ಕೃಷಿ ಮೂಲಸೌಕರ್ಯಕ್ಕಾಗಿ ಎಐಎಫ್ನಿಂದ ₹ 30,000 ಕೋಟಿ ಕ್ರೂಢೀಕರಣ
ನವದೆಹಲಿ, ಜನವರಿ 23: ಕೃಷಿ ಮೂಲಸೌಕರ್ಯ ನಿಧಿ (AIF)ಯು ಆರಂಭವಾಗಿ ಎರಡೂವರೆ ವರ್ಷದಲ್ಲಿ ಕೃಷಿ ಮೂಲಸೌಕರ್ಯ ವಲಯದಲ್ಲಿನ ಯೋಜನೆಗಳ ಬಳಕೆಗೆಂದು ಸರಿಸುಮಾರು ರೂ.30,000 ಕೋಟಿಗೂ ಹೆಚ್ಚು ಹಣವನ್ನು ಸಂಗ್ರಹಿಸಿದೆ ಎಂದು ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ತಿಳಿಸಿದೆ.
ಕೃಷಿಯಲ್ಲಿ ಸುಗ್ಗಿಯ ನಂತರ ನಿರ್ವಹಣಾ ಸೌಲಭ್ಯಗಳ ರಚನೆಗಾಗಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಸುಲಭವಾಗಲೆಂದು ಈ ಅತ್ಯಂತ ಕಡಿಮೆ ಅವಧಿಯಲ್ಲಿ ಕೃಷಿ ಮೂಲಸೌಕರ್ಯ ನಿಧಿ (AIF)ಯನ್ನು 2020ರಲ್ಲಿ ಸ್ಥಾಪನೆ ಮಾಡಲಾಗಿದೆ. ಅಲ್ಲಿಂದ ಈ ವರೆಗೆ ಒಟ್ಟು 30,000 ಕೋಟಿ ರೂ. ಅಧಿಕ ಮೊತ್ತವನ್ನು ಕ್ರೋಢೀಕರಿಸಿದೆ. ಒಟ್ಟು ಈವರೆಗೆ ಈ ಯೋಜನೆಯಡಿ 15,000 ಕೋಟಿ ರೂಪಾಯಿ ಹಣ ನಿರ್ವಹಣೆಗೆಂದು ಮಂಜೂರಾಗಿದೆ ಎಂದು ಮಂಜೂರು ಮಾಡಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
ಈ ಎಐಎಫ್ ರೈತ ಉತ್ಪಾದಕ ಸಂಸ್ಥೆಗಳು, ರೈತರು, ಕೃಷಿ ಉದ್ಯಮಿಗಳು, ಸ್ವಸಹಾಯ ಗುಂಪುಗಳು ಮತ್ತು ಜಂಟಿ ಹೊಣೆಗಾರಿಕೆ ಸೇರಿದಂತೆ ಇನ್ನಿತರ ರೈತ ಗುಂಪುಗಳಿಗೆ ಸುಗ್ಗಿ ಕೊಯ್ಲಿನ ನಂತರದ ಅಗತ್ಯವಾದ ನಿರ್ವಹಣೆಯ ಮೂಲಸೌಕರ್ಯ ಒದಗಿಸುತ್ತದೆ. ಸಮುದಾಯ ಕೃಷಿ ಆಸ್ತಿ ನಿರ್ವಹಣೆಗೆ ಆರ್ಥಿಕ ನೆರವು ಒದಗಿಸುತ್ತದೆ. ಇದರಿಂದ ದೇಶದಲ್ಲಿ ಕೃಷಿ ವಲಯ ನಂಬಿರುವವರಿಗೆ ಸಾಕಷ್ಟು ಅನುಕೂಲವಾಗಲಿದೆ.

ಕೃಷಿಕರಿಗೆ ಹೆಚ್ಚು ಉಪಯುಕ್ತವಾಗಿರುವ ಕೃಷಿ ಮೂಲಸೌಕರ್ಯ ನಿಧಿ (AIF) ಕುರಿತು ಜಾಗೃತಿ ಮೂಡಿಸಲು ಕೇಂದ್ರ ಕೃಷಿ ಸಚಿವಾಲಯ ವಿವಿಧ ಸ್ಟೇಕ್ಹೋಲ್ಡರ್ ಜೊತೆಗೆ ಸೇರಿ ಅನೇಕ ಸಭೆ, ಸಮಾರಂಭ ಹಾಗೂ ಕಾರ್ಯಾಗಾರ ನಡೆಸುತ್ತಿದೆ.
ಶೇಕಡಾ 3ರಷ್ಟು ಬಡ್ಡಿ ಸಬ್ವೆನ್ಷನ್ ಮತ್ತು ಕ್ರೆಡಿಟ್ ಗ್ಯಾರಂಟಿ ಫಂಡ್ ಟ್ರಸ್ಟ್ ಫಾರ್ ಮೈಕ್ರೋ ಮತ್ತು ಸ್ಮಾಲ್ ಎಂಟರ್ಪ್ರೈಸಸ್ (CGTMSE) ನಡಿ 2 ಕೋಟಿ ರೂಪಾಯಿ ವರೆಗಿನ ಸಾಲ ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರದ ಇತರ ಯೋಜನೆಗಳ ಜೊತೆಗೆ ವಿವಿಧ ಸೌಲಭ್ಯಗಳ ಒದಗಿಸಲು ಈ ನಿಧಿ ಹಣಕಾಸಿನ ಬೆಂಬಲ ನೀಡಲಿದೆ.

ಸಚಿವಾಲಯದ ನೀಡಿದ ಅಂಕಿ ಅಂಶಗಳ ಪ್ರಕಾರ, ಈ ನಿಧಿ ಯೋಜನೆಯಡಿ 20,000 ಕ್ಕೂ ಹೆಚ್ಚು ಫಲಾನುಭವಿಗಳು ಇದರ ಲಾಭ ಪಡೆಯಲಿದ್ದಾರೆ ಎನ್ನಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications