Agriculture Department Tips: ಬಿತ್ತನೆಯಾದ ಬೆಳೆಗಳ ಸಂರಕ್ಷಣೆ ಮಾಡೋದು ಹೇಗೆ..?: ಕೃಷಿ ಇಲಾಖೆಯ ಸಲಹೆಗಳು ಇಲ್ಲಿವೆ
ಧಾರವಾಡ, ಜೂನ್. 14: ರಾಜ್ಯದಲ್ಲಿ ಮುಂಗಾರು ಜೋರಾಗಿದೆ. ಸಿಲಿಕಾನ್ ಸಿಟಿಯಲ್ಲಿ ಮಳೆ ಎಡಬಿಡದೆ ಸುರಿಯುತ್ತಿದೆ. ಇದರ ಜೊತೆಗೆ ಕೃಷಿ ಕೆಲಸಗಳು ಆರಂಭವಾಗಿದ್ದು ಹಲವು ದ್ವಿದಳ ಧಾನ್ಯಗಳನ್ನು ರೈತರು ಭೂಮಿಗೆ ಬಿತ್ತಿದ್ದಾರೆ. ಆದರೆ, ಹೆಚ್ಚಿನ ಮಳೆಗೆ ಅವುಗಳಿಗೆ ರೋಗ ತಗುಲುವ ಸಾಧ್ಯತೆಯಿದೆ.
ರಾಜ್ಯಾದ್ಯಂತ ಜೂನ್ ತಿಂಗಳ ಮೊದಲ ಪಾಕ್ಷಿಕದಲ್ಲಿ ಮಳೆಯಾಗುತ್ತಿದ್ದು, ಮುಂಚಿತವಾಗಿ ಬಿತ್ತಿದ ಹೆಸರು, ಉದ್ದು, ಸೋಯಾ, ಅವರೆ, ಶೇಂಗಾ ಮುಂತಾದ ಬೆಳೆಗಳಿಗೆ ಅನುಕೂಲವಾಗಿದೆಯಾದರೂ, ಭೂಮಿಯ ತೇವಾಂಶ ಹೆಚ್ಚಿಗೆ ಆಗಿರುವ ಕಾರಣ ಈಗಾಗಲೇ ಹುಟ್ಟಿರುವ ಸೋಯಾಅವರೆ, ಹೆಸರು ಹಾಗೂ ಉದ್ದಿನ ಬೆಳೆಗಳು ಹಳದಿ ವರ್ಣಕ್ಕೆ ತಿರುಗುವ ಸಾಧ್ಯತೆ ಇರುವುದರಿಂದ ರೈತರು ಮುನ್ನೆಚ್ಚರಿಕೆ ವಹಿಸಬೇಕು.

ಹಳದಿ ನಂಜಾಣು ರೋಗ
ಹಳದಿ ನಂಜಾಣು ರೋಗ ಕಂಡುಬಂದಲ್ಲಿ ರೈತರು ಈ ಕ್ರಮಗಳನ್ನು ಪಾಲಿಸಬೇಕು. ಹೊಲದಲ್ಲಿ, ಒಡ್ಡುಗಳಲ್ಲಿ ನಿಂತಿರುವ ಹೆಚ್ಚುವರಿ ನೀರನ್ನು ಹರಿ ಮಾಡುವುದರ ಮೂಲಕ ನೀರನ್ನು ಹೊರಹಾಕಬೇಕು. ಹೆಸರು, ಉದ್ದು, ಅಲಸಂದಿ, ಸೋಯಾಅವರೆ, ಶೇಂಗಾ ಇತ್ಯಾದಿ ಬೆಳೆಗಳು ಹಳದಿ ವರ್ಣಕ್ಕೆ ತಿರುಗುತ್ತಿದ್ದಲ್ಲಿ, ಎಲೆಗಳ ಮೂಲಕ ನೀರಿನಲ್ಲಿ ಕರಗುವ ರಸಗೊಬ್ಬರಗಳನ್ನು ಬಳಸಬೇಕು.
ನೀರಿನಲ್ಲಿ ಕರಗುವ ರಸಗೊಬ್ಬರಗಳೆಂದರೆ 12:61:00, 0:0:50, 13:00:45, 00:52:34, 19:19:19, ಇವುಗಳಲ್ಲಿ ಯಾವುದಾದರೂ ಒಂದನ್ನು ಪ್ರತಿ ಲೀಟರ್ ನೀರಿಗೆ 5 ರಿಂದ 10 ಗ್ರಾಂ. ಬೆರೆಸಿ ಬೆಳೆಗಳ ಮೇಲೆ ಸಿಂಪಡಿಸಬೇಕು. ಆಗ ಹಳದಿ ವರ್ಣಕ್ಕೆ ತಿರುಗುವ ಎಲೆಗಳಲ್ಲಿ ರೀಗ ಕಡಿಮೆಯಾಗಲಿದೆ.

ಹಳದಿ ನಂಜಾಣು ರೋಗ ಕಂಡುಬಂದಲ್ಲಿ ಅಂತಹ ಬಾಧಿತ ಸಸಿಗಳನ್ನು ಕಿತ್ತು ಒಂದು ಚೀಲದಲ್ಲಿ ತುಂಬಿ ಹೊಲದಿಂದ ಹೊರಗೆ ಹೋಗಿ ಸುಟ್ಟು ಹಾಕಬೇಕು. ಇಲ್ಲದಿದ್ದರೇ ಸಸಿಗಳನ್ನು ಕಿತ್ತು ಮಣ್ಣಿನಲ್ಲಿ ಗುಂಡಿ ತೋಡಿ ಹೂಳಬೇಕು. ನೀರು ನಿಂತು ಬೆಳೆ ಹಾನಿಯಾಗುತ್ತಿದ್ದರೆ ಯೂರಿಯಾ ಗೊಬ್ಬರ ಬಳಕೆ ಮಾಡಬಾರದು.
ಈ ಸಮಯದಲ್ಲಿ ಯೂರಿಯಾ ಗೊಬ್ಬರ ಬಳಕೆ ಮಾಡುವುದರಿಂದ ಸಮಸ್ಯೆ ಹೆಚ್ಚಾಗಲಿದೆ. ಇದರಿಂದ ರೋಗಗಳ ಬಾಧೆ ಹೆಚ್ಚಾಗುವುದು. ಹದ ಬಂದ ಕೂಡಲೆ ಅಂತರ್ ಬೇಸಾಯ ಕೈಗೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಸಂಪರ್ಕಿಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications