ಡಿಕೆಶಿ ಹೇಳಿಕೆಗೆ ಕೃಷಿ ಸಚಿವ ಬಿ.ಸಿ ಪಾಟೀಲ್ ತಿರುಗೇಟು
ಚಿತ್ರದುರ್ಗ, ಏಪ್ರಿಲ್ 16: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಇಂತಹ ಸಂದರ್ಭದಲ್ಲಿ ರಾಜಕೀಯ ಮಾಡುತ್ತಾರೆಂದರೆ ಅದು ಈ ದೇಶದ ದುರಂತ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ತಿರುಗೇಟು ನೀಡಿದರು.
ಚಿತ್ರದುರ್ಗದಲ್ಲಿ ಮಾತನಾಡಿದ ಕೃಷಿ ಸಚಿವ ಬಿ.ಸಿ ಪಾಟೀಲ್, ""ಇದು ರಾಜಕೀಯ ಮಾಡುವ ಸಮಯ ಅಲ್ಲ, ಯುದ್ಧ ಮಾಡುವ ಸಮಯ. ಯುದ್ದ ಎಂದರೆ ಕೊರೊನಾ ವೈರಸ್ ವಿರುದ್ಧದ ಯುದ್ಧ'' ಎಂದರು.
ಕೊರೊನಾ ವೈರಸ್ ದೇಶಾದ್ಯಂತ ಅಟ್ಟಹಾಸ ಮೆರೆಯುತ್ತಿರುವ ಸಮಯದಲ್ಲಿ ರಾಜಕೀಯ ಹೇಳಿಕೆ ಕೊಡುತ್ತಾರೆಂದರೆ ದುರ್ದೈವ ಸಂಗತಿ. ರಾಜ್ಯ ಮತ್ತು ಕೇಂದ್ರ ಸರ್ಕಾರ ರೈತರ ಪರ ಏನು ಕೆಲಸ ಮಾಡಬೇಕೋ ಅದನ್ನು ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಗಂಗಾವತಿಯಲ್ಲಿ ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು 45 ಕೋಟಿ ರುಪಾಯಿ ಪರಿಹಾರ ನೀಡಿದ್ದಾರೆ. ರೈತರಿಗೆ ಮತ್ತು ಸಾಮಾನ್ಯರಿಗೆ ಅನುಕೂಲವಾಗಲೆಂದು ಉಚಿತ ಹಾಲು ಕೊಟ್ಟಿದ್ದಾರೆ ಎಂದು ಹೇಳಿದರು.
ಲಾಕ್ ಡೌನ್ ಇದ್ದರೂ ಕೃಷಿ ಚಟುವಟಿಕೆಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷರು ಕರ್ನಾಟಕದಲ್ಲಿ ಏನು ಬಿಟ್ಟಿಲ್ಲ. ಒಂದು ವರ್ಷ ಎರಡು ತಿಂಗಳು ಅವಧಿಯಲ್ಲಿ ಡಿ.ಕೆ.ಶಿವಕುಮಾರ್ ಎಲ್ಲ ದೋಚಿಕೊಂಡು ಹೋಗಿದ್ದಾರೆ ಎಂದು ಹರಿಹಾಯ್ದರು.
ರೈತರ ಬಗ್ಗೆ ಕೃಷಿ ಇಲಾಖೆ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದರು. ಅದಕ್ಕೆ ಇಂದು ಕೃಷಿ ಸಚಿವರು ಸಮಜಾಯಿಷಿ ನೀಡಿದರು. ಮುಖ್ಯಮಂತ್ರಿಗಳು ರೈತರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ರೈತರಿಗೆ ಸಬ್ಸಿಡಿ ಬಿತ್ತನೆ ಬೀಜ, ಗೊಬ್ಬರ ಕೊಡುತ್ತೇವೆ ಎಂದು ಭರವಸೆ ನೀಡಿದರು.
ಬಿಜೆಪಿ ಶಾಸಕರ ಕೋಮು ಸಂಘರ್ಷ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ಬಿ.ಸಿ ಪಾಟೀಲ್, ಯಾವ ಕೋಮು ಸಂಘರ್ಷ ಇಲ್ಲ, ಎಲ್ಲಿದೆ ಕೋಮು ಸಂಘರ್ಷ, ಇರೋದು ಒಂದೇ ಕೊರೊನಾ ಸಂಘರ್ಷ ಎಂದರು.
ಬೇರೆ ರಾಜ್ಯಗಳಿಗೆ ಕೊರೊನಾ ಹೋಲಿಸಿದರೆ ಕರ್ನಾಟಕ ಸೇಪ್ ಆಗಿದೆ. ಕರ್ನಾಟಕ ರಾಜ್ಯ ಸರ್ಕಾರವು ಕೊರೊನಾವನ್ನು ಕಂಟ್ರೋಲ್ ಮಾಡುತ್ತಿದೆ ಎಂದು ಚಿತ್ರದುರ್ಗದಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿಕೆ ನೀಡಿದರು.
-
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ












Click it and Unblock the Notifications