ಬೆಂಗಳೂರು: ಮಳೆ ಕೊರತೆ - ತರಕಾರಿ ಬೆಲೆ ಏರಿಕೆ
ಬೆಂಗಳೂರು,ಜು.8:ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಾಗುತ್ತಿದ್ದಂತೆ ಇತ್ತ ತರಕಾರಿಗಳ ಬೆಲೆ ಏರಿಕೆಯಾಗತೊಡಗಿದೆ. ಪ್ರತಿ ತಿಂಗಳು ತರಕಾರಿ ಬೆಳೆ ಹೆಚ್ಚಳವಾಗುತ್ತಿದ್ದು, ಜನಸಾಮಾನ್ಯರು ತರಕಾರಿಯನ್ನು ಕೇವಲ ನೋಡಿಕೊಂಡು ಹಿಂದಿರುಗುವ ಪರಿಸ್ಥಿತಿ ನಿರ್ಮಾಣವಾಗಿದೆ.
ಮೇ ಕೊನೆಯ ವಾರದಲ್ಲಿ ಗಗನಕ್ಕೆ ಏರಿದ ತರಕಾರಿ ಬೆಲೆ ಮುಂಗಾರು ಮಳೆ ಭರ್ಜರಿಯಾದರೆ ಇಳಿಯಬಹುದು ಎಂದು ಹೇಳಲಾಗುತಿತ್ತು. ಆದರೆ ಮುಂಗಾರು ಕೈಕೊಟ್ಟದ್ದರಿಂದ ತರಕಾರಿ ಬೆಲೆ ಮತ್ತಷ್ಟು ಏರಿಕೆಯಾಗಿದೆ.[ಪೆಟ್ರೋಲ್ 1.69 ರೂ. ಡೀಸೆಲ್ 50 ಪೈಸೆ ಹೆಚ್ಚಳ]
ಮಾರುಕಟ್ಟೆ, ಸಣ್ಣ ತರಕಾರಿ ಅಂಗಡಿಗಳು ಹಾಗೂ ಮಾಲ್ಗಳಲ್ಲಿ ತರಕಾರಿ ಬೆಲೆ ಹಾಪ್ಕಾಮ್ಸ್ಗಿಂತ ಶೇ.30 ರಷ್ಟು ಹೆಚ್ಚಳವಾಗಿದೆ. ಇದು ಕೂಡ ಗ್ರಾಹಕರ ಜೇಬಿಗೆ ಸರಿಯಾಗಿಯೇ ಕತ್ತರಿ ಹಾಕಿದೆ. ಹಾಪ್ಕಾಮ್ಸ್ ಮಳಿಗೆಗಳಲ್ಲಿ ರೈತರಿಂದ ನೇರವಾಗಿ ತರಕಾರಿ ಖರೀದಿಸಿ, ಗ್ರಾಹಕರಿಗೆ ನೀಡಲಾಗುತ್ತಿದೆ. ಆದ್ದರಿಂದ ದರ ಸ್ಪಲ್ಪ ಕಡಿಮೆ ದರದಲ್ಲಿ ತರಕಾರಿ ಮಾರಾಟವಾಗುತ್ತಿದ್ದರೂ ಈಗ ಹಾಪ್ಕಾಮ್ಸ್ ಮಳಿಗೆಗಳಲ್ಲೂ ತರಕಾರಿ ಬೆಲೆ ಹೆಚ್ಚಾಗಿದೆ.[ಅಕ್ಟೋಬರ್ನಲ್ಲಿ ಈರುಳ್ಳಿ ಬೆಲೆ 100 ರೂಪಾಯಿ!]

ಹೀಗಾಗಿ ಇಲ್ಲಿ ಹಾಪ್ಕಾಮ್ಸ್ನ ಒಂದು ತಿಂಗಳ ಹಿಂದಿನ ದರ(ಜೂ.7) ಮತ್ತು ಪ್ರಸ್ತುತ ದರ(ಜು.7) ನೀಡಲಾಗಿದೆ.
ಬದನೆ ---- 38(28)
ಬಿಟ್ರೋಟ್-- 46(31)
ಬೆಂಡೆಕಾಯಿ -- 38(28)
ಬಟಾಟೆ ---- 37(32)
ಟೊಮೇಟೊ --- 36(11)
ಸೌತೆಕಾಯಿ ----- 48(31)
ಊಟಿ ಕ್ಯಾರೇಟ್--- 58(49)
ಕ್ಯಾಬೇಜ್ ---- 24(22)
ಮೆಂತೆಸೊಪ್ಪು-- 107(92)
ಈರುಳ್ಳಿ ದೊಡ್ಡದು ---42(36)
(ಆವರಣದ ಒಳಗಡೆ ಇರುವುದು ಜೂನ್ ತಿಂಗಳ ದರ)
ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ಮಾಡಬಹುದು:www.hopcoms.kar.nic.in
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications