ಆಗ್ರೋ ಸ್ಟಾರ್ಟ್ಅಪ್ಗಳು ದೇಶದ ಅಭಿವೃದ್ಧಿಗೆ ಸಹಕಾರಿ: ಸಿಎಂ ಬೊಮ್ಮಾಯಿ
ಬೆಂಗಳೂರು, ಜುಲೈ 21 : ಆಗ್ರೋ ಸ್ಟಾರ್ಟ್ಅಪ್ಗಳು ದೇಶದ ಅಭಿವೃದ್ಧಿಗೆ ಸಹಕಾರಿಯಾಗಿವೆ. ಕೃಷಿ ಪದ್ಧತಿಗಳಿಗೆ ಸಂಬಂಧಿಸಿದ ಸ್ಟಾರ್ಟ್ಅಪ್ಗಳನ್ನು ಸ್ಥಾಪಿಸುವ ಚಿಂತನೆಯನ್ನು ಮಾಡಬಹುದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ ನೀಡಿದರು.
ಅವರು ಇಂದು ಬಿಡಬ್ಲ್ಯೂ ಬ್ಯುಸಿನೆಸ್ ವಲ್ರ್ಡ್ ಆಯೋಜಿಸಿದ್ದ ಯೂನಿಕಾರ್ನ್ ಶೃಂಗಸಭೆ ಮತ್ತು ಪ್ರಶಸ್ತಿ ಸಮಾರಂಭ-2022ರಲ್ಲಿ ಪಾಲ್ಗೊಂಡು ಮಾತನಾಡಿದರು.
ದೇಶದ ಬಹುಪಾಲು ಜನರು ಕೃಷಿಯನ್ನೇ ಅವಲಂಬಿಸಿದ್ದು, ಕೃಷಿ ಕ್ಷೇತ್ರದಲ್ಲಿ ನವೀನ ಕೃಷಿ ಉತ್ಪನ್ನಗಳು, ಯಂತ್ರೋಪಕರಣಗಳ, ಕೋಳಿಸಾಕಾಣಿಕೆ, ಮೀನುಗಾರಿಕೆ, ಕುರಿಸಾಕಾಣಿಕೆ, ಹೈನೋದ್ಯಮ, ಹೀಗೆ ಬಹಳಷ್ಟು ಅವಕಾಶಗಳಿವೆ. ಈ ಕ್ಷೇತ್ರಗಳನ್ನು ನವೋದ್ಯಮಿಗಳು ತಮ್ಮ ನಾವಿನ್ಯತೆಯ ಚಿಂತನೆಯಿಂದ ಅಭಿವೃದ್ಧಿಗೊಳಿಸಬಹುದು ಎಂದರು.

ಸ್ಟಾರ್ಟ್ಅಪ್ಗಳು ವಿಶ್ವದ ಭವಿಷ್ಯ:
ಬೆಂಗಳೂರು ಯೂನಿಕಾರ್ನ್, ಡೆಕಾಕಾರ್ನ್ ಸಂಸ್ಥೆಗಳಿಗೆ ಅತ್ಯಂತ ಸೂಕ್ತವಾಗಿದೆ. ನವೋದ್ಯಮ ಪ್ರಪಂಚದಲ್ಲಿ ಬಹಳಷ್ಟು ಬದಲಾವಣೆಗಳಾಗಿವೆ. ಯಾವುದೇ ರಂಗದಲ್ಲಿ ಯೂನಿಕಾರ್ನ್ಗಳು ಬರಬಹುದಾಗಿದೆ. ಅವಶ್ಯಕತೆಯೇ ಅವಿಷ್ಕಾರದ ಜೀವಾಳ. ಅವಿಷ್ಕಾರದ ಹಸಿವು ನಮ್ಮಲ್ಲಿರಬೇಕು. ಮನುಷ್ಯ ಬೆಳೆದಂತೆ ಅಗತ್ಯತೆಗಳು ಬೆಳೆದಿದ್ದು, ನಾಗರಿಕತೆಯೂ ಬೆಳೆದಿದೆ. ಆಧುನಿಕತೆಯ ನಾಗರಿಕತೆಗೆ ಒಗ್ಗಿಕೊಂಡಿರುವ ಜನರು ಡಿಜಿಟಲೀಕರಣವನ್ನು ತಮ್ಮ ದಿನನಿತ್ಯದ ಜೀವನದಲ್ಲಿ ಬಳಸುತ್ತಿದ್ದಾರೆ. ನಮ್ಮಲ್ಲೇನಿದೆ ಎಂಬುದು ನಾಗರಿಕತೆ , ನಾವೇನಾಗಿದ್ದೇವೆ ಎಂಬುದು ನಮ್ಮ ಸಂಸ್ಕೃತಿ. ಮಾನವೀಯ ಸ್ಪಂದನೆ ಹಾಗೂ ಸಾಮಾಜಿಕ ಕಳಕಳಿಯಂತಹ ಮೌಲ್ಯಗಳನ್ನು ಸ್ಟಾರ್ಟ್ಅಪ್ಗಳು ಹೊಂದಿರಬೇಕು. ಸ್ಟಾರ್ಟ್ಅಪ್ಗಳು ವಿಶ್ವದ ಭವಿಷ್ಯವಾಗಿದ್ದು, ಅದರ ಮೌಲ್ಯಗಳು ಸಮಾಜದ ಒಳಿತನ್ನು ಗುರಿಯಾಗಿಸಿಕೊಂಡಿರಬೇಕು. ಅವಿಷ್ಕಾರ, ಮೂಲಸೌಕರ್ಯ ಹಾಗೂ ಅಭಿವೃದ್ಧಿಯತ್ತ ದೇಶ ಮುನ್ನಡೆಯಬೇಕು ಎಂದರು.

ರಾಜ್ಯದಲ್ಲಿ ಸ್ಟಾರ್ಟ್ಅಪ್ಗಳ ಸ್ಥಾಪನೆಗೆ ಪೂರಕ ಪರಿಸರ:
ಬೆಂಗಳೂರು ಸ್ಟಾರ್ಟ್ಅಪ್ಗಳ ಸ್ಥಾಪನೆಯಲ್ಲಿ ಮುಂಚೂಣಿಯಲ್ಲಿರುವ ನಗರ. ಬೆಂಗಳೂರಿನಲ್ಲಿ 400 ಅಂತರರಾಷ್ಟ್ರೀಯ ಗುಣಮಟ್ಟದ ಆರ್ ಎಂಡ್ ಡಿ ಕೇಂದ್ರಗಳಿವೆ. ದೇಶದ ಯಾವುದೇ ನಗರದಲ್ಲಿ ಇಷ್ಟು ಸಂಖ್ಯೆಯ ಸಂಶೋಧನಾ ಕೇಂದ್ರಗಳಿಲ್ಲ. ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ನಡೆಸಿದ ಅವಿಷ್ಕಾರಗಳಿಂದಾಗಿ ಬೆಂಗಳೂರು ನಗರ ಇಂದು ಐಟಿಬಿಟಿ ಕ್ಷೇತ್ರವಾಗಿ ಬೆಳೆದಿದೆ. ಕೃಷಿಯಿಂದ ಹಿಡಿದು ಏರೋಸ್ಪೇಸ್ವರೆಗೆ, ಜೆನಿಟಿಕ್ಸ್ ನಿಂದ ಜೆನೋಮಾಟಿಕ್ಸ್ವರೆಗೆ ಸ್ಟಾರ್ಟ್ಅಪ್ಗಳು ಇಲ್ಲಿವೆ. ಗರಿಷ್ಟ ಸಂಖ್ಯೆಯ ಯೂನಿಕಾರ್ನ್ಗಳು ಹಾಗೂ 3 ಡೆಕಾಕಾರ್ನ್ಗಳು ಬೆಂಗಳೂರಿನಲ್ಲಿವೆ. ನಗರದಲ್ಲಿ ಸ್ಟಾರ್ಟ್ಅಪ್ಗಳಿಗೆ ಉತ್ತಮ ಪರಿಸರ, ನೀತಿಗಳಿವೆ. ಈಸ್ ಆಫ್ ಡೂಯಿಂಗ್ ಬಿಸನೆಸ್, ಐಟಿಬಿಟಿ ಪಾಲಿಸಿ, ಸೆಮಿಕಂಡಕ್ಟರ್ ನೀತಿ, ಸೆಮಿಕಂಡಕ್ಟರ್ ಉತ್ಪಾದನಾ ಘಟಕವನ್ನೂ ಶೀಘ್ರದಲ್ಲಿಯೇ ಸರ್ಕಾರ ನಿರ್ಮಿಸಲಿದೆ. ಕರ್ನಾಟಕ ನವೀಕರಿಸಬಹುದಾದ ಇಂಧನದ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದೆ. ಹೈಡ್ರೊಜನ್ ಇಂಧನ, ಸಮುದ್ರದಿಂದ ಅಮೋನಿಯಾ ಉತ್ಪಾದನಾ ಕಾರ್ಯವನ್ನೂ ಸರ್ಕಾರ ಕೈಗೆತ್ತಿಕೊಳ್ಳಲಿದೆ. ಸರ್ಕಾರದ ಈ ಎಲ್ಲ ಕ್ರಮಗಳು ರಾಜ್ಯದಲ್ಲಿ ಸ್ಟಾರ್ಟ್ಅಪ್ಗಳ ಸ್ಥಾಪನೆಗೆ ಪೂರಕವಾದ ಪರಿಸರವನ್ನು ನಿರ್ಮಿಸುತ್ತದೆ ಎಂದರು.
Recommended Video
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್











Click it and Unblock the Notifications