ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹವಾಮಾನ ಬದಲಾವಣೆ; ತೊಗರಿ ಬೆಳೆದ ರೈತರಿಗೆ ಸಲಹೆಗಳು

|
Google Oneindia Kannada News

ಕಲಬುರಗಿ, ಅಕ್ಟೋಬರ್ 29 : ಕಲಬುರಗಿ ಜಿಲ್ಲೆಯಲ್ಲಿ ಮಳೆ, ಪ್ರವಾಹದಿಂದಾಗಿ ತೊಗರಿ ಬೆಳೆದ ರೈತರು ಆತಂಕಕ್ಕೆ ಸಿಲುಕಿದ್ದಾರೆ. ತೊಗರಿ ಹೊಲಗಳಲ್ಲಿ ನೀರು ನಿಂತಿತ್ತು. ಹವಮಾನ ಬದಲಾದ ಕಾರಣ ಕೃಷಿ ಇಲಾಖೆ ರೈತರಿಗೆ ಹಲವು ಸಲಹೆಗಳನ್ನು ನೀಡಿದೆ.

ತೊಗರಿ ಬೆಳೆದ ರೈತರು ಮುಂಜಾವಿನ ಮಂಜಿನಿಂದಾಗಿ ತೊಗರಿ ಹೂವು, ಮೊಗ್ಗು ಕಪ್ಪಾಗಿ ಸುಡದಂತೆ ಹಾಗೂ ಉದರದಂತೆ ಜಾಗೃತೆ ವಹಿಸಬೇಕು ಎಂದು ಕಲಬುರಗಿ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅತಿವೃಷ್ಟಿಯಿಂದ ಸಂತ್ರಸ್ತ ಉತ್ತರ ಕರ್ನಾಟಕ ರೈತರಿಗೆ ನ್ಯಾಯ ಸಿಗಲಿ ಅತಿವೃಷ್ಟಿಯಿಂದ ಸಂತ್ರಸ್ತ ಉತ್ತರ ಕರ್ನಾಟಕ ರೈತರಿಗೆ ನ್ಯಾಯ ಸಿಗಲಿ

ತೊಗರಿ ಬೆಳೆಯು ಮೊಗ್ಗು ಹಾಗೂ ಹೂವಾಡುವ ಹಂತದಲ್ಲಿದ್ದು, ಮುಂಜಾನೆಯ ಮಂಜಿನ ವಾತಾವರಣದಿಂದ ಎಲೆ ದೇಟು ಹಾಗೂ ಹೂವಿನ ಮೇಲೆ ಸಣ್ಣ ದುಂಡಾಕಾರದ ಕಂದು ಬಣ್ಣದ ಚುಕ್ಕೆಗಳು ಕಾಣಿಸಿಕೊಳ್ಳುವ ಸಾಧ್ಯತೆಗಳಿವೆ.

ಹವಾಮಾನ ಬದಲಾವಣೆ; ಭತ್ತ ಬೆಳೆಯುವ ರೈತರಿಗೆ ಸಲಹೆ ಹವಾಮಾನ ಬದಲಾವಣೆ; ಭತ್ತ ಬೆಳೆಯುವ ರೈತರಿಗೆ ಸಲಹೆ

Agriculture Department Tips For Toor Dal Farmers

ಮೊಗ್ಗು ಮತ್ತು ಹೂವು ಉದುರುವಿಕೆ ಅಲ್ಲಲ್ಲಿ ಸ್ಥಳೀಯವಾಗಿ ಕಂಡು ಬರುತ್ತಿದೆ. ವಾತಾವರಣದ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಿಸ್‍ಗಿಂತ ಕಡಿಮೆ ಇದ್ದು. ಮೋಡ ಕವಿದ ವಾತಾವರಣ ಮತ್ತು ಇವುಗಳಿಗೆ ಪೂರಕವಾಗಿ ತುಂತುರು ಮಳೆಯಿಂದಾಗಿ ರೋಗ ಭಾದೆ ಉಲ್ಬಣವಾಗಲಿದೆ.

ಕಲಬುರಗಿ ಪ್ರವಾಹ; 73 ಗ್ರಾಮಗಳ 27,278 ಜನರ ರಕ್ಷಣೆ ಕಲಬುರಗಿ ಪ್ರವಾಹ; 73 ಗ್ರಾಮಗಳ 27,278 ಜನರ ರಕ್ಷಣೆ

ಈ ತರಹದ ರೋಗದ ಚಿಹ್ನೆಗಳು ಕಂಡು ಬಂದಾಗ ರೈತರು ಪ್ರತಿ ಲೀಟರ್ ನೀರಿನಲ್ಲಿ 1 ಗ್ರಾಂ ಕಾರ್ಬಂಡೈಜಿಮ್ ಬೆರೆಸಿ ಸಿಂಪಡಿಸಿಬೇಕು. ತೊಗರಿಯಲ್ಲಿ ಹೂ ಉದುರುವಿಕೆ ನಿಲ್ಲಿಸಲು ರೈತರು ಪ್ರತಿ ಎಕರೆಗೆ ಪಲ್ಸಮ್ಯಾಜಿಕ್ 2 ಕೆ.ಜಿ.ಯನ್ನು 200 ಲೀ. ನೀರಿನ ಬ್ಯಾರಲ್‍ನಲ್ಲಿ ಕಲಿಸಿ ಸಿಂಪಡಿಸಬೇಕು.

ಭೂಮಿಯ ತೇವಾಂಶ ರೋಗದ ತೀವ್ರತೆ ಮೇಲೆ ಪರಿಣಾಮ ಬೀರುತ್ತದೆ. ಚಳಿಯ ಅಂಶ ಹೆಚ್ಚಾದಲ್ಲಿ ಮಾತ್ರ ಹೊಸ ಮೊಗ್ಗು ಮತ್ತು ಹೂಗಳು ಹುಟ್ಟುವ ಪ್ರಕ್ರಿಯೆ ಉತ್ತಮವಾಗಬಹುದೆಂದು ಕೃಷಿ ವಿಜ್ಞಾನಿಗಳು ಹೇಳಿದ್ದಾರೆ.

English summary
Due to change in weather agriculture department tips for the farmers of Toor Dal.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X