ಕೃಷಿ ಪದವೀಧರರು ಆತ್ಮನಿರ್ಭರ ಭಾರತ ನಿರ್ಮಾಣಕ್ಕೆ ಕೊಡುಗೆ ನೀಡಲಿ
ಧಾರವಾಡ, ಜೂನ್ 8: "ಕೃಷಿ ಪ್ರಧಾನವಾಗಿರುವ ಭಾರತವನ್ನು ಆತ್ಮನಿರ್ಭರ ದೇಶವಾಗಿ ನಿರ್ಮಿಸಲು ಕೃಷಿ ಪದವೀಧರರು ಮಹತ್ವದ ಕೊಡುಗೆಗಳನ್ನು ನೀಡಬೇಕು" ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.
ಧಾರವಾಡ ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಮಂಗಳವಾರ ನಡೆದ 35ನೇ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, "ಧಾರವಾಡ ಕೃಷಿ ವಿವಿಯು ರಾಷ್ಟ್ರ ಮಟ್ಟದಲ್ಲಿ ಪ್ರಸಿದ್ಧಿ ಪಡೆದಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಆಶಯದ ಆತ್ಮನಿರ್ಭರ ಭಾರತ ನಿರ್ಮಾಣಕ್ಕೆ ಕೃಷಿ ಪದವೀಧರರು ಹೆಚ್ಚು ಕೊಡುಗೆಗಳನ್ನು ನೀಡಬೇಕು. ದೇಶದ ಜನತೆ ಕೃಷಿಯನ್ನು ಅಧಿಕವಾಗಿ ಅವಲಂಬಿಸಿದ್ದಾರೆ. ಕೃಷಿ ಕ್ಷೇತ್ರ ಸಂಪೂರ್ಣ ಸ್ವಾವಲಂಬನೆಯಾದರೆ ದೇಶದ ಅಭಿವೃದ್ಧಿಯ ವೇಗ ತೀವ್ರವಾಗುತ್ತದೆ" ಎಂದು ಹೇಳಿದರು.
"ಪದವಿ ಪಡೆದವರು, ತಾವಿರುವ ಊರು, ಪ್ರದೇಶಗಳಲ್ಲಿ ಕೃಷಿ ಮೂಲಕ ಸ್ವಾವಲಂಬನೆ ಸಾಧಿಸಲು ಶ್ರಮಿಸಬೇಕು. ಪರಿಸರ ಸಂರಕ್ಷಣೆ, ಜಾಗತಿಕ ತಾಪಮಾನ ಹೆಚ್ಚಳ, ಜಲಮೂಲಗಳ ಸಂರಕ್ಷಣೆ ಕಾರ್ಯಗಳು ಮುಖ್ಯವಾಗಿವೆ. ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರೊಂದಿಗೆ ಇಸ್ರೇಲ್ ಪ್ರವಾಸ ಕೈಗೊಂಡಿದ್ದ ಸಂದರ್ಭದಲ್ಲಿ ಅಲ್ಲಿನ ಕೃಷಿ ತಂತ್ರಜ್ಞಾನ ವೀಕ್ಷಿಸುವ ಅವಕಾಶ ಸಿಕ್ಕಿತ್ತು. ಶೇ.9-10 ರಷ್ಟು ಮಳೆಯಾಗುವ ಆ ದೇಶದಲ್ಲಿ ಹನಿ ನೀರಿನ ಸದ್ಬಳಕೆಯಾಗುತ್ತಿದೆ. ಸಾವಯವ ಪದ್ಧತಿ ಮೂಲಕ ಭೂಮಿಯ ಫಲವತ್ತತೆ ಕಾಪಾಡಲು ಒತ್ತು ನೀಡಬೇಕು" ಎಂದರು.

ರಾಷ್ಟ್ರದ ಹಿತಕ್ಕಾಗಿ ಪರಿಹಾರ ಒದಗಿಸುವ ಬದ್ಧತೆ
ಐಸಿಎಆರ್ ರಾಷ್ಟ್ರೀಯ ಕೃಷಿ ಉನ್ನತ ಶಿಕ್ಷಣ ಯೋಜನೆಯ ನಿರ್ದೇಶಕ ಹಾಗೂ ಕೃಷಿ ಶಿಕ್ಷಣದ ಉಪಮಹಾನಿರ್ದೇಶಕ ಡಾ. ರಾಕೇಶಚಂದ್ರ ಅಗ್ರವಾಲ ಘಟಿಕೋತ್ಸವ ಭಾಷಣ ಮಾಡಿ, "ಪದವಿ ಪಡೆದ ವಿದ್ಯಾರ್ಥಿಗಳ ಮೇಲೆ ಕುಟುಂಬ, ಸಮಾಜ ಹಾಗೂ ರಾಷ್ಟ್ರದ ಜವಾಬ್ದಾರಿ ಇದೆ. ಕಳೆದ ಎರಡು ವರ್ಷಗಳ ಕೋವಿಡ್ ಸಾಂಕ್ರಾಮಿಕದ ಸಂಕಷ್ಟ ಕಾಲದಲ್ಲಿ ಕೃಷಿ ಉತ್ಪನ್ನಗಳು, ಹಾಲು, ತರಕಾರಿಗಳನ್ನು ಜನಸಾಮಾನ್ಯರಿಗೆ ಯಾವುದೇ ವ್ಯತ್ಯಯವಾಗದಂತೆ ಪೂರೈಸಿದ ಶ್ರೇಯಸ್ಸು ಕೃಷಿಕರಿಗೆ ಸಲ್ಲುತ್ತದೆ. ಜಲಮೂಲ, ಹವಾಮಾನ ಬದಲಾವಣೆ, ಜನಸಂಖ್ಯೆಯ ತೀವ್ರ ಹೆಚ್ಚಳ, ಸಾಂಕ್ರಾಮಿಕ ಖಾಯಿಲೆಗಳು ಸೇರಿದಂತೆ ಅನೇಕ ಸವಾಲುಗಳು ಇಂದು ನಮ್ಮೆದುರಿಗೆ ಇವೆ. ರಾಷ್ಟ್ರದ ಹಿತಕ್ಕಾಗಿ ಇವುಗಳಿಗೆ ಪರಿಹಾರ ಒದಗಿಸುವ ಬದ್ಧತೆ ಬೆಳೆಸಿಕೊಳ್ಳಬೇಕು" ಎಂದರು.

ಶಾಲ ಹಂತದಲ್ಲೇ ಕೃಷಿ ಶಿಕ್ಷಣ
"ಸಿರಿಧಾನ್ಯಗಳು, ಸುಸ್ಥಿರ ಕೃಷಿ ಇಂದಿನ ಅಗತ್ಯಗಳಾಗಿವೆ. ಜಾಗತಿಕ ಹಸಿವು ಸೂಚ್ಯಂಕದ 17 ಸುಸ್ಥಿರ ಗುರಿಗಳನ್ನು ತಲುಪಲು ಕೃಷಿ ವಿದ್ಯಾರ್ಥಿಗಳ ಮೇಲೆ ಹೆಚ್ಚು ಹೊಣೆಗಾರಿಕೆಯಿದೆ. ಬಡತನ, ಹಸಿವು ನೀಗಿಸಿ, ಉತ್ತಮ ಜೀವನ ನಿರ್ಮಿಸಿಕೊಳ್ಳಲು ಕೃಷಿ ವಿದ್ಯಾರ್ಥಿಗಳು ಪ್ರಮುಖ ಆಧಾರ ಸ್ತಂಭವಾಗಿದ್ದಾರೆ. ಶಿಕ್ಷಣವೆಂದರೆ ಸರ್ವಾಂಗೀಣ, ಸರ್ವತೋಮುಖ ವಿಕಾಸ. ಶಿಕ್ಷಕರು, ಕುಟುಂಬ, ಸಮಾಜ ಹೀಗೆ ಎಲ್ಲರಿಂದ ಕಲಿತು, ತಿಳಿದುಕೊಳ್ಳುವುದು ನಿರಂತರವಾಗಿರುತ್ತದೆ. ಕಲಿಕೆಗೆ ಕೊನೆಯೆಂಬುದು ಇಲ್ಲ. ಹೆಚ್ಚು ಹೆಚ್ಚು ಸಂವಾದಕ್ಕೆ ನಾವು ಒಳಪಡಬೇಕು. ಬರುವ ಜೂನ್ 14 ರಂದು ನವದೆಹಲಿಯಲ್ಲಿ ಸಿಬಿಎಸ್ಇ, ಎನ್ಸಿಇಆರ್ಟಿ ಮೊದಲಾದ ಅಕಾಡೆಮಿಕ್ ಸದಸ್ಯರೊಂದಿಗೆ ಸಭೆ ನಡೆಸಿ ಕೃಷಿ ಶಿಕ್ಷಣವನ್ನು ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಅನುಸಾರ ಶಾಲಾ ಹಂತದಿಂದಲೇ ಅಳವಡಿಸಿಕೊಳ್ಳಲು ಕ್ರಮವಹಿಸಲಾಗುತ್ತಿದೆ" ಎಂದು ಡಾ. ರಾಕೇಶಚಂದ್ರ ಅಗ್ರವಾಲ ಹೇಳಿದರು.

ಪದವಿಗಳ ಪ್ರದಾನ
ಕೃಷಿ ಕ್ಷೇತ್ರಕ್ಕೆ ಮಹತ್ವದ ಕೊಡುಗೆಗಳನ್ನು ನೀಡಿರುವ ಜಗದೀಶ ಹರಿ ಕುಲಕರ್ಣಿ, ಯೋಗೇಂದ್ರ ಕೌಶಿಕ್ ರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಇನ್ನೋರ್ವ ಗೌರವ ಡಾಕ್ಟರೇಟ್ ಪುರಸ್ಕೃತರಾದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮಿಗಳು ಘಟಿಕೋತ್ಸದಲ್ಲಿ ಭಾಗವಹಿಸಿರಲಿಲ್ಲ. 35 ನೇ ಘಟಿಕೋತ್ಸವದಲ್ಲಿ 42 ಪಿಎಚ್ಡಿ, 253 ಸ್ನಾತಕೋತ್ತರ, 595 ಸ್ನಾತಕ ಪದವಿಗಳನ್ನೊಳಗೊಂಡು ಒಟ್ಟು 890 ಅಭ್ಯರ್ಥಿಗಳಿಗೆ ಪದವಿಗಳನ್ನು ಪ್ರದಾನ ಮಾಡಲಾಯಿತು. 48 ಚಿನ್ನದ ಪದಕಗಳು ಹಾಗೂ 11 ನಗದು ಬಹುಮಾನಗಳನ್ನು ಅತಿಹೆಚ್ಚು ಅಂಕ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರದಾನ ಮಾಡಿ ಗೌರವಿಸಲಾಯಿತು.

ಬೀಜ ಬಿತ್ತನೆ ಅಭಿಯಾನ
ಧಾರವಾಡ ಪ್ರಾದೇಶಿಕ ಅರಣ್ಯ ವಿಭಾಗ ಮತ್ತು ಕರ್ನಾಟಕ ವಿಶ್ವವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ "ಬೀಜ ಬಿತ್ತೋಣ; ಅರಣ್ಯ ಬೆಳಸೋಣ" ಎಂಬ ಧೈಯದೊಂದಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಬೀಜ ಬಿತ್ತನೆ ಅಭಿಯಾನ 2022 ಕ್ಕೆ ಮಂಗಳವಾರ ಸಂಜೆ ಚಾಲನೆ ನೀಡಿದರು. ಬೀಜ ಬಿತ್ತನೆ ಕಾರ್ಯಕ್ರಮವನ್ನು ಹಸಿರು ಕರ್ನಾಟಕ ಯೋಜನೆಯ ಭಾಗವಾಗಿ ಕರ್ನಾಟಕ ರಾಜ್ಯದಾದ್ಯಂತ ಈಗಾಗಲೇ ಬಿತ್ತೋತ್ಸವ ಕಾರ್ಯಕ್ರಮವನ್ನು ಜೂನ್ 5 ರಿಂದ ಪ್ರಾರಂಭಿಸಲಾಗಿದೆ. ಜೂನ್ 5 ರಿಂದ 12 ರ ವರೆಗೆ ಬಿತ್ತೋತ್ಸವದ ಅಂಗವಾಗಿ ಕರ್ನಾಟಕ ರಾಜ್ಯದಲ್ಲಿನ 50 ಅರಣ್ಯ ವಿಭಾಗಗಳಲ್ಲಿ ಮತ್ತು 228 ವಲಯಗಳಲ್ಲಿ ಬೀಜಗಳನ್ನು ಬಿತ್ತಲು ಯೋಜನೆ ರೂಪಿಸಲಾಗಿದೆ.
Recommended Video
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications