ಪರ್ಯಾಯ ಇಂಧನ ಉತ್ಪಾದನೆಗೆ ಕೃಷಿ ವಿಸ್ತರಿಸಬೇಕು: ನಿತಿನ್ ಗಡ್ಕರಿ
ಮುಂಬೈ ಆಗಸ್ಟ್ 28: ಇಂಧನ ಕೊರತೆಯನ್ನು ಎದುರಿಸುತ್ತಿರುವ ಭಾರತದೇಶದಲ್ಲಿ ಕೃಷಿ ವಲಯವನ್ನು ಇಂಧನ ಮತ್ತು ವಿದ್ಯುತ್ ವಲಯಕ್ಕೆ ಪೂರಕವಾಗುವಂತೆ ವಿಸ್ತರಿಸಬೇಕಾಗಿದೆ. ಪರ್ಯಾಯ ಇಂಧನ ಶಕ್ತಿ ಉತ್ಪಾದನೆಗೂ ಆದ್ಯತೆ ನೀಡಬೇಕಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದರು.
ಮುಂಬೈನಲ್ಲಿ ನಡೆದ ರಾಷ್ಟ್ರೀಯ ಸಹ-ನಿರ್ಮಾಣ ಪ್ರಶಸ್ತಿ-2022ರ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು, ಪೆಟ್ರೋಲಿಯಂ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳಲು ಭಾರತ ಸರ್ಕಾರವು ವಾರ್ಷಿಕವಾಗಿ 15 ಲಕ್ಷ ಕೋಟಿ ರೂಪಾಯಿ ಖರ್ಚು ಮಾಡುತ್ತೇವೆ. ಇದನ್ನು ಹಂತ ಹಂತವಾಗಿ ಕಡಿಮೆ ಮಾಡುವನಿಟ್ಟಿನಲ್ಲಿ ಎಥೆನಾಲ್ ಇಂಧನವನ್ನು ಹೆಚ್ಚು ಉತ್ಪಾದಿಸಲು ಯೋಚಿಸಬೇಕು. ಅದಕ್ಕೆ ಮೂಲವಾಗಿರುವ ಕೃಷಿ ವಲಯವನ್ನು ವಿದ್ಯುತ್ ಮತ್ತು ಇಂಧನ ಉತ್ಪಾದನೆಯಂತ ಕ್ಷೇತ್ರಗಳತ್ತ ವಿಸ್ತರಿಸಬೇಕು, ಉತ್ತೇಜನ ನೀಡಬೇಕು ಎಂದು ಅಭಿಪ್ರಾಯಪಟ್ಟರು.
ಪರ್ಯಾಯ ಇಂಧನ ಉತ್ಪಾದನೆ ಹೆಚ್ಚಾಗಬೇಕು
ಕಬ್ಬು ಕೃಷಿ ಮತ್ತು ರೈತರು ಉದ್ಯಮಗಳಿಗೆ ಹೆಚ್ಚು ಕೊಡುಗೆ ನೀಡುತ್ತಾರೆ. ಸಕ್ಕರೆ ಉತ್ಪಾದನೆಯಿಂದ ಆದಾಯ ಹೆಚ್ಚಾಗುವ ಭವಿಷ್ಯದ ದೃಷ್ಟಿಯಿಂದ ಪರ್ಯಾಯ ಇಂಧನವಾದ ಎಥೆನಾಲ್ ಸಹ ಉತ್ಪಾದಿಸುವತ್ತ ಗಮನಹಿರಿಸಬೇಕು. ಎಥೆನಾಲ್ ಅನ್ನು ಎಥೈಲ್ ಮದ್ಯ, ಧಾನ್ಯ ಆಲ್ಕೋಹಾಲ್ ಎಂದು ಕರೆಯುತ್ತಾರೆ.
ಸಕ್ಕರೆಯ ಹುದುಗುವಿಕೆ, ಕಾರ್ನ್, ಬಾರ್ಲಿ ಗೋಧಿ ಮುಂತಾದ ಸಂಸ್ಕರಿಸಿದ ಧಾನ್ಯಗಳ ಮೂಲಕ ಎಥೆನಾಲ್ ಉತ್ಪಾದಿಸಲಾಗುತ್ತದೆ.

ಭವಿಷ್ಯದ ದೃಷ್ಟಿಯಿಂದ ತಂತ್ರಜ್ಞಾನಗಳ ಸಹಾಯದಿಂದ ಪರ್ಯಾಯ ಇಂಧನಗಳತ್ತ ಗಮನ ಹರಿಸಬೇಕಾದ ತುರ್ತು ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿ ಕೃಷಿ ಉತ್ಪನ್ನಗಳಿಂದ ಎಥೆನಾಲ್ ಉತ್ಪಾದಿಸಿ ಭಾರತ ಸ್ವಾವಲಂಬಿಯಾಗಬೇಕು ಎಂದು ಅವರು ಹೇಳಿದರು.
ಕೃಷಿಯಲ್ಲಿ ಹೆಚ್ಚು ಬೆಳವಣಿಗೆ ಸಾಧಿಸಬೇಕು
ಭಾರತ ಜನಸಂಖ್ಯೆಯ ಶೇ.65ರಿಂದ 70ರಷ್ಟು ಜನರು ಕೃಷಿಯ ಮೇಲೆಯೇ ಅವಲಂಬಿತ ಆಗಿದ್ದೇವೆ. ಆದರೆ ದೇಶದಲ್ಲಿ ಕೃಷಿ ಬೆಳವಣಿಗೆ ದರ ಕೇವಲ ಶೇ.12ರಿಂದ 13ರಷ್ಟು ಮಾತ್ರವೇ ಇದೆ. ಇದು ಹೆಚ್ಚಾಗಬೇಕಾದರೆ ಅಗತ್ಯ ಉತ್ತೇಜನ ನೀಡಬೇಕು. ಪರ್ಯಾಯ ಇಂಧನ ಉತ್ಪಾದನೆ ಸೇರಿದಂತೆ ಇನ್ನಿತರ ಯೋಜನೆ ರೂಪಿಸಬೇಕು. ಕೃಷಿಗೆ ಒತ್ತು ನೀಡಬೇಕು ಎಂದರು.
ಪ್ರಸ್ತಕ ವರ್ಷದಲ್ಲಿ ಭಾರತದಲ್ಲಿ ಕೃಷಿ ಉತ್ತನ್ನದ ಅಗತ್ಯತೆ ಸುಮಾರು 280 ಲಕ್ಷ ಟನ್ಗಳಷ್ಟಿದ್ದರೆ ಅದರ ಉತ್ಪಾದನೆಯು 360 ಲಕ್ಷ ಟನ್ಗಳನ್ನು ದಾಟಿದೆ. ಉತ್ಪಾದನೆ, ಆಹಾರ ಭದ್ರತೆಯಲ್ಲಿ ಉತ್ತಮವಾಗಿರುವ ಭಾರತ ಇನ್ನಿತರ ದೇಶಗಂತೆ ಕೆಲವು ಮಾರ್ಗಗಳನ್ನು ಅನುಸರಿಸಬೇಕಿದೆ.

ಕೃಷಿ ಉತ್ಪಾದನೆಯನ್ನು ಎಥೆನಾಲ್ ಉತ್ಪನ್ನ ತಯಾರಿಸಲು ಬಳಸಬೇಕು. ಈಗಾಗಲೇ ಬ್ರೇಜಿಲ್ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದ್ದು, ಅದರನ್ನು ಭಾರತ ಅನುಸರಿಸಬೇಕಿದೆ. ಕಳೆದ ವರ್ಷದ ಭಾರತದಲ್ಲಿ 400 ಕೋಟಿ ಲೀಟರ್ ಎಥೆನಾಲ್ ಉತ್ಪಾದನೆ ಆಗಿತ್ತು. ಹೀಗಿದ್ದರೂ ಕೊರತೆ ಎದುರಿಸುತ್ತಿದ್ದೇವೆ. ಹಾಗಾಗಿ ಅದರ ಉತ್ಪಾದನೆ ಹೆಚ್ಚಿಸಲು ಹಲವು ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಅವರು ವಿವರಿಸಿದರು.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ












Click it and Unblock the Notifications