GKVK ಕ್ಯಾಂಪಸ್ಸಿನಲ್ಲಿ ರಾಷ್ಟ್ರೀಯ ಕೃಷಿ ಯುವ ಉತ್ಸವ

ಐದು ದಿನಗಳ ಕಾಲ ನಡೆಯುವ ಈ ರಾಷ್ಟ್ರೀಯ ಅಂತರ ವಿವಿ ಯುವ ಉತ್ಸವ ಸಹಜವಾಗಿಯೇ ಕೃಷಿ ವಿಷಯವನ್ನು ಉತ್ಸವದ ಪ್ರಧಾನ ವಿಷಯವನ್ನಾಗಿ ಆಯ್ಕೆ ಮಾಡಿಕೊಂಡಿದೆ.
14ನೇ All India Inter-Agricultural Universities Youth Festival ಉತ್ಸವವನ್ನು ಬೆಂಗಳೂರು ಕೃಷಿ ವಿಜ್ಞಾನ ವಿದ್ಯಾಲಯವು ಭಾರತೀಯ ಕೃಷಿ ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಆಯೋಜಿಸಲಾಗಿದೆ. ಕೃಷಿ ವಿಶ್ವವಿದ್ಯಾಲಯಗಳ ಇತಿಹಾಸದಲ್ಲಿ ಇದು ಅತ್ಯಂತ ದೊಡ್ಡ ಉತ್ಸವವಾಗಲಿದೆ ಎಂದು UAS ವೈಸ್ ಚಾನ್ಸಲರ್ ಕೆ ನಾರಾಯಣ ಗೌಡ ಅವರು ತಿಳಿಸಿದ್ದಾರೆ.
ಈ ರಾಷ್ಟ್ರೀಯ ಕೃಷಿ ಯುವ ಉತ್ಸವದಲ್ಲಿ 18 ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. GKVK campus ನಲ್ಲಿ 5 ಸ್ಥಳಗಳಲ್ಲಿ ಉತ್ಸವವನ್ನು ಆಯೋಜಿಸಲಾಗಿದೆ. ಸುಮಾರು 2,000 ಯುವಕರು ಉತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಉತ್ಸವದ ಸಂಘಟನಾ ಕಾರ್ಯದರ್ಶಿ ಕೆಆರ್ ಶ್ರೀರಾಮುಲು ತಿಳಿಸಿದ್ದಾರೆ.
UAS GKVK campus ನಲ್ಲಿ ನಡೆಯುವ 5 ದಿನಗಳ ಈ ರಾಷ್ಟ್ರೀಯ ಉತ್ಸವದಲ್ಲಿ ಸಾರ್ವಜನಿಕರು ಸಹ ಪಾಲ್ಗೊಳ್ಳಬಹುದು. ಪ್ರತಿ ದಿನ ಬೆಳಗ್ಗೆ 9 ಗಂಟೆಯಿಂದ ಸಂಜೆ 10.30ರವರೆಗೂ ವಿವಿಧ ಉತ್ಸವಗಳು ನಡೆಯಲಿವೆ.
ಫೆಬ್ರವರಿ 13ರಂದು ಸ್ಥಳೀಯ ಶಾಸಕ (ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರ), ಕೃಷಿ ಸಚಿವ ಕೃಷ್ಣ ಬೈರೇಗೌಡ ಅವರು ಉದ್ಘಾಟಿಸಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ಅವರು ಭಾಗವಹಿಸಲಿದ್ದಾರೆ. ಫೆಬ್ರವರಿ 17ರಂದು ಮುಕ್ತಾಯ ಸಮಾರಂಭದಲ್ಲಿ ಕ್ರೀಡಾ ಮತ್ತು ಯುವಜನ ಸೇವಾ ಸಚಿವ ಕೆ ಅಭಯಚಂದ್ರ ಮತ್ತು ನಟ ಜಗ್ಗೇಶ್ ಪಾಲ್ಗೊಳ್ಳಲಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications