ಧರ್ಮಸ್ಥಳಕ್ಕೆ ಪಾದಯಾತ್ರೆ ಹೊರಟಿದ್ದ ಯುವಕ ನಾಪತ್ತೆ: ಹುಡುಕಿ ಕೊಟ್ಟವರಿಗೆ ₹5,000 ಬಹುಮಾನ
ಧರ್ಮಸ್ಥಳಕ್ಕೆ ಪಾದಯಾತ್ರೆ ಹೊರಟಿದ್ದ ಅರಸೀಕೆರೆ ತಾಲೂಕಿನ ಗಂಡಸಿ ಸಮೀಪದ ತಿಮ್ಲಾಪುರ ಗ್ರಾಮದ 22 ವರ್ಷದ ಲವ ಎನ್ನುವಾತ ನಾಪತ್ತೆಯಾಗಿದ್ದು, ಮಗನನ್ನು ಹುಡುಕಿಕೊಟ್ಟವರಿಗೆ ಪೋಷಕರು ₹5,000 ಬಹುಮಾನ ಘೋಷಿಸಿದ್ದಾರೆ.
ಚಿಕ್ಕಮಗಳೂರು, ಫೆಬ್ರವರಿ 20: ಧರ್ಮಸ್ಥಳಕ್ಕೆ ಪಾದಯಾತ್ರೆ ಹೊರಟಿದ್ದ ಯುವಕನೋರ್ವ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಮಗನನ್ನು ಹುಡುಕಿಕೊಟ್ಟವರಿಗೆ ಐದು ಸಾವಿರ ಬಹುಮಾನ ನೀಡುತ್ತೇವೆಂದು ಪೋಷಕರು ತಿಳಿಸಿದ್ದು, ಈವರೆಗೂ ಯುವಕನ ಬಗ್ಗೆ ಯಾವುದೇ ಮಾಹಿತಿ ತಿಳಿದುಬಂದಿಲ್ಲ.
ನಾಪತ್ತೆಯಾದ ಯುವಕನನ್ನು ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಗಂಡಸಿ ಸಮೀಪದ ತಿಮ್ಲಾಪುರ ಗ್ರಾಮದ 22 ವರ್ಷದ ಲವ ಎಂದು ಗುರುತಿಸಲಾಗಿದೆ. ಮಗ ನಾಪತ್ತೆಯಾಗುತ್ತಿದಂತೆ ಪೋಷಕರು ಆತಂಕದಿಂದ ಚಾರ್ಮಾಡಿ ಘಾಟ್, ಕೊಟ್ಟಿಗೆಹಾರ, ಬಣಕಲ್ ಸೇರಿದಂತೆ ತೀವ್ರ ಹುಡುಕಾಟ ನಡೆಸಿದ್ದಾರೆ. ಧರ್ಮಸ್ಥಳಕ್ಕೆ ಹೋಗಿ ಬರುವ ವಾಹನಗಳನ್ನು ಚೆಕ್ ಮಾಡಿದ್ದಾರೆ. ಸರ್ಕಾರಿ ಬಸ್ಗಳನ್ನು ಪರಿಶಿಲನೆ ನಡೆಸಿದ್ದಾರೆ. ಆದರೆ ಯುವಕ ಪತ್ತೆಯಾಗಿಲ್ಲ.

ಯುವಕ ಲವನ ಬುದ್ಧಿಮಟ್ಟ ಸ್ವಲ್ಪ ಮಟ್ಟಿಗೆ ಕಡಿಮೆ ಇದೆ. ಆದರೆ ಒಂದಷ್ಟು ಜ್ಞಾನ ಇದೆ. ಒಳ್ಳೆದು-ಕೆಟ್ಟದ್ದರ ಅರಿವಿದೆ. ಧರ್ಮಸ್ಥಳಕ್ಕೆ ಪಾದಯಾತ್ರೆ ಹೊರಟ ಈತ ಹಾಸನದಿಂದ ಪೋಷಕರ ಜೊತೆಯೇ ನಡೆದುಕೊಂಡು ಬಂದವನು ಕೊಟ್ಟಿಗೆಹಾರದಲ್ಲಿ ನಾಪತ್ತೆಯಾಗಿದ್ದಾನೆ. ಕೂಡಲೇ ಜೊತೆಯಲ್ಲಿದ್ದವರು ಅಂಗಡಿ-ಮುಂಗಟ್ಟು, ಬಸ್, ಸುತ್ತಮುತ್ತ ಎಲ್ಲಾ ಕಡೆ ಹುಡುಕಾಡಿದ್ದಾರೆ. ಆದರೆ, ಆತನ ಸುಳಿವು ಸಿಕ್ಕಿಲ್ಲ. ಕೂಡಲೇ ಪೋಷಕರು ಇಲ್ಲೇ ಎಲ್ಲೋ ಸುತ್ತಮುತ್ತಾ ಇರುತ್ತಾನೆ ಎಂದು ಸ್ಥಳೀಯರ ಸಹಾಯ ಪಡೆದಿದ್ದಾರೆ. ಆದರೂ ಸಿಕ್ಕಿಲ್ಲ.

ಮಗ ಕಾಣದೇ ಗಾಬರಿಗೊಂಡಿರುವ ಪೋಷಕರು ಮಗಗನ್ನು ಹುಡುಕಿ ಕೊಟ್ಟರೆ ಐದು ಸಾವಿರ ಹಣ ನೀಡುವುದಾಗಿ ಹೇಳಿದ್ದಾರೆ. ಕೊಟ್ಟಿಗೆಹಾರದ ಸ್ಥಳೀಯ ಯುವಕರಾದ ಸಂತೋಷ್, ತನ್ವೀರ್, ಸಂಜಯ್, ನಂದೀಶ್ ಸೇರಿದಂತೆ ಹಲವು ಯುವಕರು ನಿಮ್ಮ ಹಣ ಬೇಡ. ನಿಮ್ಮ ಮಗ ಸಿಕ್ಕರೆ ಸಾಕು ಎಂದು ತೀವ್ರ ಹುಡುಕಾಟ ನಡೆಸಿದ್ದಾರೆ. ಆತನ ಫೋಟೋವನ್ನು ಮೊಬೈಲ್ನಲ್ಲಿ ಬೇರೆಯವರಿಗೂ ಶೇರ್ ಮಾಡಿದ್ದಾರೆ. ಆದರೆ, ಈವರೆಗೆ ಲವನ ಸುಳಿವು ಸಿಕ್ಕಿಲ್ಲ. ಹೀಗಾಗಿ ಪೋಷಕರು ಬಣಕಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಸದ್ಯ ಯುವಕನ ಹುಡುಕಾಟ ಚುರುಕುಗೊಂಡಿದೆ.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್












Click it and Unblock the Notifications