ಡಿಕೆಶಿ ಹೇಳಿಕೆಗೆ ಕೃಷಿ ಸಚಿವ ಬಿ.ಸಿ ಪಾಟೀಲ್ ತಿರುಗೇಟು
ಚಿತ್ರದುರ್ಗ, ಏಪ್ರಿಲ್ 16: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಇಂತಹ ಸಂದರ್ಭದಲ್ಲಿ ರಾಜಕೀಯ ಮಾಡುತ್ತಾರೆಂದರೆ ಅದು ಈ ದೇಶದ ದುರಂತ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ತಿರುಗೇಟು ನೀಡಿದರು.
ಚಿತ್ರದುರ್ಗದಲ್ಲಿ ಮಾತನಾಡಿದ ಕೃಷಿ ಸಚಿವ ಬಿ.ಸಿ ಪಾಟೀಲ್, ""ಇದು ರಾಜಕೀಯ ಮಾಡುವ ಸಮಯ ಅಲ್ಲ, ಯುದ್ಧ ಮಾಡುವ ಸಮಯ. ಯುದ್ದ ಎಂದರೆ ಕೊರೊನಾ ವೈರಸ್ ವಿರುದ್ಧದ ಯುದ್ಧ'' ಎಂದರು.
ಕೊರೊನಾ ವೈರಸ್ ದೇಶಾದ್ಯಂತ ಅಟ್ಟಹಾಸ ಮೆರೆಯುತ್ತಿರುವ ಸಮಯದಲ್ಲಿ ರಾಜಕೀಯ ಹೇಳಿಕೆ ಕೊಡುತ್ತಾರೆಂದರೆ ದುರ್ದೈವ ಸಂಗತಿ. ರಾಜ್ಯ ಮತ್ತು ಕೇಂದ್ರ ಸರ್ಕಾರ ರೈತರ ಪರ ಏನು ಕೆಲಸ ಮಾಡಬೇಕೋ ಅದನ್ನು ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಗಂಗಾವತಿಯಲ್ಲಿ ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು 45 ಕೋಟಿ ರುಪಾಯಿ ಪರಿಹಾರ ನೀಡಿದ್ದಾರೆ. ರೈತರಿಗೆ ಮತ್ತು ಸಾಮಾನ್ಯರಿಗೆ ಅನುಕೂಲವಾಗಲೆಂದು ಉಚಿತ ಹಾಲು ಕೊಟ್ಟಿದ್ದಾರೆ ಎಂದು ಹೇಳಿದರು.
ಲಾಕ್ ಡೌನ್ ಇದ್ದರೂ ಕೃಷಿ ಚಟುವಟಿಕೆಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷರು ಕರ್ನಾಟಕದಲ್ಲಿ ಏನು ಬಿಟ್ಟಿಲ್ಲ. ಒಂದು ವರ್ಷ ಎರಡು ತಿಂಗಳು ಅವಧಿಯಲ್ಲಿ ಡಿ.ಕೆ.ಶಿವಕುಮಾರ್ ಎಲ್ಲ ದೋಚಿಕೊಂಡು ಹೋಗಿದ್ದಾರೆ ಎಂದು ಹರಿಹಾಯ್ದರು.
ರೈತರ ಬಗ್ಗೆ ಕೃಷಿ ಇಲಾಖೆ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದರು. ಅದಕ್ಕೆ ಇಂದು ಕೃಷಿ ಸಚಿವರು ಸಮಜಾಯಿಷಿ ನೀಡಿದರು. ಮುಖ್ಯಮಂತ್ರಿಗಳು ರೈತರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ರೈತರಿಗೆ ಸಬ್ಸಿಡಿ ಬಿತ್ತನೆ ಬೀಜ, ಗೊಬ್ಬರ ಕೊಡುತ್ತೇವೆ ಎಂದು ಭರವಸೆ ನೀಡಿದರು.
ಬಿಜೆಪಿ ಶಾಸಕರ ಕೋಮು ಸಂಘರ್ಷ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ಬಿ.ಸಿ ಪಾಟೀಲ್, ಯಾವ ಕೋಮು ಸಂಘರ್ಷ ಇಲ್ಲ, ಎಲ್ಲಿದೆ ಕೋಮು ಸಂಘರ್ಷ, ಇರೋದು ಒಂದೇ ಕೊರೊನಾ ಸಂಘರ್ಷ ಎಂದರು.
ಬೇರೆ ರಾಜ್ಯಗಳಿಗೆ ಕೊರೊನಾ ಹೋಲಿಸಿದರೆ ಕರ್ನಾಟಕ ಸೇಪ್ ಆಗಿದೆ. ಕರ್ನಾಟಕ ರಾಜ್ಯ ಸರ್ಕಾರವು ಕೊರೊನಾವನ್ನು ಕಂಟ್ರೋಲ್ ಮಾಡುತ್ತಿದೆ ಎಂದು ಚಿತ್ರದುರ್ಗದಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿಕೆ ನೀಡಿದರು.
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications