಮಾನ್ಯವಾಗಿ ಕಾರ್ಮಿಕರು ದೊಡ್ಡ ತೋಟಗಳಲ್ಲಿ ಹೆಚ್ಚು ಆದಾಯ ಸಿಗುತ್ತದೆ ಎನ್ನುವ ಕಾರಣಕ್ಕಾಗಿ ಸಣ್ಣ ಕೃಷಿ ತೋಟಗಳತ್ತ ಕೆಲಸಕ್ಕೆ ಬರಲು ನಿರ್ಲಕ್ಷ್ಯ ವಹಿಸೋದರಿಂದ ಸಣ್ಣ ಕೃಷಿಕನ ತೋಟಕ್ಕೆ ಸರಿಯಾದ ಸಮಯದಲ್ಲಿ ಮದ್ದು ಬಿಡದೆ ಅಡಿಕೆ ಬೆಳೆ ನಾಶವಾದ ಉದಾಹರಣೆಗಳೂ ಇವೆ. ಇದರಿಂದಾಗಿ ಸಣ್ಣ ಕೃಷಿಕರಿಗೆ ಉಪಕಾರಿಯಾಗಲಿ ಎನ್ನುವ ಕಾರಣಕ್ಕೆ ಈ ಮರ ಹತ್ತುವ ಟ್ರೀ ಸೈಕಲ್ ಅನ್ನು ಸಿದ್ಧಪಡಿಸಿದ್ದಾರೆ.

ಮೂರು ವರ್ಷಗಳ ಪರಿಶ್ರಮ ಯಶಸ್ಸು
ಸುರಕ್ಷತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಉಪಕರಣವನ್ನು ನಿರ್ಮಿಸಿರುವ ಬಾಸ್ಕರ್ 3 ವರ್ಷದ ಹಿಂದೆ ಈ ಕಾರ್ಯದಲ್ಲಿ ತೊಡಗಿದ್ದಾರೆ. ಮೂರು ವರ್ಷಗಳ ಕಾಲ ಹಲವು ಮಾರ್ಪಾಡು ಮತ್ತು ಲೋಪದೋಷಗಳನ್ನು ಸರಿಪಡಿಸಿ ಈ ಉಪಕರಣವನ್ನು ಎಲ್ಲಾ ರೀತಿಯ ಪ್ರಯೋಗಕ್ಕೆ ಒಳಪಡಿಸಿ ಇದೀಗ ಯಶಸ್ವಿಯಾಗಿದ್ದಾರೆ.

6500 ರೂಪಾಯಿ ಕೃಷಿಕರಿಗೆ ಮಾರಾಟ
ತನ್ನ ತೋಟ ಮಾತ್ರವಲ್ಲದೆ ಇತರ ತೋಟಗಳಲ್ಲೂ ಇದೀಗ ಮದ್ದು ಬಿಡುವ ಮತ್ತು ಅಡಿಕೆ ಕೊಯ್ಯುವ ಕೆಲಸಕ್ಕೆ ಬಾಸ್ಕರ್ ಇದೇ ಉಪಕರಣವನ್ನು ಬಳಸುತ್ತಿದ್ದಾರೆ. ಅಡಿಕೆ ಮರಕ್ಕೆ ಚೈನ್ ಮೂಲಕ ಲಾಕ್ ಮಾಡಿ , ಕೈ ಹಾಗು ಕಾಲಿನ ಮೂಲಕ ಈ ಉಪಕರಣವನ್ನು ಉಪಯೋಗಿಸಿ ಮರವನ್ನು ಸಲೀಸಾಗಿ ಹತ್ತಲಾಗುತ್ತದೆ. ಇದರ ಉಪಯೋಗವನ್ನು ಅರಿತ ಹಲವು ಕೃಷಿಕರಿಗೆ ಭಾಸ್ಕರ್ ಉಪಕರಣವನ್ನು ನೀಡಿದ್ದು, 6500 ರೂಪಾಯಿಗಳನ್ನು ಪಡೆದುಕೊಳ್ಳುತ್ತಿದ್ದಾರೆ.ಉಪಕರಣ ಪಡೆಯಲು ಬರುವ ಕೃಷಿಕನಿಗೆ ತನ್ನ ಅಡಿಕೆ ತೋಟದಲ್ಲೇ ತರಬೇತಿ ನೀಡಿದ ಬಳಿಕವೇ ಉಪಕರಣವನ್ನು ಮಾರಾಟ ಮಾಡುತ್ತಾರೆ.

ಸುಲಭ ಮತ್ತು ಸುರಕ್ಷಿತ ಉಪಕರಣ
ಮರವೇರುವ ಈ ಉಪಕರಣವನ್ನು ಇದೀಗ ಹಲವೆಡೆ ಬಳಕೆ ಮಾಡಲಾಗುತ್ತಿದೆ. ಸುಲಭವಾಗಿ ಮರ ಏರಬಹುದಾಗಿರುವ ಮತ್ತು ಸುರಕ್ಷಿತವಾಗಿರುವ ಕಾರಣ ಸಣ್ಣ ಕೃಷಿಕರು ತಾವೇ ಅಡಿಕೆಗೆ ಮದ್ದು ಬಿಡುವ ಮತ್ತು ಕೊಯ್ಯವ ಕೆಲಸ ಮಾಡಬಹುದಾಗಿದೆ. ಕಾರ್ಮಿಕರ ಕೊರತೆಯನ್ನು ಎದುರಿಸುತ್ತಿರುವ ಅಡಿಕೆ ಬೆಳೆಗಾರನಿಗೆ ಈ ಉಪಕರಣ ಬಹಳ ಉಪಕಾರಿಯಾಗಲಿದೆ ಎನ್ನುವುದು ಕೃಷಿಕರ ಅಭಿಪ್ರಾಯವೂ ಆಗಿದೆ.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications