Agriculture Department Tips: ಬಿತ್ತನೆಯಾದ ಬೆಳೆಗಳ ಸಂರಕ್ಷಣೆ ಮಾಡೋದು ಹೇಗೆ..?: ಕೃಷಿ ಇಲಾಖೆಯ ಸಲಹೆಗಳು ಇಲ್ಲಿವೆ
ಧಾರವಾಡ, ಜೂನ್. 14: ರಾಜ್ಯದಲ್ಲಿ ಮುಂಗಾರು ಜೋರಾಗಿದೆ. ಸಿಲಿಕಾನ್ ಸಿಟಿಯಲ್ಲಿ ಮಳೆ ಎಡಬಿಡದೆ ಸುರಿಯುತ್ತಿದೆ. ಇದರ ಜೊತೆಗೆ ಕೃಷಿ ಕೆಲಸಗಳು ಆರಂಭವಾಗಿದ್ದು ಹಲವು ದ್ವಿದಳ ಧಾನ್ಯಗಳನ್ನು ರೈತರು ಭೂಮಿಗೆ ಬಿತ್ತಿದ್ದಾರೆ. ಆದರೆ, ಹೆಚ್ಚಿನ ಮಳೆಗೆ ಅವುಗಳಿಗೆ ರೋಗ ತಗುಲುವ ಸಾಧ್ಯತೆಯಿದೆ.
ರಾಜ್ಯಾದ್ಯಂತ ಜೂನ್ ತಿಂಗಳ ಮೊದಲ ಪಾಕ್ಷಿಕದಲ್ಲಿ ಮಳೆಯಾಗುತ್ತಿದ್ದು, ಮುಂಚಿತವಾಗಿ ಬಿತ್ತಿದ ಹೆಸರು, ಉದ್ದು, ಸೋಯಾ, ಅವರೆ, ಶೇಂಗಾ ಮುಂತಾದ ಬೆಳೆಗಳಿಗೆ ಅನುಕೂಲವಾಗಿದೆಯಾದರೂ, ಭೂಮಿಯ ತೇವಾಂಶ ಹೆಚ್ಚಿಗೆ ಆಗಿರುವ ಕಾರಣ ಈಗಾಗಲೇ ಹುಟ್ಟಿರುವ ಸೋಯಾಅವರೆ, ಹೆಸರು ಹಾಗೂ ಉದ್ದಿನ ಬೆಳೆಗಳು ಹಳದಿ ವರ್ಣಕ್ಕೆ ತಿರುಗುವ ಸಾಧ್ಯತೆ ಇರುವುದರಿಂದ ರೈತರು ಮುನ್ನೆಚ್ಚರಿಕೆ ವಹಿಸಬೇಕು.

ಹಳದಿ ನಂಜಾಣು ರೋಗ
ಹಳದಿ ನಂಜಾಣು ರೋಗ ಕಂಡುಬಂದಲ್ಲಿ ರೈತರು ಈ ಕ್ರಮಗಳನ್ನು ಪಾಲಿಸಬೇಕು. ಹೊಲದಲ್ಲಿ, ಒಡ್ಡುಗಳಲ್ಲಿ ನಿಂತಿರುವ ಹೆಚ್ಚುವರಿ ನೀರನ್ನು ಹರಿ ಮಾಡುವುದರ ಮೂಲಕ ನೀರನ್ನು ಹೊರಹಾಕಬೇಕು. ಹೆಸರು, ಉದ್ದು, ಅಲಸಂದಿ, ಸೋಯಾಅವರೆ, ಶೇಂಗಾ ಇತ್ಯಾದಿ ಬೆಳೆಗಳು ಹಳದಿ ವರ್ಣಕ್ಕೆ ತಿರುಗುತ್ತಿದ್ದಲ್ಲಿ, ಎಲೆಗಳ ಮೂಲಕ ನೀರಿನಲ್ಲಿ ಕರಗುವ ರಸಗೊಬ್ಬರಗಳನ್ನು ಬಳಸಬೇಕು.
ನೀರಿನಲ್ಲಿ ಕರಗುವ ರಸಗೊಬ್ಬರಗಳೆಂದರೆ 12:61:00, 0:0:50, 13:00:45, 00:52:34, 19:19:19, ಇವುಗಳಲ್ಲಿ ಯಾವುದಾದರೂ ಒಂದನ್ನು ಪ್ರತಿ ಲೀಟರ್ ನೀರಿಗೆ 5 ರಿಂದ 10 ಗ್ರಾಂ. ಬೆರೆಸಿ ಬೆಳೆಗಳ ಮೇಲೆ ಸಿಂಪಡಿಸಬೇಕು. ಆಗ ಹಳದಿ ವರ್ಣಕ್ಕೆ ತಿರುಗುವ ಎಲೆಗಳಲ್ಲಿ ರೀಗ ಕಡಿಮೆಯಾಗಲಿದೆ.

ಹಳದಿ ನಂಜಾಣು ರೋಗ ಕಂಡುಬಂದಲ್ಲಿ ಅಂತಹ ಬಾಧಿತ ಸಸಿಗಳನ್ನು ಕಿತ್ತು ಒಂದು ಚೀಲದಲ್ಲಿ ತುಂಬಿ ಹೊಲದಿಂದ ಹೊರಗೆ ಹೋಗಿ ಸುಟ್ಟು ಹಾಕಬೇಕು. ಇಲ್ಲದಿದ್ದರೇ ಸಸಿಗಳನ್ನು ಕಿತ್ತು ಮಣ್ಣಿನಲ್ಲಿ ಗುಂಡಿ ತೋಡಿ ಹೂಳಬೇಕು. ನೀರು ನಿಂತು ಬೆಳೆ ಹಾನಿಯಾಗುತ್ತಿದ್ದರೆ ಯೂರಿಯಾ ಗೊಬ್ಬರ ಬಳಕೆ ಮಾಡಬಾರದು.
ಈ ಸಮಯದಲ್ಲಿ ಯೂರಿಯಾ ಗೊಬ್ಬರ ಬಳಕೆ ಮಾಡುವುದರಿಂದ ಸಮಸ್ಯೆ ಹೆಚ್ಚಾಗಲಿದೆ. ಇದರಿಂದ ರೋಗಗಳ ಬಾಧೆ ಹೆಚ್ಚಾಗುವುದು. ಹದ ಬಂದ ಕೂಡಲೆ ಅಂತರ್ ಬೇಸಾಯ ಕೈಗೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಸಂಪರ್ಕಿಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ












Click it and Unblock the Notifications