ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೃಷಿ ಪದವೀಧರರು ಆತ್ಮನಿರ್ಭರ ಭಾರತ ನಿರ್ಮಾಣಕ್ಕೆ ಕೊಡುಗೆ ನೀಡಲಿ

|
Google Oneindia Kannada News

ಧಾರವಾಡ, ಜೂನ್ 8: "ಕೃಷಿ ಪ್ರಧಾನವಾಗಿರುವ ಭಾರತವನ್ನು ಆತ್ಮನಿರ್ಭರ ದೇಶವಾಗಿ ನಿರ್ಮಿಸಲು ಕೃಷಿ ಪದವೀಧರರು ಮಹತ್ವದ ಕೊಡುಗೆಗಳನ್ನು ನೀಡಬೇಕು" ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.

ಧಾರವಾಡ ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಮಂಗಳವಾರ ನಡೆದ 35ನೇ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, "ಧಾರವಾಡ ಕೃಷಿ ವಿವಿಯು ರಾಷ್ಟ್ರ ಮಟ್ಟದಲ್ಲಿ ಪ್ರಸಿದ್ಧಿ ಪಡೆದಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಆಶಯದ ಆತ್ಮನಿರ್ಭರ ಭಾರತ ನಿರ್ಮಾಣಕ್ಕೆ ಕೃಷಿ ಪದವೀಧರರು ಹೆಚ್ಚು ಕೊಡುಗೆಗಳನ್ನು ನೀಡಬೇಕು. ದೇಶದ ಜನತೆ ಕೃಷಿಯನ್ನು ಅಧಿಕವಾಗಿ ಅವಲಂಬಿಸಿದ್ದಾರೆ. ಕೃಷಿ ಕ್ಷೇತ್ರ ಸಂಪೂರ್ಣ ಸ್ವಾವಲಂಬನೆಯಾದರೆ ದೇಶದ ಅಭಿವೃದ್ಧಿಯ ವೇಗ ತೀವ್ರವಾಗುತ್ತದೆ" ಎಂದು ಹೇಳಿದರು.

ಧಾರವಾಡ; 9 ಚಿನ್ನದ ಪದಕ ಪಡೆದ ಪಂಚಾಯಿತಿ ಡಿ ದರ್ಜೆ ಉದ್ಯೋಗಿ ಪುತ್ರಿ ಧಾರವಾಡ; 9 ಚಿನ್ನದ ಪದಕ ಪಡೆದ ಪಂಚಾಯಿತಿ ಡಿ ದರ್ಜೆ ಉದ್ಯೋಗಿ ಪುತ್ರಿ

"ಪದವಿ ಪಡೆದವರು, ತಾವಿರುವ ಊರು, ಪ್ರದೇಶಗಳಲ್ಲಿ ಕೃಷಿ ಮೂಲಕ ಸ್ವಾವಲಂಬನೆ ಸಾಧಿಸಲು ಶ್ರಮಿಸಬೇಕು. ಪರಿಸರ ಸಂರಕ್ಷಣೆ, ಜಾಗತಿಕ ತಾಪಮಾನ ಹೆಚ್ಚಳ, ಜಲಮೂಲಗಳ ಸಂರಕ್ಷಣೆ ಕಾರ್ಯಗಳು ಮುಖ್ಯವಾಗಿವೆ. ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರೊಂದಿಗೆ ಇಸ್ರೇಲ್ ಪ್ರವಾಸ ಕೈಗೊಂಡಿದ್ದ ಸಂದರ್ಭದಲ್ಲಿ ಅಲ್ಲಿನ ಕೃಷಿ ತಂತ್ರಜ್ಞಾನ ವೀಕ್ಷಿಸುವ ಅವಕಾಶ ಸಿಕ್ಕಿತ್ತು. ಶೇ.9-10 ರಷ್ಟು ಮಳೆಯಾಗುವ ಆ ದೇಶದಲ್ಲಿ ಹನಿ ನೀರಿನ ಸದ್ಬಳಕೆಯಾಗುತ್ತಿದೆ. ಸಾವಯವ ಪದ್ಧತಿ ಮೂಲಕ ಭೂಮಿಯ ಫಲವತ್ತತೆ ಕಾಪಾಡಲು ಒತ್ತು ನೀಡಬೇಕು" ಎಂದರು.

ರೈತನ ಮಗಳಾಗಿದ್ದರೂ ಭರ್ಜರಿ ಚಿನ್ನದ ಬೇಟೆಯಾಡಿದ ಚಿನ್ನದ ಹುಡುಗಿ ರೈತನ ಮಗಳಾಗಿದ್ದರೂ ಭರ್ಜರಿ ಚಿನ್ನದ ಬೇಟೆಯಾಡಿದ ಚಿನ್ನದ ಹುಡುಗಿ

ರಾಷ್ಟ್ರದ ಹಿತಕ್ಕಾಗಿ ಪರಿಹಾರ ಒದಗಿಸುವ ಬದ್ಧತೆ

ರಾಷ್ಟ್ರದ ಹಿತಕ್ಕಾಗಿ ಪರಿಹಾರ ಒದಗಿಸುವ ಬದ್ಧತೆ

ಐಸಿಎಆರ್ ರಾಷ್ಟ್ರೀಯ ಕೃಷಿ ಉನ್ನತ ಶಿಕ್ಷಣ ಯೋಜನೆಯ ನಿರ್ದೇಶಕ ಹಾಗೂ ಕೃಷಿ ಶಿಕ್ಷಣದ ಉಪಮಹಾನಿರ್ದೇಶಕ ಡಾ. ರಾಕೇಶಚಂದ್ರ ಅಗ್ರವಾಲ ಘಟಿಕೋತ್ಸವ ಭಾಷಣ ಮಾಡಿ, "ಪದವಿ ಪಡೆದ ವಿದ್ಯಾರ್ಥಿಗಳ ಮೇಲೆ ಕುಟುಂಬ, ಸಮಾಜ ಹಾಗೂ ರಾಷ್ಟ್ರದ ಜವಾಬ್ದಾರಿ ಇದೆ. ಕಳೆದ ಎರಡು ವರ್ಷಗಳ ಕೋವಿಡ್ ಸಾಂಕ್ರಾಮಿಕದ ಸಂಕಷ್ಟ ಕಾಲದಲ್ಲಿ ಕೃಷಿ ಉತ್ಪನ್ನಗಳು, ಹಾಲು, ತರಕಾರಿಗಳನ್ನು ಜನಸಾಮಾನ್ಯರಿಗೆ ಯಾವುದೇ ವ್ಯತ್ಯಯವಾಗದಂತೆ ಪೂರೈಸಿದ ಶ್ರೇಯಸ್ಸು ಕೃಷಿಕರಿಗೆ ಸಲ್ಲುತ್ತದೆ. ಜಲಮೂಲ, ಹವಾಮಾನ ಬದಲಾವಣೆ, ಜನಸಂಖ್ಯೆಯ ತೀವ್ರ ಹೆಚ್ಚಳ, ಸಾಂಕ್ರಾಮಿಕ ಖಾಯಿಲೆಗಳು ಸೇರಿದಂತೆ ಅನೇಕ ಸವಾಲುಗಳು ಇಂದು ನಮ್ಮೆದುರಿಗೆ ಇವೆ. ರಾಷ್ಟ್ರದ ಹಿತಕ್ಕಾಗಿ ಇವುಗಳಿಗೆ ಪರಿಹಾರ ಒದಗಿಸುವ ಬದ್ಧತೆ ಬೆಳೆಸಿಕೊಳ್ಳಬೇಕು" ಎಂದರು.

ಶಾಲ ಹಂತದಲ್ಲೇ ಕೃಷಿ ಶಿಕ್ಷಣ

ಶಾಲ ಹಂತದಲ್ಲೇ ಕೃಷಿ ಶಿಕ್ಷಣ

"ಸಿರಿಧಾನ್ಯಗಳು, ಸುಸ್ಥಿರ ಕೃಷಿ ಇಂದಿನ ಅಗತ್ಯಗಳಾಗಿವೆ. ಜಾಗತಿಕ ಹಸಿವು ಸೂಚ್ಯಂಕದ 17 ಸುಸ್ಥಿರ ಗುರಿಗಳನ್ನು ತಲುಪಲು ಕೃಷಿ ವಿದ್ಯಾರ್ಥಿಗಳ ಮೇಲೆ ಹೆಚ್ಚು ಹೊಣೆಗಾರಿಕೆಯಿದೆ. ಬಡತನ, ಹಸಿವು ನೀಗಿಸಿ, ಉತ್ತಮ ಜೀವನ ನಿರ್ಮಿಸಿಕೊಳ್ಳಲು ಕೃಷಿ ವಿದ್ಯಾರ್ಥಿಗಳು ಪ್ರಮುಖ ಆಧಾರ ಸ್ತಂಭವಾಗಿದ್ದಾರೆ. ಶಿಕ್ಷಣವೆಂದರೆ ಸರ್ವಾಂಗೀಣ, ಸರ್ವತೋಮುಖ ವಿಕಾಸ. ಶಿಕ್ಷಕರು, ಕುಟುಂಬ, ಸಮಾಜ ಹೀಗೆ ಎಲ್ಲರಿಂದ ಕಲಿತು, ತಿಳಿದುಕೊಳ್ಳುವುದು ನಿರಂತರವಾಗಿರುತ್ತದೆ. ಕಲಿಕೆಗೆ ಕೊನೆಯೆಂಬುದು ಇಲ್ಲ. ಹೆಚ್ಚು ಹೆಚ್ಚು ಸಂವಾದಕ್ಕೆ ನಾವು ಒಳಪಡಬೇಕು. ಬರುವ ಜೂನ್ 14 ರಂದು ನವದೆಹಲಿಯಲ್ಲಿ ಸಿಬಿಎಸ್‍ಇ, ಎನ್‍ಸಿಇಆರ್‌ಟಿ ಮೊದಲಾದ ಅಕಾಡೆಮಿಕ್ ಸದಸ್ಯರೊಂದಿಗೆ ಸಭೆ ನಡೆಸಿ ಕೃಷಿ ಶಿಕ್ಷಣವನ್ನು ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಅನುಸಾರ ಶಾಲಾ ಹಂತದಿಂದಲೇ ಅಳವಡಿಸಿಕೊಳ್ಳಲು ಕ್ರಮವಹಿಸಲಾಗುತ್ತಿದೆ" ಎಂದು ಡಾ. ರಾಕೇಶಚಂದ್ರ ಅಗ್ರವಾಲ ಹೇಳಿದರು.

ಪದವಿಗಳ ಪ್ರದಾನ

ಪದವಿಗಳ ಪ್ರದಾನ

ಕೃಷಿ ಕ್ಷೇತ್ರಕ್ಕೆ ಮಹತ್ವದ ಕೊಡುಗೆಗಳನ್ನು ನೀಡಿರುವ ಜಗದೀಶ ಹರಿ ಕುಲಕರ್ಣಿ, ಯೋಗೇಂದ್ರ ಕೌಶಿಕ್ ರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಇನ್ನೋರ್ವ ಗೌರವ ಡಾಕ್ಟರೇಟ್ ಪುರಸ್ಕೃತರಾದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮಿಗಳು ಘಟಿಕೋತ್ಸದಲ್ಲಿ ಭಾಗವಹಿಸಿರಲಿಲ್ಲ. 35 ನೇ ಘಟಿಕೋತ್ಸವದಲ್ಲಿ 42 ಪಿಎಚ್‍ಡಿ, 253 ಸ್ನಾತಕೋತ್ತರ, 595 ಸ್ನಾತಕ ಪದವಿಗಳನ್ನೊಳಗೊಂಡು ಒಟ್ಟು 890 ಅಭ್ಯರ್ಥಿಗಳಿಗೆ ಪದವಿಗಳನ್ನು ಪ್ರದಾನ ಮಾಡಲಾಯಿತು. 48 ಚಿನ್ನದ ಪದಕಗಳು ಹಾಗೂ 11 ನಗದು ಬಹುಮಾನಗಳನ್ನು ಅತಿಹೆಚ್ಚು ಅಂಕ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರದಾನ ಮಾಡಿ ಗೌರವಿಸಲಾಯಿತು.

ಬೀಜ ಬಿತ್ತನೆ ಅಭಿಯಾನ

ಬೀಜ ಬಿತ್ತನೆ ಅಭಿಯಾನ

ಧಾರವಾಡ ಪ್ರಾದೇಶಿಕ ಅರಣ್ಯ ವಿಭಾಗ ಮತ್ತು ಕರ್ನಾಟಕ ವಿಶ್ವವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ "ಬೀಜ ಬಿತ್ತೋಣ; ಅರಣ್ಯ ಬೆಳಸೋಣ" ಎಂಬ ಧೈಯದೊಂದಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಬೀಜ ಬಿತ್ತನೆ ಅಭಿಯಾನ 2022 ಕ್ಕೆ ಮಂಗಳವಾರ ಸಂಜೆ ಚಾಲನೆ ನೀಡಿದರು. ಬೀಜ ಬಿತ್ತನೆ ಕಾರ್ಯಕ್ರಮವನ್ನು ಹಸಿರು ಕರ್ನಾಟಕ ಯೋಜನೆಯ ಭಾಗವಾಗಿ ಕರ್ನಾಟಕ ರಾಜ್ಯದಾದ್ಯಂತ ಈಗಾಗಲೇ ಬಿತ್ತೋತ್ಸವ ಕಾರ್ಯಕ್ರಮವನ್ನು ಜೂನ್ 5 ರಿಂದ ಪ್ರಾರಂಭಿಸಲಾಗಿದೆ. ಜೂನ್ 5 ರಿಂದ 12 ರ ವರೆಗೆ ಬಿತ್ತೋತ್ಸವದ ಅಂಗವಾಗಿ ಕರ್ನಾಟಕ ರಾಜ್ಯದಲ್ಲಿನ 50 ಅರಣ್ಯ ವಿಭಾಗಗಳಲ್ಲಿ ಮತ್ತು 228 ವಲಯಗಳಲ್ಲಿ ಬೀಜಗಳನ್ನು ಬಿತ್ತಲು ಯೋಜನೆ ರೂಪಿಸಲಾಗಿದೆ.

Recommended Video

ಆಶೀಶ್ ನೆಹ್ರಾ ಜೊತೆ ಪತ್ನಿ ಸಮೇತ ಚಹಲ್ ಪಾರ್ಟಿಗೆ ಹೋಗಿ ಮಾಡಿದ ಎಡವಟ್ಟು ಫುಲ್ ವೈರಲ್ | OneIndia Kannada

English summary
Karnataka Governor Thawar Chand Gehlot speech at Dharwad agriculture university convocation. He said, all degree holders should contribute to build to country as a tmanirbhar Bharat.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X