ಹಣ್ಣು, ತರಕಾರಿಗಳ ಕೊರತೆ; ಕೃಷಿ ಸಚಿವ ಬಿ.ಸಿ.ಪಾಟೀಲ್ ಸಭೆ
ಬೆಂಗಳೂರು, ಏಪ್ರಿಲ್ 3: ರಾಜ್ಯದಲ್ಲಿ ಕೊರೊನಾ ವೈರಸ್ಸೋಂಕು ನಿಯಂತ್ರಣ ತುರ್ತು ಪರಿಸ್ಥಿತಿ ಇರುವುದರಿಂದ ಬೆಂಗಳೂರು ನಗರದ ನಾಗರಿಕರಿಗೆ ಅಗತ್ಯವಾಗಿರುವ ಹಣ್ಣು ತರಕಾರಿಗಳ ಕೊರತೆಯಾಗದಂತೆ ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಬಿಬಿಎಂಪಿ ಅಧಿಕಾರಿಗಳ ಜೊತೆ ಸಭೆ ನಡೆಸಿದರು.
ರಾಜ್ಯದಲ್ಲಿ ಜನತೆಗೆ ಲಾಕ್ಡೌನ್ ನಿಂದ ಅಗತ್ಯ ವಸ್ತುಗಳ ಪೂರೈಕೆಗಾಗಲಿ, ಖರೀದಿಗಾಗಲಿ ಕೊರತೆಯಾಗದಂತೆ ಸರ್ಕಾರ ದಿಟ್ಟ ಕ್ರಮ ಕೈಗೊಂಡಿದೆ. ಅಲ್ಲದೇ ಹಣ್ಣು ತರಕಾರಿಗಳ ಕೊರತೆಯಾಗದಂತೆ ನೇರ ಮಾರುಕಟ್ಟೆಗೂ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಬಿಸಿ ಪಾಟೀಲ್ ತಿಳಿಸಿದರು.
ಈ ನಿಟ್ಟಿನಲ್ಲಿ ಇಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಕಂದಾಯ ಸಚಿವರಾಗಿರುವ ಆರ್.ಅಶೋಕ್ ಅಧ್ಯಕ್ಷತೆಯಲ್ಲಿ ಬಿಬಿಎಂಪಿ ಮೇಯರ್ ಕೊಠಡಿಯಲ್ಲಿ ಸಭೆ ನಡೆಯಿತು.

ಸಭೆಯಲ್ಲಿ ನಗರದ ನಾಗರೀಕರಿಗೆ ಅತ್ಯವಶ್ಯಕ ಹಣ್ಣುತರಕಾರಿ ಸರಬರಾಜಿಗೆ ಯಾವುದೇ ಕೊರತೆಯಾಗದಂತೆ ಕ್ರಮಕೈಗೊಳ್ಳುವ ಬಗ್ಗೆ ಚರ್ಚಿಸಲಾಯಿತು ಎಂದು ತಿಳಿಸಿದರು.












Click it and Unblock the Notifications