ಚಿತ್ರದುರ್ಗ; ಕೃಷಿ ಸಚಿವರು ಭೇಟಿ ಕೊಟ್ಟ ರೈತ ಜ್ಞಾನೇಶ್ ತೋಟದ ವಿಶೇಷತೆ

ಚಿತ್ರದುರ್ಗ, ಆಗಸ್ಟ್ 30; ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಮಂಗಳವಾರ ಚಿತ್ರದುರ್ಗ ಪ್ರವಾಸ ಕೈಗೊಂಡಿದ್ದರು. ವಿವಿಧ ಕಾರ್ಯಕ್ರಮಗಳಲ್ಲಿ ಅವರು ಪಾಲ್ಗೊಂಡಿದ್ದರು. ಜಿಲ್ಲೆಯ ದೊಡ್ಡ ಸಿದ್ದವನಹಳ್ಳಿ ಗ್ರಾಮದ ರೈತ ಜ್ಞಾನೇಶ್ ತೋಟಕ್ಕೆ ಸಹ ಸಚಿವರು ಭೇಟಿ ನೀಡಿದ್ದರು.

ಚಿತ್ರದುರ್ಗ ಜಿಲ್ಲಾಧಿಕಾರಿ ದಿವ್ಯಪ್ರಭು, ಕೃಷಿ ನಿರ್ದೇಶಕ ಡಾ. ಜಿ. ಟಿ. ಪುತ್ರ, ಜಂಟಿ ಕೃಷಿ ನಿರ್ದೇಶಕ ಮಂಜುನಾಥ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾಗ್ಯಮ್ಮ, ತಹಶೀಲ್ದಾರ್ ನಾಗವೇಣಿ ಸೇರಿದಂತೆ ವಿವಿಧ ಅಧಿಕಾರಿಗಳು, ರೈತರು ಸಚಿವರ ಜೊತೆ ಇದ್ದರು. ಸಚಿವ ಎನ್. ಚಲುವರಾಯಸ್ವಾಮಿ ರೈತ ಜ್ಞಾನೇಶ ಅವರ ತೋಟದಲ್ಲಿ ಸುಮಾರು 45 ನಿಮಿಷಕ್ಕೂ ಅಧಿಕ ಸಮಯ ಕಾಲ ಕಳೆದು ಸಮಗ್ರ ಕೃಷಿ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಂಡರು. ಇದೇ ಸಂದರ್ಭದಲ್ಲಿ ಸಚಿವರು ತೋಟದಲ್ಲಿ ಸಾಂಕೇತಿಕವಾಗಿ ಗಿಡವನ್ನು ನೆಟ್ಟು ನೀರೆರೆದರು.

Agriculture Minister Cheluvarayaswamy Visits Chitradurga Farmer Gynesh Farm

ತೋಟದ ವಿಶೇಷತೆಗಳು; ಚಿತ್ರದುರ್ಗ ಜಿಲ್ಲೆಯ ದೊಡ್ಡ ಸಿದ್ದವನಹಳ್ಳಿ ಗ್ರಾಮದ ರೈತ ಜ್ಞಾನೇಶ್ ತೋಟದಲ್ಲಿ ಸಚಿವರು ನಿಂಬೆ, ಹಲಸು, ಪಪ್ಪಾಯ, ದಾಳಿಂಬೆ, ಕರಿಬೇವು, ನುಗ್ಗೆ, ದಾಳಿಂಬೆ, ಮಾವು, ಬಾಳೆ ಮುಂತಾದ ಬೆಳೆಗಳನ್ನು ವೀಕ್ಷಿಸಿದರು, ಸಮಗ್ರ ಬೇಸಾಯ ಪದ್ಧತಿಯಿಂದ ಆಗುವ ಅನುಕೂಲಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ದೇಸಿ ತಳಿಯ ಹಸುಗಳನ್ನು ಸಾಕಿ ಹೈನುಗಾರಿಕೆ ಮಾಡಿರುವುದು, ಜೇನು ಸಾಕಾಣಿಕೆ, ಸಾವಯವ ಕೃಷಿ ಪದ್ಧತಿಯ ಬಗ್ಗೆಯೂ ವೀಕ್ಷಣೆ ಮಾಡಿದರು. ಸಮಾನ ಮನಸ್ಕ 25 ರಿಂದ 30 ರೈತರು ಒಂದೆಡೆ ಸೇರಿ, ಪ್ರತಿ ಭಾನುವಾರ ಸಾವಯವ ಸಂತೆ ಮಾಡುವುದು, ಗುಣಮಟ್ಟದ ಬೆಳೆಗಳನ್ನು ನಿಗದಿತ ದರದಲ್ಲೇ ಮಾರಾಟ ಮಾಡಿ, ಲಾಭ ಗಳಿಸುತ್ತಿರುವ ಬಗ್ಗೆಯೂ ರೈತ ಜ್ಞಾನೇಶ್‌ರಿಂದ ಮಾಹಿತಿ ಪಡೆದು ಸಂತಸ ವ್ಯಕ್ತಪಡಿಸಿದರು.

ಬಳಿಕ ಮಾತನಾಡಿದ ಸಚಿವರು, "ಸಂಯೋಜಿತ ಸಮಗ್ರ ಕೃಷಿ ಪದ್ಧತಿ ಹಾಗೂ ಸಾವಯವ ಬೇಸಾಯ ಅಳವಡಿಕೆಯಿಂದ ಉತ್ತಮ ಆದಾಯ ದೊರೆತು ರೈತರಿಗೆ ಶಾಶ್ವತ ಆರ್ಥಿಕ ಭದ್ರತೆ ಸಿಗಲಿದ್ದು, ರೈತರು ಈ ನಿಟ್ಟಿನಲ್ಲಿ ಸಮಗ್ರ ಕೃಷಿ ಪದ್ಧತಿ ಅಳವಡಿಕೆಗೆ ಮುಂದಾಗಬೇಕು" ಎಂದರು.

"ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ಸಮಸ್ಯೆ ಇರುವ ಸಂದರ್ಭದಲ್ಲಿ ಭಾರತೀಯ ಕಿಸಾನ್ ಸಂಘ ದೇಸಿ ಹೆಸರಿನಲ್ಲಿ ಸಾವಯವ ಉತ್ಪನ್ನಗಳ ಬ್ರಾಂಡ್ ಸೃಷ್ಟಿಸಿ ಉತ್ತಮ ಬೇಡಿಕೆ ಪಡೆದಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತ ಪಡಸಿದರು. ಚಿತ್ರದುರ್ಗ ಅತ್ಯಂತ ಕಡಿಮೆ ಮಳೆ ಬೀಳುವ ಪ್ರದೇಶ. ರೈತರು ಆತ್ಮವಿಶ್ವಾಸ ಕಳೆದುಕೊಳ್ಳದೆ ಬದುಕು ಗಟ್ಟಿಗೊಳಿಸಬೇಕು. ತಾವು ಕೃಷಿ ಸಚಿವರಾದ ನಂತರ ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ ಅವರ ಗ್ರಾಮದಿಂದಲೇ ಮೊದಲ ಬಾರಿಗೆ ತಮ್ಮ ಜಿಲ್ಲಾ ಪ್ರವಾಸ, ಸಂವಾದ ಕಾರ್ಯಕ್ರಮ ಪ್ರಾರಂಭಿಸುತ್ತಿರುವುದು ಸ್ಮರಣೀಯ" ಎಂದರು.

"ಸಾವಯವ ಕೃಷಿಯಲ್ಲಿ ಸಾರ್ಥಕ ಬದುಕು ಕಟ್ಟಿಕೊಂಡಿರುವ ಕೃಷಿಕ ಜ್ಞಾನೇಶ್ ಎಲ್ಲರಿಗೂ ಪ್ರೇರಣಾ ಶಕ್ತಿ ಹಾಗೂ ಆದರ್ಶವಾಗಿದ್ದಾರೆ. ಸಮಗ್ರ ಕೃಷಿ ಪದ್ಧತಿಯು ದೊಡ್ಡ ದೊಡ್ಡ ಹಿಡುವಳಿದಾರರಿಗೆ ಸೂಕ್ತವಲ್ಲ, ಇದೇನಿದ್ದರೂ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಸೂಕ್ತವಾದುದು. ಯಾರು ಕಡಿಮೆ ಕೃಷಿ ಭೂಮಿ ಹೊಂದಿರುತ್ತಾರೆಯೋ ಅಂತಹ ರೈತರಿಗೆ ಸಮಗ್ರ ಕೃಷಿ ಪದ್ಧತಿ ಶಾಶ್ವತ ಆದಾಯ ತರಲಿದೆ. ಕೆಲವೊಮ್ಮೆ ತರಕಾರಿ ಬೆಳೆಗಳಿಗೆ ಉತ್ತಮ ಬೆಲೆ ದೊರೆತು ಒಳ್ಳೆಯ ಲಾಭ ಗಳಿಸಿದರೆ, ಇನ್ನೊಮ್ಮೆ ಮಾಡಿದ ಖರ್ಚು ಕೂಡ ದೊರೆಯದ ಪರಿಸ್ಥಿತಿ ಉಂಟಾಗುತ್ತದೆ" ಎಂದು ಹೇಳಿದರು.

"ಇಂತಹ ಪರಿಸ್ಥಿತಿಯ ನಡುವೆಯೂ ಜ್ಞಾನೇಶ ಅವರು ಗುಣಮಟ್ಟಕ್ಕೆ ಹಾಗೂ ಸಾವಯವ ಕೃಷಿಗೆ ಆದ್ಯತೆ ನೀಡಿ, ಒಳ್ಳೆಯ ಲಾಭ ಗಳಿಸಿರುವುದು ನಿಜಕ್ಕೂ ಶ್ಲಾಘನೀಯವಾಗಿದೆ. ಸಮಗ್ರ ಕೃಷಿ ವ್ಯವಸ್ಥೆಯು ನಿರಂತರ ಆದಾಯ ತರುವ ಮೂಲಕ, ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ನೆರವಾಗುತ್ತದೆ. ಈ ನಿಟ್ಟಿನಲ್ಲಿ ರೈತರು ಇಂತಹ ಪದ್ಧತಿಯನ್ನು ಅಳವಡಿಸಿಕೊಳ್ಳಲು ಮುಂದಾಗಬೇಕು, ಇತರೆ ರೈತರಿಗೂ ಈ ಬಗ್ಗೆ ಅರಿವು ಮೂಡಿಸಬೇಕು" ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಯೋಜನೆ ಮತ್ತು ಸಾಂಖ್ಯಿಕ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಮಾತನಾಡಿ, "ಉನ್ನತ ವ್ಯಾಸಂಗ ಮಾಡಿ, ಸರ್ಕಾರಿ ಉದ್ಯೋಗವನ್ನು ತೊರೆದು, ಕೃಷಿಯತ್ತ ಆಕರ್ಷಿತರಾಗಿ ಸಾಧನೆ ಮಾಡಿರುವ ರೈತ ಜ್ಞಾನೇಶ್ ಅವರು ಇತರ ರೈತರಿಗೆ ಮಾದರಿಯಾಗಿದ್ದಾರೆ. ಇವರು ಕೃಷಿ, ಜೇನು ಸಾಕಾಣಿಕೆ, ಹೈನುಗಾರಿಕೆ, ವಿವಿಧ ತೋಟಗಾರಿಕೆ ಬೆಳೆಗಳು, ಬೆಳೆಗಳ ಮೌಲ್ಯವರ್ಧನೆ ಹಾಗೂ ಮಾಡಿಕೊಂಡಿರುವ ಮಾರುಕಟ್ಟೆ ವ್ಯವಸ್ಥೆ ನಿಜಕ್ಕೂ ಇತರರಿಗೆ ಅನುಕರಣೀಯವಾಗಿದೆ" ಎಂದರು.

ಚಿತ್ರದುರ್ಗ ಶಾಸಕ ಕೆ. ಸಿ. ವೀರೇಂದ್ರ ಪಪ್ಪಿ ಮಾತನಾಡಿ, "ರೈತ ಜ್ಞಾನೇಶ್ ಅವರು ತಮ್ಮ ಬೆಳೆಗೆ ತಾವೇ ಗರಿಷ್ಟ ಮಾರಾಟ ದರವನ್ನು ನಿಗದಿ ಮಾಡಿಕೊಂಡು ಮಾರಾಟ ಮಾಡುತ್ತಾರೆ, ಗುಣಮಟ್ಟಕ್ಕೆ ಆದ್ಯತೆ ನೀಡುವ ಇವರು, ಕೇವಲ 3.5 ಎಕರೆಯಲ್ಲಿ ವರ್ಷಕ್ಕೆ ಖರ್ಚನ್ನು ತೆಗೆದು, ಸುಮಾರು 10 ಲಕ್ಷ ರೂ. ವರೆಗೂ ಲಾಭ ಮಾಡಿಕೊಳ್ಳುತ್ತಿದ್ದಾರೆ, ಇದು ಇತರೆ ರೈತರಿಗೆ ಮಾದರಿಯಾಗಿದೆ" ಎಂದು ಶ್ಲಾಘಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+