ಅ.24 ರಿಂದ ಜಿಕೆವಿಕೆಯಲ್ಲಿ ಕೃಷಿ ಮೇಳ: ಈ ಬಾರಿ ಹಲವು ಹೊಸತು
ಬೆಂಗಳೂರು, ಅಕ್ಟೋಬರ್ 23: ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ) ಯಲ್ಲಿ ನಾಳೆ (ಗುರುವಾರ) ದಿಂದ ಕೃಷಿ ಮೇಳ ಆರಂಭವಾಗಲಿದೆ.
'ನಿಖರ ಕೃಷಿ-ಸುಸ್ಥಿರ ಅಭಿವೃದ್ಧಿ' ಧ್ಯೇಯ ಈ ಬಾರಿಯ ಕೃಷಿ ಮೇಳ ನಡೆಯಲಿದ್ದು, ಅಕ್ಟೋಬರ್ 24 ರಿಂದ 27 ರವರೆಗೆ ನಡೆಯಲಿದೆ. ಕೃಷಿ ಮೇಳವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ.
ಈ ಬಾರಿಯ ಕೃಷಿ ಮೇಳದಲ್ಲಿ ಹಲವು ಹೊಸತು ಇರಲಿವೆ ಎಂದು ಜಿಕೆವಿಕೆ ವಿವಿ ಕುಲಪತಿ ಎಸ್.ರಾಜೇಂದ್ರ ಪ್ರಸಾದ್ ಹೇಳಿದ್ದು, 'ಮೇಳದಲ್ಲಿ ಪ್ರಾತ್ಯಕ್ಷಿಕೆಗಳ ಮೂಲಕವೇ ಕೃಷಿಯ ನೂತನ ವಿಧಾನಗಳು ಹಾಗೂ ತಂತ್ರಜ್ಞಾನಗಳ ಬಗ್ಗೆ ನಿಖರ ಮಾಹಿತಿ ನೀಡಲಿದ್ದೇವೆ' ಎಂದರು.

ಮೇಳದಲ್ಲಿ ಕೃಷಿ ವಸ್ತು ಪ್ರದರ್ಶನಕ್ಕಾಗಿ 700ಕ್ಕೂ ಅಧಿಕ ಮಳಿಗೆಗಳುಇರಲಿವೆ. ಕೃಷಿ ವಿಶ್ವವಿದ್ಯಾನಿಲಯಗಳು, ಕೃಷಿ, ಜಲಾನಯನ ಅಭಿವೃದ್ಧಿ, ರೇಷ್ಮೆ, ಅರಣ್ಯ, ಪಶುಸಂಗೋಪನೆ, ತೋಟಗಾರಿಕೆ, ಕೃಷಿ ಮಾರುಕಟ್ಟೆ, ಮೀನುಗಾರಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ಹಾಲು ಮಹಾಮಂಡಳಿ, ಸ್ವ-ಸಹಾಯ ಸಂಘಗಳು ಭಾಗವಹಿಸಲಿವೆ. 12 ಲಕ್ಷ ಮಂದಿ ಭೇಟಿ ನೀಡುವ ನಿರೀಕ್ಷೆ ಇದೆ' ಎಂದು ಕುಲಪತಿಗಳು ಮಾಹಿತಿ ನೀಡಿದ್ದಾರೆ.
ಅನಾನುಕೂಲಗಳನ್ನು ತಪ್ಪಿಸಲು ಜಿಕೆವಿಕೆ ಪ್ರವೇಶ ದ್ವಾರದಿಂದ ಎರಡು ಉಚಿತ ಬಸ್ ವ್ಯವಸ್ಥೆ ಮಾಡಲಾಗಿದ್ದು, ವೇದಿಕೆ ಬಳಿಗೆ ಬರಲು ಇದು ಅನುಕೂಲಕರವಾಗಲಿದೆ. ರೈತರ ಸಂಚಾರಕ್ಕೆ ಬಗ್ಗೀಸ್ ಸೇವೆ, ರೈತರಿಗೆ ಉಚಿತ ಆರೋಗ್ಯ ತಪಾಸಣೆ, ಎರಡು ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿದೆ.
ಕೃಷಿ ಮೇಳದ ಸಂಪೂರ್ಣ ಮಾಹಿತಿ ಪಡೆಯಲು ಜಿಪಿಎಸ್ ಆಧರಿತ 'krishimela2019' ಮೊಬೈಲ್ ಆ್ಯಪ್ ಸಿದ್ಧಪಡಿಸಲಾಗಿದೆ. ರೈತರು ಹಾಗೂ ಮೇಳಕ್ಕೆ ಭೇಟಿ ನೀಡುವವರು ತಮ್ಮ ಮೊಬೈಲ್ ಮೂಲಕವೇ ಕೃಷಿ ಮೇಳದಲ್ಲಿ ಎಲ್ಲೆಲ್ಲಿ ಏನೇನಿದೆ? ಎಂಬುದರ ಮಾಹಿತಿ ಪಡೆದುಕೊಳ್ಳಬಹುದು. ಕನ್ನಡ ಹಾಗೂ ಇಂಗ್ಲಿಷ್ ಭಾಷೆಯಲ್ಲಿ ಮಾಹಿತಿ ಲಭ್ಯ ಎಂದು ಕುಲಪತಿಗಳು ತಿಳಿಸಿದರು.
-
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ












Click it and Unblock the Notifications